AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drishyam 2 Collection: ಸೋತಿದ್ದ ಬಾಲಿವುಡ್​ಗೆ ‘ದೃಶ್ಯಂ 2’ ಚಿತ್ರದಿಂದ ಹೊಸ ಚೈತನ್ಯ; ಮೂರೇ ದಿನಕ್ಕೆ 64 ಕೋಟಿ ರೂ. ಕಮಾಯಿ

Drishyam 2 Box Office Collection Day 3: ಅಜಯ್​ ದೇವಗನ್​ ನಟನೆಯ ‘ದೃಶ್ಯಂ 2’ ಚಿತ್ರಕ್ಕೆ ಅಭಿಷೇಕ್​ ಪಾಠಕ್​ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನೋಡಿದ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Drishyam 2 Collection: ಸೋತಿದ್ದ ಬಾಲಿವುಡ್​ಗೆ ‘ದೃಶ್ಯಂ 2’ ಚಿತ್ರದಿಂದ ಹೊಸ ಚೈತನ್ಯ; ಮೂರೇ ದಿನಕ್ಕೆ 64 ಕೋಟಿ ರೂ. ಕಮಾಯಿ
ಅಜಯ್ ದೇವಗನ್
TV9 Web
| Edited By: |

Updated on: Nov 21, 2022 | 12:15 PM

Share

ಖ್ಯಾತ ನಟ ಅಜಯ್​ ದೇವಗನ್​ (Ajay Devgn) ಅವರು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಈ ಹಿಂದಿನ ಸಿನಿಮಾಗಳಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಕಂಡಿರದ ಅವರಿಗೆ ಈಗ ‘ದೃಶ್ಯಂ 2’ (Drishyam 2) ಸಿನಿಮಾದಿಂದ ಗೆಲುವು ಸಿಕ್ಕಿದೆ. ಬಿಡುಗಡೆಯಾದ ಮೂರೇ ದಿನಕ್ಕೆ ಈ ಸಿನಿಮಾ ಬರೋಬ್ಬರಿ 64.14 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಇದು ಅವರ ಅಭಿಮಾನಿಗಳಿಗೆ ಸಖತ್​ ಖುಷಿ ನೀಡಿದೆ. ಇದು ಮಲಯಾಳಂನ ‘ದೃಶ್ಯಂ 2’ ಚಿತ್ರದ ಹಿಂದಿ ರಿಮೇಕ್​. ಉತ್ತರ ಭಾರತದ ಮಂದಿ ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಆ ಮೂಲಕ ಮೊದಲ ವೀಕೆಂಡ್​ನಲ್ಲಿಯೇ ನಿರ್ಮಾಪಕರ ಜೇಬು ತುಂಬಿದೆ. ಬಾಕ್ಸ್​ ಆಫೀಸ್​ ಕಲೆಕ್ಷನ್​ (Drishyam 2 Box Office Collection) ಇದೇ ರೀತಿ ಮುಂದುವರಿದರೆ ಇನ್ನು ಮೂರು ಅಥವಾ ನಾಲ್ಕು ದಿನದಲ್ಲಿ 100 ಕೋಟಿ ರೂಪಾಯಿ ಗಳಿಕೆ ಆಗಲಿದೆ.

ನ.18ರಂದು ‘ದೃಶ್ಯಂ 2’ ಬಿಡುಗಡೆ ಆಯಿತು. ಅಜಯ್​ ದೇವಗನ್​ ಜೊತೆ ಶ್ರೀಯಾ ಶರಣ್​, ಟಬು, ಅಕ್ಷಯ್​ ಖನ್ನಾ, ಇಶಿತಾ ದತ್ತ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಮೊದಲ ದಿನ ಈ ಸಿನಿಮಾದ ಕಲೆಕ್ಷನ್​ ಆಗಿದ್ದು 15.38 ಕೋಟಿ ರೂಪಾಯಿ. ಎರಡನೇ ದಿನ ವೀಕೆಂಡ್​ ಆದ್ದರಿಂದ ಕಲೆಕ್ಷನ್​ ಹೆಚ್ಚಿತು. ಅಂದರೆ, ಶನಿವಾರ (ನ.19) ಬರೋಬ್ಬರಿ 21.59 ಕೋಟಿ ರೂಪಾಯಿ ಆದಾಯ ಬಂತು. ಭಾನುವಾರವಂತೂ (ನ.20) ಚಿತ್ರದ ಗಳಿಕೆ ಗಣನೀಯವಾಗಿ ಏರಿಕೆ ಆಗಿದೆ. ಮೂರನೇ ದಿನ 27.17 ಕೋಟಿ ರೂಪಾಯಿ ಸಂಗ್ರಹ ಆಗುವ ಮೂಲಕ ಈವರೆಗಿನ ಒಟ್ಟು ಕಲೆಕ್ಷನ್​ 64.14 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ
Image
‘Drishyam 2’ box office day 2 collection: ಎರಡನೇ ದಿನವು ಗಳಿಕೆಯ ಓಟ ಮುಂದುವರೆಸಿದ ‘ದೃಶ್ಯಂ 2’, ಬಾಕ್ಸ್ ಆಫೀಸ್​ ಕಲೆಕ್ಷನ್​​​ ವಿವರ ಇಲ್ಲಿದೆ
Image
ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದ ‘ದೃಶ್ಯಂ 2’; ಅಕ್ಷಯ್ ಕುಮಾರ್ ದಾಖಲೆ ಉಡೀಸ್
Image
Drishyam 2 Twitter Review: ‘ದೃಶ್ಯಂ 2’ ಟ್ವಿಟರ್​ ವಿಮರ್ಶೆ; ಅಜಯ್​ ದೇವಗನ್​ ಚಿತ್ರಕ್ಕೆ ಪ್ರೇಕ್ಷಕರ ರಿಯಾಕ್ಷನ್​ ಇಲ್ಲಿದೆ..
Image
Mohanlal: ‘ದೃಶ್ಯಂ 3’ ಬರೋದು ಖಚಿತ; ನಿರ್ಮಾಪಕರಿಂದಲೇ ಹೊರಬಿತ್ತು ಅಧಿಕೃತ ಮಾಹಿತಿ

‘ದೃಶ್ಯಂ 2’ ಚಿತ್ರಕ್ಕೆ ಅಭಿಷೇಕ್​ ಪಾಠಕ್​ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನೋಡಿದ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆತ್ಮರಕ್ಷಣೆಗಾಗಿ ನಡೆದ ಒಂದು ಕೊಲೆಯನ್ನು ಕಥಾನಾಯಕ ಮುಚ್ಚಿ ಹಾಕುತ್ತಾನೆ. ತನ್ನ ಕುಟುಂಬದವರು ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳದಂತೆ ಚಾಲಾಕಿತನದಿಂದ ಬಚಾವ್​ ಮಾಡುತ್ತಾನೆ. ಇದು ‘ದೃಶ್ಯಂ’ ಮೊದಲ ಪಾರ್ಟ್​ ಕಥೆ. ಎರಡನೇ ಪಾರ್ಟ್​ನಲ್ಲಿ ಆ ಕೇಸ್​ ಮತ್ತೆ ಓಪನ್​ ಆಗುತ್ತದೆ. ಹಲವು ಟ್ವಿಸ್ಟ್​ಗಳ ಮೂಲಕ ಕಥೆ ಸಾಗುತ್ತದೆ. ಈ ಬಾರಿ ಹೀರೋ ತನ್ನ ಕುಟುಂಬವನ್ನು ಹೇಗೆ ರಕ್ಷಿಸುತ್ತಾನೆ ಎಂಬುದನ್ನು ನೋಡಲು ಜನರು ಥಿಯೇಟರ್​ನತ್ತ ಹೆಜ್ಜೆ ಹಾಕುತ್ತಿದ್ದಾರೆ.

ಸೌತ್​ ಸಿನಿಮಾಗಳ ಅಬ್ಬರದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಹಿಂದಿ ಸಿನಿಮಾಗಳು ಸೊರಗಿದ್ದವು. ಈಗ ‘ದೃಶ್ಯಂ 2’ ಚಿತ್ರ ಸೂಪರ್​ ಹಿಟ್​ ಆಗಿರುವುದರಿಂದ ಬಿ-ಟೌನ್​ನಲ್ಲಿ ಹೊಸ ಭರವಸೆ ಮೂಡಿದಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ