AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗಿ ಮಗು ಆಗಿರೋ ವಿಚಾರವನ್ನು ಎಲ್ಲರಿಂದ ಮುಚ್ಚಿಟ್ಟ ಖ್ಯಾತ ನಟ

ದಿಲ್ಜಿತ್ ಅವರು ಮದುವೆ ವಿಚಾರವನ್ನು ಎಲ್ಲಿಯೂ ರಿವೀಲ್ ಮಾಡಿಲ್ಲ. ತಮಗೆ ವಿವಾಹ ಆಗಿದೆ ಎಂದು ಅವರು ಯಾವಾಗಲೂ ಹೇಳಿಕೊಂಡಿಲ್ಲ. ಆದರೆ, ದಿಲ್ಜಿತ್ ಅವರಿಗೆ ಈಗಾಗಲೇ ಮದುವೆ ಆಗಿದೆ ಹಾಗೂ ಒಂದು ಮಗು ಇದೆ. ಇದನ್ನು ಅವರು ಅಭಿಮಾನಿಗಳಿಂದ ಮುಚ್ಚಿಟ್ಟಿದ್ದಾರೆ.

ಮದುವೆ ಆಗಿ ಮಗು ಆಗಿರೋ ವಿಚಾರವನ್ನು ಎಲ್ಲರಿಂದ ಮುಚ್ಚಿಟ್ಟ ಖ್ಯಾತ ನಟ
ಗುಡ್ ನ್ಯೂಸ್ ಟೀಂ
TV9 Web
| Edited By: |

Updated on: Apr 10, 2024 | 12:23 PM

Share

ಗಾಯಕ ಹಾಗೂ ನಟಿ ದಿಲ್ಜಿತ್ ದೋಸಾಂಜ್ (Diljit Dosanjh) ಅವರು ಖಾಸಗಿ ಜೀವನದ ವಿಚಾರವನ್ನು ಹೆಚ್ಚು ಮುಚ್ಚಿಡೋಕೆ ಬಯಸುತ್ತಾರೆ. ಅವರು ಇಷ್ಟು ವರ್ಷಗಳ ಕಾಲ ಕುಟುಂಬದ ವಿಚಾರವನ್ನು ಮುಚ್ಚಿಟ್ಟಿದ್ದರು. ಈಗ ಅವರ ಗೆಳೆಯನೋರ್ವ ಈ ಬಗ್ಗೆ ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ. ದಿಲ್ಜಿತ್ ಅವರಿಗೆ ಈಗಾಗಲೇ ಮದುವೆ ಆಗಿದೆ ಹಾಗೂ ಓರ್ವ ಮಗ ಕೂಡ ಇದ್ದಾನೆ. ಈ ವಿಚಾರ ಕೇಳಿ ಫ್ಯಾನ್ಸ್ ಅಚ್ಚರಿಗೊಂಡಿದ್ದಾರೆ.

ದಿಲ್ಜಿತ್ ಅವರು ಮದುವೆ ವಿಚಾರವನ್ನು ಎಲ್ಲಿಯೂ ರಿವೀಲ್ ಮಾಡಿಲ್ಲ. ತಮಗೆ ವಿವಾಹ ಆಗಿದೆ ಎಂದು ಅವರು ಯಾವಾಗಲೂ ಹೇಳಿಕೊಂಡಿಲ್ಲ. ಆದರೆ, ದಿಲ್ಜಿತ್ ಅವರಿಗೆ ಈಗಾಗಲೇ ಮದುವೆ ಆಗಿದೆ ಹಾಗೂ ಒಂದು ಮಗು ಇದೆ. ಇದನ್ನು ಅವರು ಅಭಿಮಾನಿಗಳಿಂದ ಮುಚ್ಚಿಟ್ಟಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

ದಿಲ್ಜಿತ್ ಅವರ ಪತ್ನಿ ಭಾರತ ಮೂಲದ ಅಮೆರಿಕ ಮಹಿಳೆ. ಈ ದಂಪತಿಗೆ ಮಗ ಇದ್ದಾನೆ. ಲುಧಿಯಾನಾದಲ್ಲಿ ದಿಲ್ಜಿತ್ ಕುಟುಂಬ ವಾಸವಾಗಿದೆ. ದಿಲ್ಜಿತ್ ಪತ್ನಿ ಹಾಗೂ ಮಗ ಅಮೆರಿಕದಲ್ಲಿ ವಾಸವಾಗಿದ್ದಾರೆ. ದಿಲ್ಜಿತ್ ಅವರು ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಜೊತೆ ಮಾತನಾಡಿದ್ದರು. ಈ ವೇಳೆ ಅವರು ಒಂದು ಅಚ್ಚರಿಯ ವಿಚಾರ ರಿವೀಲ್ ಮಾಡಿದ್ದರು. 11 ವರ್ಷ ಇದ್ದಾಗ ಗ್ರಾಮ ಬಿಟ್ಟು ಬರಬೇಕಾದ ಪರಿಸ್ಥಿತಿ ಅವರಿಗೆ ಬಂತು. ಇದರಿಂದ ಕುಟುಂಬದ ಜೊತೆ ಅವರಿಗೆ ಅಷ್ಟಾಗಿ ಬಾಂಧವ್ಯ ಬೆಳೆದಿಲ್ಲ.

ಇದನ್ನೂ ಓದಿ: ನಟ, ಗಾಯಕ ದಿಲ್ಜಿತ್​ ದೋಸಾಂಜ್​ ಹಾಸ್ಯಪ್ರಜ್ಞೆ ಅಭಿಮಾನಿಗಳು ಫಿದಾ: ಇಲ್ಲಿವೆ ಅವರ ಫನ್ನಿ ಪೋಸ್ಟ್​ಗಳು

‘ಗುಡ್ ನ್ಯೂಸ್’ ಸಿನಿಮಾ ಪ್ರಮೋಷನ್ ವೇಳೆ ಕಿಯಾರಾ ಅಡ್ವಾಣಿ ಅವರು ಅಚಾನಕ್ಕಾಗಿ ಈ ವಿಚಾರ ರಿವೀಲ್ ಮಾಡಿದ್ದರು. ಆದರೆ, ಇದನ್ನು ಯಾರೊಬ್ಬರೂ ಗಂಭೀರವಾಗಿ ಸ್ವೀಕರಿಸಿರಲಿಲ್ಲ. ‘ಗುಡ್​ ನ್ಯೂಸ್’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಹಾಗೂ ಕರೀನಾ ಕಪೂರ್ ಜೊತೆ ದಿಲ್ಜಿತ್ ಹಾಗೂ ಕಿಯಾರಾ ಕೂಡ ಬಣ್ಣ ಜಚ್ಚಿದ್ದರು. ‘ಸಿನಿಮಾದಲ್ಲಿ ನಟಿಸಿದ ನಾಲ್ಕು ಪ್ರಮುಖ ಕಲಾವಿದರ ಪೈಕಿ ಮೂವರಿಗೆ ಮಕ್ಕಳಿದ್ದಾರೆ. ಆದರೆ, ನನಗೆ ಮಾತ್ರ ಮಗು ಇಲ್ಲ’ ಎಂದು ಕಿಯಾರಾ ಹೇಳಿದ್ದರು. ಆ ಸಮಯದಲ್ಲಿ ಇದನ್ನು ಯಾರೂ ಅಷ್ಟಾಗಿ ಗಂಭೀರವಾಗಿ ಸ್ವೀಕರಿಸಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ