AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ವ್ಯಾಕ್ಸಿನ್​ ವಾರ್​’ ಚಿತ್ರ ಕೊವಿಡ್​ ಬಗ್ಗೆ ಅಲ್ಲ; ಹಾಗಾದ್ರೆ ಇದ್ರಲ್ಲಿ ಏನಿದೆ? ಉತ್ತರಿಸಿದ ವಿವೇಕ್​ ಅಗ್ನಿಹೋತ್ರಿ

ವ್ಯಾಕ್ಸಿನ್​ ಎಂದ ತಕ್ಷಣ ಕೊರೊನಾ ವೈರಸ್​ ನೆನಪಾಗುತ್ತದೆ. ಆದರೆ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಇರುವುದು ಕೊರೊನಾ ಬಗ್ಗೆ ಅಲ್ಲ ಎಂದಿದ್ದಾರೆ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ. ಸೆಪ್ಟೆಂಬರ್​ 28ರಂದು ಈ ಸಿನಿಮಾ ಕನ್ನಡದಲ್ಲೂ ಬಿಡುಗಡೆ ಆಗಲಿದೆ. ಅನೇಕ ನಗರಗಳಿಗೆ ತೆರಳಿ ಪ್ರಮೋಷನ್​ ಮಾಡಲಾಗುತ್ತಿದೆ.

‘ದಿ ವ್ಯಾಕ್ಸಿನ್​ ವಾರ್​’ ಚಿತ್ರ ಕೊವಿಡ್​ ಬಗ್ಗೆ ಅಲ್ಲ; ಹಾಗಾದ್ರೆ ಇದ್ರಲ್ಲಿ ಏನಿದೆ? ಉತ್ತರಿಸಿದ ವಿವೇಕ್​ ಅಗ್ನಿಹೋತ್ರಿ
ವಿವೇಕ್​ ಅಗ್ನಿಹೋತ್ರಿ
ಮದನ್​ ಕುಮಾರ್​
|

Updated on: Sep 21, 2023 | 2:50 PM

Share

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದ ಮೂಲಕ ಭಾರಿ ಜನಪ್ರಿಯತೆ ಗಳಿಸಿದರು. ನಂತರ ಅವರು ಕೈಗೆತ್ತಿಕೊಂಡ ಚಿತ್ರವೇ ‘ದಿ ವ್ಯಾಕ್ಸಿನ್​ ವಾರ್​’. ಈ ಸಿನಿಮಾದಲ್ಲಿ ಸಪ್ತಮಿ ಗೌಡ, ನಾನಾ ಪಾಟೇಕರ್​, ಪಲ್ಲವಿ ಜೋಶಿ, ಅನುಪಮ್​ ಖೇರ್​ ಮುಂತಾದವರು ನಟಿಸಿದ್ದಾರೆ. ಸೆಪ್ಟೆಂಬರ್​ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ವ್ಯಾಕ್ಸಿನ್​ ಎಂದ ತಕ್ಷಣ ಕೊರೊನಾ ವೈರಸ್​ ನೆನಪಾಗುತ್ತದೆ. ಆದರೆ ‘ದಿ ವ್ಯಾಕ್ಸಿನ್​ ವಾರ್​’ (The Vaccine War) ಸಿನಿಮಾ ಇರುವುದು ಕೊರೊನಾ ಬಗ್ಗೆ ಅಲ್ಲ ಎಂದಿದ್ದಾರೆ ವಿವೇಕ್​ ಅಗ್ನಿಹೋತ್ರಿ. ಕೊವಿಡ್​ (Covid 19) ವೈರಸ್​ಗೆ ಲಸಿಕೆ ಕಂಡುಹಿಡಿದ ವಿಜ್ಞಾನಿಗಳ ಬಗ್ಗೆ ಈ ಚಿತ್ರದಲ್ಲಿ ಹೇಳಲಾಗಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಇದು ಬಹಳ ಮುಖ್ಯವಾದ ಸಿನಿಮಾ. 2 ವರ್ಷಗಳ ಹಿಂದೆ ನಾವು ಬದುಕಿ ಉಳಿಯುತ್ತೇವೋ ಇಲ್ಲವೋ ಎಂಬ ಭಯದಲ್ಲಿ ಇದ್ದೆವು. ಇಂದು ಎದುರುಬದರು ಕುಳಿತು ಮಾತನಾಡುತ್ತಿದ್ದೇವೆ. ಇದು ಹೇಗೆ ಸಾಧ್ಯವಾಯ್ತು? ನಮ್ಮನ್ನು ಬದುಕಿಸಿದವರು ಯಾರು? ಜೀವ ಉಳಿಸಿದವರನ್ನು ನಾವು ದೇವರು ಅಂತೀವಿ. ವಿಜ್ಞಾನಿಗಳು ವ್ಯಾಕ್ಸಿನ್​ ಕಂಡುಹಿಡಿದು ನಮ್ಮ ಜೀವ ಉಳಿಸಿದರು. ಆ ಸೂಪರ್​ ಹೀರೋಗಳ ಕುರಿತು ಈ ಸಿನಿಮಾ ಮಾಡಲಾಗಿದೆ. ಪಾಸಿಟಿವ್​ ಆದಂತಹ, ಸ್ಫೂರ್ತಿ ನೀಡುವಂತಹ ಭಾವನಾತ್ಮಕವಾದ ಕಥೆ ಇದರಲ್ಲಿ ಇದೆ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ. ಹಾಗಿದ್ದರೂ ಕೂಡ ಇದು ಕೊವಿಡ್​ ಕುರಿತಾದ ಚಿತ್ರ ಅಲ್ಲ ಎಂಬುದು ಅವರ ಮಾತು.

ಇದನ್ನೂ ಓದಿ: ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ‘ದಿ ವ್ಯಾಕ್ಸಿನ್​ ವಾರ್​’ ಇಲ್ಲ; ಅಚ್ಚರಿ ವಿಷಯ ತಿಳಿಸಿದ ವಿವೇಕ್​ ಅಗ್ನಿಹೋತ್ರಿ

‘ಇದು ಕೊವಿಡ್​ ಸಂದರ್ಭದ ಕಥೆಯೇ ಹೊರತು ನೇರವಾಗಿ ಕೊವಿಡ್​ಗೆ ಸಂಬಂಧಿಸಿದ ಕಥೆ ಅಲ್ಲ. ನಮ್ಮ ದೇಶ ವ್ಯಾಕ್ಸಿನ್​ ಕಂಡು ಹಿಡಿದಿದ್ದು ಒಂದು ದೊಡ್ಡ ಸಾಧನೆ. 40ರಿಂದ 50 ಕೋಟಿ ಜನರು ಭಾರತದಲ್ಲಿ ಸಾಯುತ್ತಾರೆ ಎಂದು ಅನೇಕರು ಹೇಳಿದ್ದರು. ವ್ಯಾಕ್ಸಿನ್​ ಕಂಡುಹಿಡಿಯಲು ಸಾಧ್ಯವಾಗದೇ ಭಾರತ ಸೋತು ಹೋಗಲಿ ಎಂದು ದೊಡ್ಡ ಗ್ಯಾಂಗ್​ ಕಾಯುತ್ತಿತ್ತು. ಹೆಚ್ಚಿನ ಜನರು ಸಾಯಲಿ ಎಂದು ಕೂಡ ಕೆಲವರು ಬಯಸಿದ್ದರು. ವ್ಯಾಕ್ಸಿನ್​ಗೆ ಭಾರತ ದೊಡ್ಡ ಮಾರುಕಟ್ಟೆ ಆಗಲಿ ಎಂಬುದು ಅವರ ಉದ್ದೇಶ ಆಗಿತ್ತು. ವಿದೇಶಿ ವ್ಯಾಕ್ಸಿನ್​ ತಯಾರಕರು ಭಾರತದ ಕೆಲವರ ಜೊತೆ ಪಿತೂರಿ ಮಾಡಿ ನಮ್ಮ ದೇಶದಲ್ಲಿ ವ್ಯಾಕ್ಸಿನ್​ ಮಾರುವ ಪ್ಲ್ಯಾನ್​ ಮಾಡಿದ್ದರು. ಈ ಸಿನಿಮಾದಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಹೇಳಲಾಗುತ್ತದೆ. ಸಾಕಷ್ಟು ಅಧ್ಯಯನ ಮಾಡಿ ನಾವು ಈ ಸಿನಿಮಾ ಮಾಡಿದ್ದೇವೆ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

ಇದನ್ನೂ ಓದಿ: ‘ದ್ವೇಷದ ಭಾಷಣಕ್ಕೂ ಅವಕಾಶ ನೀಡಬೇಕು’: ಬಹಿರಂಗವಾಗಿ ಹೇಳಿದ ವಿವೇಕ್​ ಅಗ್ನಿಹೋತ್ರಿ

‘ಭಾರತದ ಟಾಪ್​ ಸಂಶೋಧನಾ ಸಂಸ್ಥೆಗಳು ನಮ್ಮ ಜೊತೆ ಭಾಗಿ ಆಗಿವೆ. ಇದು ಭಾರತದ ಮೊದಲ ಬಯೋ ಸೈನ್ಸ್ ಸಿನಿಮಾ. ಸಿನಿಮಾ ಬಗ್ಗೆ ಶೇ.100 ನಂಬಿಕೆ ಇರುವ ಕಲಾವಿದರ ಜೊತೆ ನಾನು ಕೆಲಸ ಮಾಡಿದ್ದೇನೆ. ನಮ್ಮ ಸಿನಿಮಾದ ನಟರು ಪಾತ್ರಕ್ಕೆ ಜೀವ ತುಂಬುತ್ತಾರೆ. ವಿವಾದಕ್ಕೆ ಹೆದರಬಾರದು. ಸಮಸ್ಯೆ ಇದ್ದಾಗ ಪ್ರಶ್ನೆ ಎತ್ತಬೇಕು. ನಮ್ಮ ಸಿನಿಮಾಗಳಿಂದ ಚರ್ಚೆ ಶುರುವಾಗಬೇಕು ಎಂಬುದು ನನ್ನ ಉದ್ದೇಶ. ಅದಕ್ಕಾಗಿ ನಾನು ವಿವಾದಕ್ಕೆ ಹೆದರುವುದಿಲ್ಲ. ಈ ಬಾರಿ ನಾನು ಕಷ್ಟದ ಮತ್ತು ರಿಸ್ಕಿ ವಿಷಯ ಆಯ್ಕೆ ಮಾಡುಕೊಂಡಿದ್ದೇನೆ. ಸಿನಿಮಾ ಎಂದರೆ ಹಾಡು, ಡ್ಯಾನ್ಸ್​ ಅಷ್ಟೇ ಅಲ್ಲ’ ಎಂದಿದ್ದಾರೆ ವಿವೇಕ್​ ಅಗ್ನಿಹೋತ್ರಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು