AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟ ಬಾಲಕಿಗೆ ಫ್ರೀ ಟಿಕೆಟ್ ನೀಡಿದ ಗಾಯಕ ದಿಲ್ಜಿತ್ ದೊಸಾಂಜ್; ವಿಡಿಯೋ ವೈರಲ್

ದೆಹಲಿಯಲ್ಲಿ ನಡೆದ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ 50,000 ಕ್ಕೂ ಹೆಚ್ಚು ಜನರು ಹಾಜರಿದ್ದರು. ಒಬ್ಬ ಬಾಲಕಿ ತನ್ನ ಮನೆಯ ಬಾಲ್ಕನಿಯಿಂದ ದಿಲ್ಜಿತ್ ಅವರನ್ನು ಜೋರಾಗಿ ಹಾಡಲು ಕೇಳಿಕೊಂಡ ವೀಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ದಿಲ್ಜಿತ್ ಅವರು ಆ ಬಾಲಕಿ ಮತ್ತು ಆಕೆಯ ಕುಟುಂಬಕ್ಕೆ ಉಚಿತ ಟಿಕೆಟ್‌ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಈ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪುಟ್ಟ ಬಾಲಕಿಗೆ ಫ್ರೀ ಟಿಕೆಟ್ ನೀಡಿದ ಗಾಯಕ ದಿಲ್ಜಿತ್ ದೊಸಾಂಜ್; ವಿಡಿಯೋ ವೈರಲ್
ಬಾಲಕಿ, ದಿಲ್ಜಿತ್ ದೋಸಾಂಜ್
ಮದನ್​ ಕುಮಾರ್​
|

Updated on: Oct 28, 2024 | 4:22 PM

Share

ಖ್ಯಾತ ಗಾಯಕ ಹಾಗೂ ನಟ ದಿಲ್ಜಿತ್ ದೊಸಾಂಜ್ ಅವರು ದೆಹಲಿಯಲ್ಲಿ ಸಂಗೀತ ಕಾರ್ಯಕ್ರಮ ನಡೆಸಿದ್ದಾರೆ. 50 ಸಾವಿರಕ್ಕೂ ಅಧಿಕ ಮಂದಿ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿದ್ದಾರೆ. ಆದರೆ ಇನ್ನೂ ಹಲವರಿಗೆ ಇದರಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಕೆಲವು ಅಭಿಮಾನಿಗಳು ದೂರದಲ್ಲೇ ನಿಂತು ಅವರ ಹಾಡುಗಳನ್ನು ಕೇಳಿ ಆನಂದಿಸಿದ್ದಾರೆ. ಆ ಪೈಕಿ ಪುಟ್ಟ ಬಾಲಕಿಯೊಬ್ಬಳ ವಿಡಿಯೋ ವೈರಲ್ ಆಗಿದೆ. ಮನೆಯ ಬಾಲ್ಕನಿಯಲ್ಲಿ ನಿಂತ ಈ ಬಾಲಕಿಯು ದಿಲ್ಜಿತ್ ದೊಸಾಂಜ್ ಅವರಿಗೆ ಒಂದು ಮನವಿ ಮಾಡಿದ್ದಾಳೆ. ಆಕೆಯ ಅಭಿಮಾನಕ್ಕೆ ಮನಸೋತ ದಿಲ್ಜಿತ್ ಅವರು ಫ್ರೀ ಟಿಕೆಟ್​ ನೀಡುವುದಾಗಿ ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದಾರೆ. ದೂರದಲ್ಲಿ ದಿಲ್ಜಿತ್ ದೊಸಾಂಜ್ ಅವರ ಕಾನ್ಸರ್ಟ್​ ನಡೆಯುತ್ತಿದೆ. ಮನೆಯ ಬಾಲ್ಕನಿಯಲ್ಲಿ ನಿಂತಿರುವ ಬಾಲಕಿಯು ‘ದಿಲ್ಜಿತ್ ಅಂಕಲ್.. ಸ್ವಲ್ಪ ಜೋರಾಗಿ ಹಾಡಿ.. ನನಗೆ ಸರಿಯಾಗಿ ಕೇಳಿಸುತ್ತಿಲ್ಲ’ ಎಂದು ಮುದ್ದಾಗಿ ಹೇಳಿದ್ದಾಳೆ. ವೈರಲ್ ಆಗಿರುವ ಈ ವಿಡಿಯೋ ದಿಲ್ಜಿತ್ ದೊಸಾಂಜ್ ಅವರ ಗಮನಕ್ಕೂ ಬಂದಿದೆ.

ಇದನ್ನೂ ಓದಿ: ಹೋಟೆಲ್ ಮಹಡಿಯಿಂದ ಬಿದ್ದು ಗಾಯಕ ಸಾವು, ಹಲವು ಅನುಮಾನ

ದಿಲ್ಜಿತ್ ದೊಸಾಂಜ್ ಅವರು ಈ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಆ ಪುಟ್ಟ ಬಾಲಕಿಯ ಮನವಿಗೆ ಅವರು ಮನಸೋತಿದ್ದಾರೆ. ‘ಬಾ ಮಗು.. ನಿನಗಾಗಿ ಮತ್ತು ನಿನ್ನ ಕುಟುಂಬದವರಿಗಾಗಿ ನನ್ನ ಬಳಿ ಟಿಕೆಟ್​ಗಳಿವೆ’ ಎಂದು ದಿಲ್ಜಿತ್ ದೊಸಾಂಜ್ ಅವರು ಕ್ಯಾಪ್ಷನ್​ ನೀಡಿದ್ದಾರೆ. ಅವರ ಈ ಗುಣಕ್ಕೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

ವೈರಲ್ ವಿಡಿಯೋ:

‘ಈ ರೀಲ್​ ಅನ್ನು ದಿಲ್ಜಿತ್ ದೊಸಾಂಜ್ ಅವರ ಸ್ಟೋರಿಯಲ್ಲಿ ನೋಡಿದಾಗ ನನಗೆ ರೋಮಾಂಚನ ಆಯಿತು’ ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ಪಂಜಾಬಿ ಮತ್ತು ಹಿಂದಿ ಚಿತ್ರರಂಗದಲ್ಲಿ ದಿಲ್ಜಿತ್ ದೊಸಾಂಜ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ನಟನೆ ಮತ್ತು ಗಾಯನದ ಮೂಲಕ ಅವರು ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರ ದೆಹಲಿ ಕಾನ್ಸರ್ಟ್​ ಸೂಪರ್​ ಹಿಟ್​ ಆಗಿದೆ. ಈ ಕಾನ್ಸರ್ಟ್​ನಲ್ಲಿ ದಿಲ್ಜಿತ್ ಅವರು ತ್ರಿವರ್ಣ ಧ್ವಜ ಹಿಡಿದಿದ್ದು ನೋಡಿ ಫ್ಯಾನ್ಸ್ ಇನ್ನಷ್ಟು ಥ್ರಿಲ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ