Drishyam 2 Collection: ಸೋತಿದ್ದ ಬಾಲಿವುಡ್​ಗೆ ‘ದೃಶ್ಯಂ 2’ ಚಿತ್ರದಿಂದ ಹೊಸ ಚೈತನ್ಯ; ಮೂರೇ ದಿನಕ್ಕೆ 64 ಕೋಟಿ ರೂ. ಕಮಾಯಿ

Drishyam 2 Box Office Collection Day 3: ಅಜಯ್​ ದೇವಗನ್​ ನಟನೆಯ ‘ದೃಶ್ಯಂ 2’ ಚಿತ್ರಕ್ಕೆ ಅಭಿಷೇಕ್​ ಪಾಠಕ್​ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನೋಡಿದ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Drishyam 2 Collection: ಸೋತಿದ್ದ ಬಾಲಿವುಡ್​ಗೆ ‘ದೃಶ್ಯಂ 2’ ಚಿತ್ರದಿಂದ ಹೊಸ ಚೈತನ್ಯ; ಮೂರೇ ದಿನಕ್ಕೆ 64 ಕೋಟಿ ರೂ. ಕಮಾಯಿ
ಅಜಯ್ ದೇವಗನ್
Follow us
| Updated By: ಮದನ್​ ಕುಮಾರ್​

Updated on: Nov 21, 2022 | 12:15 PM

ಖ್ಯಾತ ನಟ ಅಜಯ್​ ದೇವಗನ್​ (Ajay Devgn) ಅವರು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಈ ಹಿಂದಿನ ಸಿನಿಮಾಗಳಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಕಂಡಿರದ ಅವರಿಗೆ ಈಗ ‘ದೃಶ್ಯಂ 2’ (Drishyam 2) ಸಿನಿಮಾದಿಂದ ಗೆಲುವು ಸಿಕ್ಕಿದೆ. ಬಿಡುಗಡೆಯಾದ ಮೂರೇ ದಿನಕ್ಕೆ ಈ ಸಿನಿಮಾ ಬರೋಬ್ಬರಿ 64.14 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಇದು ಅವರ ಅಭಿಮಾನಿಗಳಿಗೆ ಸಖತ್​ ಖುಷಿ ನೀಡಿದೆ. ಇದು ಮಲಯಾಳಂನ ‘ದೃಶ್ಯಂ 2’ ಚಿತ್ರದ ಹಿಂದಿ ರಿಮೇಕ್​. ಉತ್ತರ ಭಾರತದ ಮಂದಿ ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಆ ಮೂಲಕ ಮೊದಲ ವೀಕೆಂಡ್​ನಲ್ಲಿಯೇ ನಿರ್ಮಾಪಕರ ಜೇಬು ತುಂಬಿದೆ. ಬಾಕ್ಸ್​ ಆಫೀಸ್​ ಕಲೆಕ್ಷನ್​ (Drishyam 2 Box Office Collection) ಇದೇ ರೀತಿ ಮುಂದುವರಿದರೆ ಇನ್ನು ಮೂರು ಅಥವಾ ನಾಲ್ಕು ದಿನದಲ್ಲಿ 100 ಕೋಟಿ ರೂಪಾಯಿ ಗಳಿಕೆ ಆಗಲಿದೆ.

ನ.18ರಂದು ‘ದೃಶ್ಯಂ 2’ ಬಿಡುಗಡೆ ಆಯಿತು. ಅಜಯ್​ ದೇವಗನ್​ ಜೊತೆ ಶ್ರೀಯಾ ಶರಣ್​, ಟಬು, ಅಕ್ಷಯ್​ ಖನ್ನಾ, ಇಶಿತಾ ದತ್ತ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಮೊದಲ ದಿನ ಈ ಸಿನಿಮಾದ ಕಲೆಕ್ಷನ್​ ಆಗಿದ್ದು 15.38 ಕೋಟಿ ರೂಪಾಯಿ. ಎರಡನೇ ದಿನ ವೀಕೆಂಡ್​ ಆದ್ದರಿಂದ ಕಲೆಕ್ಷನ್​ ಹೆಚ್ಚಿತು. ಅಂದರೆ, ಶನಿವಾರ (ನ.19) ಬರೋಬ್ಬರಿ 21.59 ಕೋಟಿ ರೂಪಾಯಿ ಆದಾಯ ಬಂತು. ಭಾನುವಾರವಂತೂ (ನ.20) ಚಿತ್ರದ ಗಳಿಕೆ ಗಣನೀಯವಾಗಿ ಏರಿಕೆ ಆಗಿದೆ. ಮೂರನೇ ದಿನ 27.17 ಕೋಟಿ ರೂಪಾಯಿ ಸಂಗ್ರಹ ಆಗುವ ಮೂಲಕ ಈವರೆಗಿನ ಒಟ್ಟು ಕಲೆಕ್ಷನ್​ 64.14 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ
Image
‘Drishyam 2’ box office day 2 collection: ಎರಡನೇ ದಿನವು ಗಳಿಕೆಯ ಓಟ ಮುಂದುವರೆಸಿದ ‘ದೃಶ್ಯಂ 2’, ಬಾಕ್ಸ್ ಆಫೀಸ್​ ಕಲೆಕ್ಷನ್​​​ ವಿವರ ಇಲ್ಲಿದೆ
Image
ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದ ‘ದೃಶ್ಯಂ 2’; ಅಕ್ಷಯ್ ಕುಮಾರ್ ದಾಖಲೆ ಉಡೀಸ್
Image
Drishyam 2 Twitter Review: ‘ದೃಶ್ಯಂ 2’ ಟ್ವಿಟರ್​ ವಿಮರ್ಶೆ; ಅಜಯ್​ ದೇವಗನ್​ ಚಿತ್ರಕ್ಕೆ ಪ್ರೇಕ್ಷಕರ ರಿಯಾಕ್ಷನ್​ ಇಲ್ಲಿದೆ..
Image
Mohanlal: ‘ದೃಶ್ಯಂ 3’ ಬರೋದು ಖಚಿತ; ನಿರ್ಮಾಪಕರಿಂದಲೇ ಹೊರಬಿತ್ತು ಅಧಿಕೃತ ಮಾಹಿತಿ

‘ದೃಶ್ಯಂ 2’ ಚಿತ್ರಕ್ಕೆ ಅಭಿಷೇಕ್​ ಪಾಠಕ್​ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನೋಡಿದ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆತ್ಮರಕ್ಷಣೆಗಾಗಿ ನಡೆದ ಒಂದು ಕೊಲೆಯನ್ನು ಕಥಾನಾಯಕ ಮುಚ್ಚಿ ಹಾಕುತ್ತಾನೆ. ತನ್ನ ಕುಟುಂಬದವರು ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳದಂತೆ ಚಾಲಾಕಿತನದಿಂದ ಬಚಾವ್​ ಮಾಡುತ್ತಾನೆ. ಇದು ‘ದೃಶ್ಯಂ’ ಮೊದಲ ಪಾರ್ಟ್​ ಕಥೆ. ಎರಡನೇ ಪಾರ್ಟ್​ನಲ್ಲಿ ಆ ಕೇಸ್​ ಮತ್ತೆ ಓಪನ್​ ಆಗುತ್ತದೆ. ಹಲವು ಟ್ವಿಸ್ಟ್​ಗಳ ಮೂಲಕ ಕಥೆ ಸಾಗುತ್ತದೆ. ಈ ಬಾರಿ ಹೀರೋ ತನ್ನ ಕುಟುಂಬವನ್ನು ಹೇಗೆ ರಕ್ಷಿಸುತ್ತಾನೆ ಎಂಬುದನ್ನು ನೋಡಲು ಜನರು ಥಿಯೇಟರ್​ನತ್ತ ಹೆಜ್ಜೆ ಹಾಕುತ್ತಿದ್ದಾರೆ.

ಸೌತ್​ ಸಿನಿಮಾಗಳ ಅಬ್ಬರದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಹಿಂದಿ ಸಿನಿಮಾಗಳು ಸೊರಗಿದ್ದವು. ಈಗ ‘ದೃಶ್ಯಂ 2’ ಚಿತ್ರ ಸೂಪರ್​ ಹಿಟ್​ ಆಗಿರುವುದರಿಂದ ಬಿ-ಟೌನ್​ನಲ್ಲಿ ಹೊಸ ಭರವಸೆ ಮೂಡಿದಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ