AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಿತ್ಯ ಧರ್ ಮೇಲೆ ಕೃತಿಚೌರ್ಯದ ಆರೋಪ ಮಾಡಿದ ನಿರ್ದೇಶಕನಿಗೆ ಲೀಗಲ್ ನೋಟಿಸ್?

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರದ ಮೇಲೆ ಕೃತಿಚೌರ್ಯದ ಆರೋಪ ಬಂದಿದೆ. ನಿರ್ದೇಶಕ ಸಂತೋಷ್ ಕುಮಾರ್ ಅವರು ಈ ವಿವಾದವನ್ನು ಶುರು ಮಾಡಿದ್ದಾರೆ. ಅವರಿಗೆ ನಿರ್ದೇಶಕ ಆದಿತ್ಯ ಧರ್ ತಂಡ ಲೀಗಲ್ ನೋಟಿಸ್ ಕಳಿಸಿದೆ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಆಧಿತ್ಯ ಧರ್ ಮೇಲೆ ಕೃತಿಚೌರ್ಯದ ಆರೋಪ ಮಾಡಿದ ನಿರ್ದೇಶಕನಿಗೆ ಲೀಗಲ್ ನೋಟಿಸ್?
Santosh Kumar Rs, Aditya Dhar
ಮದನ್​ ಕುಮಾರ್​
|

Updated on: Apr 03, 2026 | 4:54 PM

Share

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಮತ್ತು ನಿರ್ದೇಶಕ ಸಂತೋಷ್ ಕುಮಾರ್ ಆರ್.ಎಸ್. (Santosh Kumar RS) ನಡುವೆ ಈಗ ಕಾನೂನು ಸಮರ ಶುರುವಾಗಿದೆ. ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೇಂಜ್’ ಸಿನಿಮಾ ತಂಡದ ಮೇಲೆ ಸಂತೋಷ್ ಕುಮಾರ್ ಅವರು ಆರೋಪ ಹೊರಿಸಿದ್ದಾರೆ. ತಮ್ಮ ಚಿತ್ರಕಥೆಯನ್ನು ನಕಲು (Plagiarism) ಮಾಡಿ ‘ಧುರಂಧರ್ 2’ ಮಾಡಲಾಗಿದೆ ಎಂದು ಸಂತೋಷ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಸಂತೋಷ್ ಕುಮಾರ್ ವಿರುದ್ಧ ಆದಿತ್ಯ ಧರ್ (Aditya Dhar) ಅವರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಸಂತೋಷ್ ಕುಮಾರ್ ಪ್ರಕಾರ, ಅವರು 2023ರಲ್ಲಿ ನೋಂದಾಯಿಸಿದ ‘ಡಿ ಸಾಹೇಬ್’ ಎಂಬ ಚಿತ್ರಕಥೆಯನ್ನು ಆದಿತ್ಯ ಧರ್ ತಂಡ ಕೃತಿಚೌರ್ಯ ಮಾಡಿದೆ. ‘ನನ್ನ ಪ್ರಾಜೆಕ್ಟ್ ಮತ್ತು ಸ್ಕ್ರಿಪ್ಟ್ ಅನ್ನು ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ. ನನ್ನ ಬಳಿ ಚಿತ್ರಕಥೆ ಬರಹಗಾರರ ಸಂಘದ ಎಲ್ಲ ದಾಖಲೆಗಳಿವೆ’ ಎಂದು ಸಂತೋಷ್ ಹೇಳಿದ್ದಾರೆ. ಅವರ ಹೇಳಿಕೆ ದೊಡ್ಡ ಸುದ್ದಿ ಆಗಿದೆ.

‘ಧುರಂಧರ್ ಚಿತ್ರದ ಮುಖ್ಯ ಪಾತ್ರ ಮತ್ತು ಕಥೆಯ ಎಳೆ ನನ್ನ ಸ್ಕ್ರಿಪ್ಟ್‌ನಿಂದ ಬಂದಿದೆ. ಒಬ್ಬ ಮಾಜಿ ಸೇನಾಧಿಕಾರಿಯ ಮಗ ತನ್ನ ಕುಟುಂಬದ ಮೇಲಿನ ದಾಳಿಗೆ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನಕ್ಕೆ ರಾ ಏಜೆಂಟ್ ಆಗಿ ಹೋಗುವ ಕಥೆ ತನ್ನದಾಗಿತ್ತು. ಆದಿತ್ಯ ಧರ್ ನನ್ನ ಕಥೆಯ ಮುಖ್ಯ ಸಾಲುಗಳನ್ನು ತೆಗೆದುಕೊಂಡು ಅದಕ್ಕೆ ರಾಜಕೀಯ ಪ್ರೊಪಗಾಂಡದ ಬಣ್ಣ ಹಚ್ಚಿದ್ದಾರೆ’ ಎಂಬುದು ಸಂತೋಷ್ ಆರೋಪ.

ಈ ಆರೋಪಗಳನ್ನು ಆದಿತ್ಯ ಧರ್ ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಆದಿತ್ಯ ಅವರ ಕಾನೂನು ತಂಡವು ಈಗಾಗಲೇ ಸಂತೋಷ್ ಕುಮಾರ್ ಅವರಿಗೆ ನೋಟಿಸ್ ನೀಡಿದ್ದು, ಸುಳ್ಳು ಆರೋಪಗಳನ್ನು ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದೆ. ‘ಸಂತೋಷ್ ಅವರು ಪ್ರಚಾರಕ್ಕಾಗಿ ಇಂತಹ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಆದಿತ್ಯ ಧರ್ ಆಪ್ತ ಮೂಲಗಳು ತಿಳಿಸಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ಶಿವಣ್ಣ ಬೆನ್ನು ತಟ್ಟಿದ್ದಕ್ಕೆ ಖುಷಿಯಾದ ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧರ್

ಆದಿತ್ಯ ಧರ್ ತಂಡದ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿರುವ ಸಂತೋಷ್, ‘ಅವರು ನನಗೆ ಕಳುಹಿಸಿರುವುದು ನೋಟಿಸ್ ಅಲ್ಲ. ಕೇವಲ ಒಂದು ಮೇಲ್ ಅಷ್ಟೇ. ನನ್ನನ್ನು ಬೆದರಿಸಲು ಮತ್ತು ನನ್ನ ಬಾಯಿ ಮುಚ್ಚಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ನಾನು ಈ ಪ್ರಕರಣವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುತ್ತಿದ್ದೇನೆ. ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ವಿರುದ್ಧ ಕೇಸ್ ದಾಖಲಿಸುತ್ತೇನೆ’ ಎಂದು ಸವಾಲು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ