AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಬಿಗ್ ಬಾಸ್​ನಿಂದ ಕೊನೆಗೂ ಹೊರಬಂತು ಕತ್ತೆ

ಈ ಮೊದಲು ಪ್ರಾಣಿ ದಯಾ ಸಂಘದವರಾದ ಪೆಟಾದವರು ಸಲ್ಮಾನ್ ಖಾನ್ ಶೋಗೆ ಪತ್ರ ಬರೆದಿದ್ದರು. ಈ ಪತ್ರದಲ್ಲಿ ಸಲ್ಮಾನ್ ಖಾನ್ ಬಳಿ ತಮ್ಮ ಪ್ರಭಾವ ಬಳಸಿ ಕತ್ತೆಯನ್ನು ಹೊರಕ್ಕೆ ತರಲು ಕೋರಲಾಗಿತ್ತು. ಕೊನೆಗೂ ಈಗ ಕತ್ತೆಯನ್ನು ಹೊರಕ್ಕೆ ತರಲಾಗಿದೆ.

ಹಿಂದಿ ಬಿಗ್ ಬಾಸ್​ನಿಂದ ಕೊನೆಗೂ ಹೊರಬಂತು ಕತ್ತೆ
ಬಿಗ್ ಬಾಸ್​ಗೆ ಬಂದ ಕತ್ತೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 15, 2024 | 8:33 AM

Share

‘ಬಿಗ್ ಬಾಸ್ ಹಿಂದಿ ಸೀಸನ್ 18’ ಇತ್ತೀಚೆಗೆ ಆರಂಭ ಆಯಿತು. ಈ ಸೀಸನ್​ಗೆ ಹಲವು ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಮಹೇಶ್ ಬಾಬು ಅವರ ಅತ್ತಿಗೆ ಶಿಲ್ಪಾ ಶಿರೋಡ್ಕರ್ ಅವರು ದೊಡ್ಮನೆಗೆ ಬಂದಿದ್ದಾರೆ. ಅದೇ ರೀತಿ ಅನಿರುದ್ಧ್ ಆಚಾರ್ಯ ಕೂಡ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಈ ಮಧ್ಯೆ ಬಿಗ್ ಬಾಸ್​ನ ಮನೆಗೆ ಕತ್ತೆ ಕೂಡ ಅತಿಥಿ ಆಗಿ ಬಂದಿತ್ತು. ಈಗ ಈ ಶೋನಿಂದ ಕತ್ತೆಯನ್ನು ಹೊರಕ್ಕೆ ತರಲಾಗಿದೆ.

ಕತ್ತೆಯನ್ನು ಬಿಗ್ ಬಾಸ್​ಗೆ ಏಕೆ ತರಲಾಗಿತ್ತು? ಇದೊಂದು ಪ್ರಯೋಗವೇ ಎನ್ನುವ ಪ್ರಶ್ನೆಯೂ ಮೂಡಿತ್ತು. ಈ ಬಗ್ಗೆ ಯಾವುದೇ ಉತ್ತರ ಸಿಕ್ಕಿಲ್ಲ. ಈ ಮಧ್ಯೆ ಅನೇಕರು ಈ ವಿಚಾರವಾಗಿ ಧ್ವನಿ ಎತ್ತಿದ್ದರು. ಹೀಗಾಗಿ, ಮ್ಯಾಕ್ಸ್ ಹೆಸರಿನ ಕತ್ತೆಯನ್ನು ಹೊರಕ್ಕೆ ತರಲಾಗಿದೆ. ಇದು ಪ್ರಾಣಿ ಪ್ರಿಯರಿಗೆ ಖುಷಿ ನೀಡಿದೆ.

ಈ ಮೊದಲು ಪ್ರಾಣಿ ದಯಾ ಸಂಘದವರಾದ ಪೆಟಾದವರು ಸಲ್ಮಾನ್ ಖಾನ್ ಶೋಗೆ ಪತ್ರ ಬರೆದಿದ್ದರು. ಈ ಪತ್ರದಲ್ಲಿ ಸಲ್ಮಾನ್ ಖಾನ್ ಬಳಿ ತಮ್ಮ ಪ್ರಭಾವ ಬಳಸಿ ಕತ್ತೆಯನ್ನು ಹೊರಕ್ಕೆ ತರಲು ಕೋರಲಾಗಿತ್ತು. ಕೊನೆಗೂ ಈಗ ಕತ್ತೆಯನ್ನು ಹೊರಕ್ಕೆ ತರಲಾಗಿದೆ. ಈ ಬಾರಿ ಬಿಗ್ ಬಾಸ್​ನಿಂದ ಹೊರಕ್ಕೆ ಹೋದ ಸ್ಪರ್ಧಿ ಕತ್ತೆಯೇ ಆಗಿದೆ ಅನ್ನೋದು ವಿಶೇಷ.

ಇತ್ತೀಚೆಗೆ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಖಚಿತಪಡಿಸಲಾಯಿತು. ‘ಧನ್ಯವಾದಗಳು ಮೇನಕಾ ಸಂಜಯ್ ಗಾಂಧಿ ಅವರೇ. ಪ್ರಾಣಿಗಳ ಪರವಾಗಿ ಇರುವ ಪಿಎಫ್​ಎನ ಮುಖ್ಯಸ್ಥರಾಗಿ ನೀವು ಕತ್ತೆಯನ್ನು ಹೊರತರುವಲ್ಲಿ ಹೋರಾಡಿದ್ದೀರಿ’ ಎಂದು ಬರೆದುಕೊಳ್ಳಲಾಗಿದೆ.

ಈ ಮೊದಲು ವಾಹಿನಿಗೆ ಬರೆದ ಪತ್ರದಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿತ್ತು. ‘ಕತ್ತೆಯೂ ಒಂದು ಪ್ರಾಣಿ. ಅದು ಮನರಂಜನೆಗೆ  ಬಳಕೆ ಆಗಬಾರದು. ಅವುಗಳು ಶಬ್ದವನ್ನು ಕಂಡರೆ ಭಯಪಡುತ್ತವೆ. ಹೀಗಾಗಿ, ಇದು ಸರಿ ಅಲ್ಲ. ಸಲ್ಮಾನ್ ಖಾನ್ ಅವರೇ ನಿಮ್ಮ ಪ್ರಭಾವ ಬಳಸಿ ಕತ್ತೆಯನ್ನು ಹೊರಕ್ಕೆ ತನ್ನಿ’ ಎಂದು ಆಗ್ರಹಿಸಲಾಗಿತ್ತು.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಸಹಾಯ ಮಾಡುವವರಿಗೆ ಎಚ್ಚರಿಕೆ ನೀಡಿದ ಬಾಬಾ ಸಿದ್ಧಿಕಿ ಹಂತಕರು

ಸಲ್ಮಾನ್ ಖಾನ್ ಅವರ ವಿಚಾರಕ್ಕೆ ಬರೋದಾದರೆ ಅವರ ಆಪ್ತರು ಎನಿಸಿಕೊಂಡಿರುವ ಬಾಬಾ ಸಿದ್ಧಿಕಿ ಅವರನ್ನು ಇತ್ತೀಚೆಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಇದು ಶಾಕಿಂಗ್ ಎನಿಸಿದೆ. ಈ ಘಟನೆಯಿಂದ ಹೊರಕ್ಕೆ ಬರೋಕೆ ಅವರಿಗೆ ಸಾಕಷ್ಟು ಸಮಯ ಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ