Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಚಿತ್ರ ಆಸ್ಕರ್​ಗೆ ಹೋಗಬೇಕು ಎಂದ ನಿರ್ದೇಶಕ ಅಟ್ಲಿ; ಟ್ರೋಲ್​ ಮಾಡಿದ ನೆಟ್ಟಿಗರು

ಭಾರತದ ಸಿನಿಮಾಗಳು ಆಸ್ಕರ್​ ಪ್ರಶಸ್ತಿ ಪಡೆಯುವುದು ಈಗ ಕೇವಲ ಕನಸಾಗಿ ಉಳಿದಿಲ್ಲ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ಅವಾರ್ಡ್​ ಗೆದ್ದ ಬಳಿಕ ಬೇರೆ ಚಿತ್ರತಂಡಗಳು ಕೂಡ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯಬೇಕು ಎಂದು ಪ್ರಯತ್ನ ಮಾಡುತ್ತಿವೆ. ಆ ಪೈಕಿ ‘ಜವಾನ್​’ ಚಿತ್ರತಂಡ ಕೂಡ ಇದೆ. ಈ ಬಗ್ಗೆ ನಿರ್ದೇಶಕ ಅಟ್ಲಿ ಮಾತನಾಡಿದ್ದಾರೆ.

‘ಜವಾನ್​’ ಚಿತ್ರ ಆಸ್ಕರ್​ಗೆ ಹೋಗಬೇಕು ಎಂದ ನಿರ್ದೇಶಕ ಅಟ್ಲಿ; ಟ್ರೋಲ್​ ಮಾಡಿದ ನೆಟ್ಟಿಗರು
ಅಟ್ಲಿ, ಶಾರುಖ್​ ಖಾನ್​
Follow us
ಮದನ್​ ಕುಮಾರ್​
|

Updated on: Sep 19, 2023 | 12:12 PM

ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ (Jawan Movie) ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಯಶಸ್ಸು ಕಂಡಿದೆ. ನಿರ್ದೇಶಕ ಅಟ್ಲಿ (Atlee) ಅವರಿಗೆ ಬಾಲಿವುಡ್​ನಲ್ಲಿ ಈ ಸಿನಿಮಾದಿಂದ ಬೇಡಿಕೆ ಸೃಷ್ಟಿ ಆಗಿದೆ. ಶಾರುಖ್​ ಖಾನ್​ ಅವರಿಗೆ ಈ ವರ್ಷ ಸಿಕ್ಕಿರುವ ಎರಡನೇ ಗೆಲುವು ಇದು. ಈ ವರ್ಷ ಆರಂಭದಲ್ಲಿ ‘ಪಠಾಣ್​’ ಚಿತ್ರ ಗೆದ್ದಿತ್ತು. ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ಆ ಸಿನಿಮಾ ಜಯಭೇರಿ ಬಾರಿಸಿತ್ತು. ಈಗ ‘ಜವಾನ್​’ ಕೂಡ ಸಾವಿರ ಕೋಟಿ ರೂಪಾಯಿ ಗಳಿಸುವತ್ತ ಮುನ್ನುಗ್ಗುತ್ತಿದೆ. ಈ ಸಿನಿಮಾವನ್ನು ಆಸ್ಕರ್​ (Oscar) ಸ್ಪರ್ಧೆಗೆ ಕಳಿಸಬೇಕು ಎಂದು ನಿರ್ದೇಶಕ ಅಟ್ಲಿ ಹೇಳಿದ್ದಾರೆ. ಆದರೆ ಈ ಮಾತನ್ನು ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ.

ಭಾರತದ ಸಿನಿಮಾಗಳು ಆಸ್ಕರ್​ ಪ್ರಶಸ್ತಿ ಪಡೆಯುವುದು ಈಗ ಕೇವಲ ಕನಸಾಗಿ ಉಳಿದಿಲ್ಲ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ಅವಾರ್ಡ್​ ಗೆದ್ದ ಬಳಿಕ ಬೇರೆ ಚಿತ್ರತಂಡಗಳು ಕೂಡ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯಬೇಕು ಎಂದು ಪ್ರಯತ್ನ ಮಾಡುತ್ತಿವೆ. ಆ ಪೈಕಿ ‘ಜವಾನ್​’ ಚಿತ್ರತಂಡ ಕೂಡ ಇದೆ. ಈ ಬಗ್ಗೆ ನಿರ್ದೇಶಕ ಅಟ್ಲಿ ಅವರು ಮಾತನಾಡಿದ್ದಾರೆ. ‘ಇ-ಟೈಮ್ಸ್​’ಗೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಆಲೋಚನೆ ಏನು ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ‘ಜವಾನ್​’ ಸಿನಿಮಾದಲ್ಲಿ ಶಾರುಖ್​ ಜೊತೆ ಆ್ಯಕ್ಷನ್​ ಮೆರೆದ ಪ್ರಿಯಾಮಣಿ

‘ಎಲ್ಲವೂ ಅಂದುಕೊಂಡಂತೆ ಆದರೆ ಜವಾನ್​ ಸಿನಿಮಾ ಖಂಡಿತವಾಗಿ ಆಸ್ಕರ್​ ಸ್ಪರ್ಧೆಗೆ ಹೋಗಬೇಕು. ಚಿತ್ರರಂಗದಲ್ಲಿ ಇರುವ ಎಲ್ಲರೂ ಜಾಗತಿಕ ಮಟ್ಟದ ಮೇಲೆ ಗಮನ ಹರಿಸಬೇಕು. ಏನಾಗುತ್ತದೋ ನೋಡೋಣ. ಶಾರುಖ್​ ಖಾನ್​ ಕೂಡ ಈ ಸಂದರ್ಶನ ನೋಡುತ್ತಾರೆ ಎನಿಸುತ್ತದೆ. ನಮ್ಮ ಸಿನಿಮಾವನ್ನು ಆಸ್ಕರ್​ಗೆ ಕಳಿಸೋಣವೇ ಎಂದು ಅವರನ್ನು ನಾನು ಕೇಳುತ್ತೇನೆ’ ಎಂದಿದ್ದಾರೆ ಅಟ್ಲಿ.

ಇದನ್ನೂ ಓದಿ: Jawan Movie Review: ಶಾರುಖ್​ ಖಾನ್​ ಅಭಿಮಾನಿಗಳಿಗಾಗಿ ಅಟ್ಲಿ ಮಾಡಿದ ಮಿಕ್ಸ್​ ಮಸಾಲಾ ಸಿನಿಮಾ

ನಿರ್ದೇಶಕ ಅಟ್ಲಿ ಅವರ ಈ ಮಾತಿಗೆ ಹಿಂದಿ ಸಿನಿಮಾ ಪ್ರೇಕ್ಷಕರು ಬೆಂಬಲ ಸೂಚಿಸಿದ್ದಾರೆ. ‘ಜವಾನ್​’ ಸಿನಿಮಾಗೆ ಆಸ್ಕರ್​ ಗೆಲ್ಲುವ ಅರ್ಹತೆ ಇದೆ ಎಂದು ಶಾರುಖ್​ ಖಾನ್​ ಅಭಿಮಾನಿಗಳು ಹೇಳುತ್ತಿದ್ದಾರೆ. ಆದರೆ ದಕ್ಷಿಣ ಭಾರತದ ಮಂದಿಗೆ ಈ ವಿಚಾರದಲ್ಲಿ ಸಹಮತ ಇಲ್ಲ. ಯಾಕೆಂದರೆ, ಅನೇಕ ಸಿನಿಮಾಗಳನ್ನು ಮಿಕ್ಸ್​ ಮಾಡಿ ‘ಜವಾನ್​’ ಚಿತ್ರ ಮಾಡಲಾಗಿದೆ ಎಂಬುದು ಬಹುತೇಕರ ಅಭಿಪ್ರಾಯ. ಹಾಗಾಗಿ, ‘ಇದನ್ನು ಅತ್ಯುತ್ತಮ​ ಕಾಪಿ ಪೇಸ್ಟ್​ ವಿಭಾಗದಲ್ಲಿ ಸ್ಪರ್ಧೆಗೆ ಕಳಿಸಬಹುದು’ ಎಂದು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ಅದೇನೇ ಇರಲಿ, ‘ಜವಾನ್​’ ಸಿನಿಮಾ ಗೆದ್ದು ಬೀಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ ಮುಂತಾದ ಕಲಾವಿದರ ಖ್ಯಾತಿ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?