AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧುರಿ ದೀಕ್ಷಿತ್​ನ ಮದುವೆ ಆದ ಡಾಕ್ಟರ್​ಗೆ ಎದುರಾದ ಸಮಸ್ಯೆ ಒಂದೆರಡಲ್ಲ

ಮಾಧುರಿ ದೀಕ್ಷಿತ್ ಅವರ ಪತಿ ಡಾ. ಶ್ರೀರಾಮ್ ನೇನೆ ಅವರು ತಮ್ಮ ಜೀವನದ ಸವಾಲುಗಳ ಬಗ್ಗೆ ಮಾತನಾಡಿದ್ದಾರೆ. ಬಾಲಿವುಡ್ ಸ್ಟಾರ್ ಅನ್ನು ಮದುವೆಯಾಗುವುದರಲ್ಲಿನ ಕಷ್ಟಗಳನ್ನು ಅವರು ವಿವರಿಸಿದ್ದಾರೆ. ತಮ್ಮ ವೈಯಕ್ತಿಕ ಗುರುತಿನ ಹೋರಾಟ ಮತ್ತು ಸಾರ್ವಜನಿಕ ಜೀವನದ ಒತ್ತಡಗಳನ್ನು ಅವರು ಎತ್ತಿ ತೋರಿಸಿದ್ದಾರೆ.

ಮಾಧುರಿ ದೀಕ್ಷಿತ್​ನ ಮದುವೆ ಆದ ಡಾಕ್ಟರ್​ಗೆ ಎದುರಾದ ಸಮಸ್ಯೆ ಒಂದೆರಡಲ್ಲ
ಮಾಧುರಿ ದೀಕ್ಷಿತ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 25, 2025 | 11:01 AM

Share

ಒಂದು ಕಾಲದಲ್ಲಿ ಬೇಡಿಕೆಯ ನಟಿಯಾಗಿದ್ದವರು ಮಾಧುರಿ ದೀಕ್ಷಿತ್ (Madhuri Dixit). ಅವರನ್ನು ವಿವಾಹ ಆಗಬೇಕು ಎಂದು ಕನಸು ಕಂಡವರು ಅದೆಷ್ಟೋ ಮಂದಿ. ಆದರೆ, ಯಾರಿಗೂ ಇದು ಸಾಧ್ಯ ಆಗಲೇ ಇಲ್ಲ. ಅನೇಕರು ಅವರು ಚಿತ್ರರಂಗದವರನ್ನೇ ವಿವಾಹ ಆಗುತ್ತಾರೆ ಎಂದು ಭಾವಿಸಿದ್ದರು. ಆದರೆ, ವೃತ್ತಿಯಲ್ಲಿ ವೈದ್ಯನಾಗಿರೋ ಶ್ರೀರಾಮ್ ನೆನೆ ಅವರನ್ನು ಮದುವೆ ಆದರು. ಮಾಧುರಿ ದೀಕ್ಷಿತ್ ಅವರ ನಡೆ ಅನೇಕರಿಗೆ ಅಚ್ಚರಿ ಮೂಡಿಸಿತು. ಸೆಲೆಬ್ರಿಟಿ ವಿವಾಹ ಆದ ಬಳಿಕ ಎಷ್ಟು ಕಷ್ಟ ಎಂಬುದನ್ನು ಶ್ರೀರಾಮ್ ಅವರು ಹೇಳಿದ್ದಾರೆ.

ಸಲ್ಮಾನ್ ಖಾನ್ ಕೂಡ ಮಾಧುರಿ ಅವರನ್ನು ವಿವಾಹ ಆಗಲು ಬಯಸಿದ್ದರು. ಇದಕ್ಕೆ ಮಾಧುರಿ ದೀಕ್ಷಿತ್ ತಂದೆ ಒಪ್ಪಿಗೆ ಕೊಡಲಿಲ್ಲ. 1999ರಲ್ಲಿ ಮಾಧುರಿ ಹಾಗೂ ಶ್ರೀರಾಮ್ ಅವರ ವಿವಾಹ ನಡೆಯಿತು. ವಿವಾಹ ಆದ ಬಳಿಕ 10 ವರ್ಷಗಳ ಕಾಲ ಅಮೆರಿಕದಲ್ಲೇ ಇದ್ದರು. ಆ ಬಳಿಕ ಈ ದಂಪತಿ ಭಾರತಕ್ಕೆ ಬಂದರು. ಆ ಬಳಿಕ ಮಾಧುರಿ ಅವರು ಚಿತ್ರರಂಗದಲ್ಲಿ ಮತ್ತೆ ಮುಂದುವರಿದರೆ, ನೆನೆ ಅವರು ಹೆಲ್ತ್ ಇನ್​ಫ್ಲುಯೆನ್ಸರ್ ಆಗಿದ್ದಾರೆ. ಅವರು ಆರೋಗ್ಯದ ಬಗ್ಗೆ ಟಿಪ್ಸ್ ನೀಡುತ್ತಾರೆ.

ಮಾಧುರಿ ಅವರನ್ನು ವಿವಾಹ ಆಗಿದ್ದು ಎಷ್ಟು ದೊಡ್ಡ ಚಾಲೆಂಜ್ ಆಗಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ. ‘ಮಾಧುರಿ ಅವರಂಥ ಸೆಲೆಬ್ರಿಟಿಯನ್ನು ಮದುವೆ ಆಗೋದು ನಿಜಕ್ಕೂ ಚಾಲೆಂಜಿಂಗ್. ನಾನು ಮೂಲೆಗುಂಪಾದೆ ಎಂದು ಅನಿಸಿದ್ದು ನಿಜ. ನಾನು ವೈಯಕ್ತಿಕವಾಗಿ ಗುರುತಿಸಿಕೊಳ್ಳಬೇಕು ಎಂದು ಯಾವಾಗಲೂ ಅನಿಸುತ್ತದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
ಮದುವೆಯಲ್ಲಿ ಹಾಡೋಕೆ ಅರಿಜಿತ್ ಸಿಂಗ್ ಪಡೆಯೋ ಹಣ ಎಷ್ಟು?
Image
ನಟಿಯಾಗೋ ಪ್ಲ್ಯಾನ್ ಇರಲಿಲ್ಲ; ರಚಿತಾ ನಟಿ​ ಆಗಿರದಿದ್ದರೆ ಏನಾಗಿರುತ್ತಿದ್ದರು
Image
ಕಾರ್ತಿಕ್ ಖಾತೆಯಿಂದ ಫೋಟೋ ಕದ್ದು ಪೋಸ್ಟರ್ ಮಾಡಿದ ಕರಣ್ ಜೋಹರ್
Image
‘ಕೆಜಿಎಫ್ 2’ ಜೋಡಿನ ಬಾಲಿವುಡ್​ನಲ್ಲಿ ಒಟ್ಟಿಗೆ ತರಲು ನಡೆದಿತ್ತು ಪ್ಲ್ಯಾನ್

‘ಕಿಂಗ್ ಆಥರ್​ ಕೋರ್ಟ್​ನಲ್ಲಿ ನಾನು ಯಾನ್​ಕೀ. ನಾನು ಪ್ರವಾಸಿಗನ ತರ. ನನ್ನ ಪತ್ನಿ ಸಾಕಷ್ಟು ಜನಪ್ರಿಯ ನಟಿ. ನಾನು ಅವರ ಜೊತೆ ಇದ್ದೇನೆ. ನೀವು ವೈಯಕ್ತಿಕವಾಗಿ ಎಷ್ಟು ಸ್ಟ್ರಾಂಗ್ ಎಂಬುದನ್ನು ಎಂದಿಗೂ ಕಡೆಗಣಿಸಬಾರದು’ ಎಂದು ಅವರು ಹೇಳಿಕೊಂಡಿದ್ದಾರೆ.

ವಿಡಿಯೋ ನೋಡಿ: ‘ಸೆನ್ಸೇಷನ್ ಟ್ರೆಂಡ್’​ ಫಾಲೋ ಮಾಡಿದ ಮಾಧುರಿ ದೀಕ್ಷಿತ್

ಮಾಧುರಿ ದೀಕ್ಷಿತ್ ಅವರು ಇತ್ತೀಚೆಗೆ ನಟನೆಯಲ್ಲಿ ಚ್ಯೂಸಿ ಆಗಿದ್ದಾರೆ. ಅವರು ‘ಭೂಲ್ ಬುಲಯ್ಯ 3’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಆ ಬಳಿಕ ಅವರ ನಟನೆಯ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಅವರು ಈಗ ಕುಟುಂಬದ ಬಗ್ಗೆ ಹೆಚ್ಚು ಗಮನ ಹರಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?