AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ಚಿತ್ರ ಆಸ್ಕರ್​ಗೆ ಹೋಗಬೇಕು ಎಂದ ನಿರ್ದೇಶಕ ಅಟ್ಲಿ; ಟ್ರೋಲ್​ ಮಾಡಿದ ನೆಟ್ಟಿಗರು

ಭಾರತದ ಸಿನಿಮಾಗಳು ಆಸ್ಕರ್​ ಪ್ರಶಸ್ತಿ ಪಡೆಯುವುದು ಈಗ ಕೇವಲ ಕನಸಾಗಿ ಉಳಿದಿಲ್ಲ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ಅವಾರ್ಡ್​ ಗೆದ್ದ ಬಳಿಕ ಬೇರೆ ಚಿತ್ರತಂಡಗಳು ಕೂಡ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯಬೇಕು ಎಂದು ಪ್ರಯತ್ನ ಮಾಡುತ್ತಿವೆ. ಆ ಪೈಕಿ ‘ಜವಾನ್​’ ಚಿತ್ರತಂಡ ಕೂಡ ಇದೆ. ಈ ಬಗ್ಗೆ ನಿರ್ದೇಶಕ ಅಟ್ಲಿ ಮಾತನಾಡಿದ್ದಾರೆ.

‘ಜವಾನ್​’ ಚಿತ್ರ ಆಸ್ಕರ್​ಗೆ ಹೋಗಬೇಕು ಎಂದ ನಿರ್ದೇಶಕ ಅಟ್ಲಿ; ಟ್ರೋಲ್​ ಮಾಡಿದ ನೆಟ್ಟಿಗರು
ಅಟ್ಲಿ, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Sep 19, 2023 | 12:12 PM

Share

ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ (Jawan Movie) ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಯಶಸ್ಸು ಕಂಡಿದೆ. ನಿರ್ದೇಶಕ ಅಟ್ಲಿ (Atlee) ಅವರಿಗೆ ಬಾಲಿವುಡ್​ನಲ್ಲಿ ಈ ಸಿನಿಮಾದಿಂದ ಬೇಡಿಕೆ ಸೃಷ್ಟಿ ಆಗಿದೆ. ಶಾರುಖ್​ ಖಾನ್​ ಅವರಿಗೆ ಈ ವರ್ಷ ಸಿಕ್ಕಿರುವ ಎರಡನೇ ಗೆಲುವು ಇದು. ಈ ವರ್ಷ ಆರಂಭದಲ್ಲಿ ‘ಪಠಾಣ್​’ ಚಿತ್ರ ಗೆದ್ದಿತ್ತು. ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ಆ ಸಿನಿಮಾ ಜಯಭೇರಿ ಬಾರಿಸಿತ್ತು. ಈಗ ‘ಜವಾನ್​’ ಕೂಡ ಸಾವಿರ ಕೋಟಿ ರೂಪಾಯಿ ಗಳಿಸುವತ್ತ ಮುನ್ನುಗ್ಗುತ್ತಿದೆ. ಈ ಸಿನಿಮಾವನ್ನು ಆಸ್ಕರ್​ (Oscar) ಸ್ಪರ್ಧೆಗೆ ಕಳಿಸಬೇಕು ಎಂದು ನಿರ್ದೇಶಕ ಅಟ್ಲಿ ಹೇಳಿದ್ದಾರೆ. ಆದರೆ ಈ ಮಾತನ್ನು ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ.

ಭಾರತದ ಸಿನಿಮಾಗಳು ಆಸ್ಕರ್​ ಪ್ರಶಸ್ತಿ ಪಡೆಯುವುದು ಈಗ ಕೇವಲ ಕನಸಾಗಿ ಉಳಿದಿಲ್ಲ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ಅವಾರ್ಡ್​ ಗೆದ್ದ ಬಳಿಕ ಬೇರೆ ಚಿತ್ರತಂಡಗಳು ಕೂಡ ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯಬೇಕು ಎಂದು ಪ್ರಯತ್ನ ಮಾಡುತ್ತಿವೆ. ಆ ಪೈಕಿ ‘ಜವಾನ್​’ ಚಿತ್ರತಂಡ ಕೂಡ ಇದೆ. ಈ ಬಗ್ಗೆ ನಿರ್ದೇಶಕ ಅಟ್ಲಿ ಅವರು ಮಾತನಾಡಿದ್ದಾರೆ. ‘ಇ-ಟೈಮ್ಸ್​’ಗೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಆಲೋಚನೆ ಏನು ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ‘ಜವಾನ್​’ ಸಿನಿಮಾದಲ್ಲಿ ಶಾರುಖ್​ ಜೊತೆ ಆ್ಯಕ್ಷನ್​ ಮೆರೆದ ಪ್ರಿಯಾಮಣಿ

‘ಎಲ್ಲವೂ ಅಂದುಕೊಂಡಂತೆ ಆದರೆ ಜವಾನ್​ ಸಿನಿಮಾ ಖಂಡಿತವಾಗಿ ಆಸ್ಕರ್​ ಸ್ಪರ್ಧೆಗೆ ಹೋಗಬೇಕು. ಚಿತ್ರರಂಗದಲ್ಲಿ ಇರುವ ಎಲ್ಲರೂ ಜಾಗತಿಕ ಮಟ್ಟದ ಮೇಲೆ ಗಮನ ಹರಿಸಬೇಕು. ಏನಾಗುತ್ತದೋ ನೋಡೋಣ. ಶಾರುಖ್​ ಖಾನ್​ ಕೂಡ ಈ ಸಂದರ್ಶನ ನೋಡುತ್ತಾರೆ ಎನಿಸುತ್ತದೆ. ನಮ್ಮ ಸಿನಿಮಾವನ್ನು ಆಸ್ಕರ್​ಗೆ ಕಳಿಸೋಣವೇ ಎಂದು ಅವರನ್ನು ನಾನು ಕೇಳುತ್ತೇನೆ’ ಎಂದಿದ್ದಾರೆ ಅಟ್ಲಿ.

ಇದನ್ನೂ ಓದಿ: Jawan Movie Review: ಶಾರುಖ್​ ಖಾನ್​ ಅಭಿಮಾನಿಗಳಿಗಾಗಿ ಅಟ್ಲಿ ಮಾಡಿದ ಮಿಕ್ಸ್​ ಮಸಾಲಾ ಸಿನಿಮಾ

ನಿರ್ದೇಶಕ ಅಟ್ಲಿ ಅವರ ಈ ಮಾತಿಗೆ ಹಿಂದಿ ಸಿನಿಮಾ ಪ್ರೇಕ್ಷಕರು ಬೆಂಬಲ ಸೂಚಿಸಿದ್ದಾರೆ. ‘ಜವಾನ್​’ ಸಿನಿಮಾಗೆ ಆಸ್ಕರ್​ ಗೆಲ್ಲುವ ಅರ್ಹತೆ ಇದೆ ಎಂದು ಶಾರುಖ್​ ಖಾನ್​ ಅಭಿಮಾನಿಗಳು ಹೇಳುತ್ತಿದ್ದಾರೆ. ಆದರೆ ದಕ್ಷಿಣ ಭಾರತದ ಮಂದಿಗೆ ಈ ವಿಚಾರದಲ್ಲಿ ಸಹಮತ ಇಲ್ಲ. ಯಾಕೆಂದರೆ, ಅನೇಕ ಸಿನಿಮಾಗಳನ್ನು ಮಿಕ್ಸ್​ ಮಾಡಿ ‘ಜವಾನ್​’ ಚಿತ್ರ ಮಾಡಲಾಗಿದೆ ಎಂಬುದು ಬಹುತೇಕರ ಅಭಿಪ್ರಾಯ. ಹಾಗಾಗಿ, ‘ಇದನ್ನು ಅತ್ಯುತ್ತಮ​ ಕಾಪಿ ಪೇಸ್ಟ್​ ವಿಭಾಗದಲ್ಲಿ ಸ್ಪರ್ಧೆಗೆ ಕಳಿಸಬಹುದು’ ಎಂದು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ಅದೇನೇ ಇರಲಿ, ‘ಜವಾನ್​’ ಸಿನಿಮಾ ಗೆದ್ದು ಬೀಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ ಮುಂತಾದ ಕಲಾವಿದರ ಖ್ಯಾತಿ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ