AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ದಿಲೀಪ್​ ಕುಮಾರ್​ ಪತ್ನಿ ಸೈರಾ ಬಾನು

ಸೈರಾ ಹಾಗೂ ದಿಲೀಪ್​ ಒಟ್ಟು 54 ವರ್ಷಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದಾರೆ. ಅನೇಕರಿಗೆ ಇವರ ದಾಂಪತ್ಯ ಮಾದರಿ ಆಗಿದೆ. ದಿಲೀಪ್​ ಮೃತಪಟ್ಟ ನಂತರದಲ್ಲಿ ಸೈರಾ ಆರೋಗ್ಯದಲ್ಲಿ ಏರುಪೇರಾಗಿತ್ತು.

ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ದಿಲೀಪ್​ ಕುಮಾರ್​ ಪತ್ನಿ ಸೈರಾ ಬಾನು
ದಿಲೀಪ್​ ಕುಮಾರ್​-ಸೈರಾ ಬಾನು
TV9 Web
| Edited By: |

Updated on: Sep 06, 2021 | 2:50 PM

Share

ಕೆಲ ತಿಂಗಳ ಹಿಂದೆ ನಟ ದಿಲೀಪ್​ ಕುಮಾರ್ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಅವರ​ ಪತ್ನಿ ಸೈರಾ ಬಾನು ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ವಾರ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ.

ಸೈರಾ ಹಾಗೂ ದಿಲೀಪ್​ ಒಟ್ಟು 54 ವರ್ಷಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದಾರೆ. ಅನೇಕರಿಗೆ ಇವರ ದಾಂಪತ್ಯ ಮಾದರಿ ಆಗಿದೆ. ದಿಲೀಪ್​ ಮೃತಪಟ್ಟ ನಂತರದಲ್ಲಿ ಸೈರಾ ಆರೋಗ್ಯದಲ್ಲಿ ಏರುಪೇರಾಗಿತ್ತು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರುವುದು ಅಭಿಮಾನಿಗಳಿಗೆ ರಿಲೀಫ್​ ನೀಡಿದೆ.

ಬಾಲಿವುಡ್​ನಲ್ಲಿ ದಶಕಗಳ ಕಾಲ ಸ್ಟಾರ್​ ಆಗಿ ಮೆರೆದ ದಿಲೀಪ್​ ಕುಮಾರ್ ಅವರು ಜು.7ರಂದು ನಿಧನರಾದರು. ಹಲವಾರು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಅವರ ಮೂಲ ಹೆಸರು ದಿಲೀಪ್​ ಕುಮಾರ್​ ಅಲ್ಲವೇ ಅಲ್ಲ. ಈಗ ಪಾಕಿಸ್ತಾನದಲ್ಲಿರುವ ಪೇಶಾವರದಲ್ಲಿ 1922ರಲ್ಲಿ ಜನಿಸಿದ ಅವರಿಗೆ ಕುಟುಂಬದವರು ಇಟ್ಟ ಹೆಸರು ಮೊಹಮ್ಮದ್​ ಯೂಸೂಫ್​ ಖಾನ್​. ಆದರೆ ಚಿತ್ರರಂಗಕ್ಕೆ ಬರುವಾಗ ಅವರು ದಿಲೀಪ್​ ಕುಮಾರ್​ ಎಂದು ಹೆಸರು ಬದಲಾಯಿಸಿಕೊಂಡರು. 1944ರಲ್ಲಿ ತೆರೆಕಂಡ ‘ಜ್ವಾರ್​ ಭಾಟ’ ದಿಲೀಪ್​ ನಟನೆಯ ಮೊದಲ ಸಿನಿಮಾ. ಆ ಚಿತ್ರದ ನಿರ್ಮಾಪಕಿ ದೇವಿಕಾ ರಾಣಿ ಅವರೇ ಯೂಸೂಫ್​ ಖಾನ್​ಗೆ ಹೆಸರು ಬದಲಾಯಿಸಿಕೊಳ್ಳುವ ಸಲಹೆ ನೀಡಿದ್ದರು.

ಮೊದಲ ಸಿನಿಮಾ ‘ಜ್ವಾರ್​ ಭಾಟಾ’ದಿಂದ ದಿಲೀಪ್​ ಕುಮಾರ್​ಗೆ ದೊಡ್ಡ ಯಶಸ್ಸು ಸಿಕ್ಕಿತ್ತು. ಅನೇಕ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ದಿಲೀಪ್​ ಅಭಿನಯ ಇಷ್ಟವಾಯಿತು. ಚಿತ್ರರಂಗಕ್ಕೆ ಕಾಲಿಟ್ಟ ಮೊದಲ ದಶಕದಲ್ಲಿ ದಿಲೀಪ್​ ಕುಮಾರ್​ ಸ್ಟಾರ್​ ಆದರು. ಎರಡನೇ ದಶಕದಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚಿದರು. ದೇವದಾಸ್​, ನಯಾ ದೌರ್​, ಮಧುಮತಿ, ಕೊಹಿನೂರ್​, ಮುಘಲ್​-ಏ-ಆಜಮ್​ ಮುಂತಾದ ಗಮನಾರ್ಹ ಚಿತ್ರಗಳಲ್ಲಿ ದಿಲೀಪ್​ ಕುಮಾರ್​ ನಟಿಸಿದರು. 1998ರಲ್ಲಿ ತೆರೆಕಂಡ ‘ಖಿಲಾ’ ದಿಲೀಪ್​ ನಟನೆಯ ಕೊನೇ ಸಿನಿಮಾ.

ಇದನ್ನೂ ಓದಿ: Saira Banu: ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಬಾನು ಆರೋಗ್ಯದಲ್ಲಿ ಚೇತರಿಕೆ; ಐಸಿಯುನಿಂದ ಡಿಸ್ಚಾರ್ಜ್

ನಟ ದಿಲೀಪ್​ ಕುಮಾರ್​ ಪತ್ನಿ ಸೈರಾ ಬಾನು ಆರೋಗ್ಯ ಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?