AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಛಾವ’ ಸಿನಿಮಾ ಪ್ರದರ್ಶನದ ವೇಳೆ ಚಿತ್ರಮಂದಿರದ ಪರದೆ ಹರಿದು ಹಾಕಿದ ಕುಡುಕ

ವಿಕ್ಕಿ ಕೌಶಲ್ ನಟನೆಯ ‘ಛಾವ’ ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ಸಿನಿಮಾ ನೋಡುವ ಭರದಲ್ಲಿ ಕೆಲವರ ವರ್ತನೆ ಮಿತಿ ಮೀರಿದೆ. ಅದಕ್ಕೆ ಇಲ್ಲಿ ಕೆಲವು ಘಟನೆಗಳು ಸಾಕ್ಷಿ ಆಗಿವೆ. ಮದ್ಯಪಾನ ಮಾಡಿ ಸಿನಿಮಾ ನೋಡಲು ಬಂದ ವ್ಯಕ್ತಿಯೊಬ್ಬನು ಥಿಯೇಟರ್​ ಪರದೆಯನ್ನೇ ಹರಿದು ಹಾಕಿದ್ದಾನೆ.

‘ಛಾವ’ ಸಿನಿಮಾ ಪ್ರದರ್ಶನದ ವೇಳೆ ಚಿತ್ರಮಂದಿರದ ಪರದೆ ಹರಿದು ಹಾಕಿದ ಕುಡುಕ
Vicky Kaushal
ಮದನ್​ ಕುಮಾರ್​
|

Updated on: Feb 18, 2025 | 9:47 PM

Share

ಬಾಲಿವುಡ್​ನ ‘ಛಾವ’ ಸಿನಿಮಾದ ಕ್ರೇಜ್ ಜೋರಾಗಿದೆ. ಎಲ್ಲ ಕಡೆಗಳಲ್ಲಿ ಈ ಸಿನಿಮಾ ಅತ್ಯುತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ರಶ್ಮಿಕಾ ಮಂದಣ್ಣ, ವಿಕ್ಕಿ ಕೌಶಲ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಸಿನಿಮಾ ನೋಡಿದ ಎಲ್ಲರೂ ಪಾಸಿಟಿವ್ ಪ್ರತಿಕ್ರಿಯೆ ನೀಡುತ್ತಿದ್ದು, ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಈ ನಡುವೆ ಕೆಲವರು ಅತಿರೇಕದ ವರ್ತನೆ ತೋರಿಸುತ್ತಿದ್ದಾರೆ. ಚಿತ್ರಮಂದಿರದ ಪರದೆಯನ್ನೇ ಹರಿದು ಹಾಕಲಾಗಿದೆ.

ಗುಜರಾಜ್​ನ ಚಿತ್ರಮಂದಿರವೊಂದರಲ್ಲಿ ‘ಛಾವ’ ಸಿನಿಮಾ ಪ್ರದರ್ಶನ ಕಾಣುತ್ತಿತ್ತು. ಈ ವೇಳೆ ಓರ್ವ ಪ್ರೇಕ್ಷಕ ಮದ್ಯಪಾನ ಮಾಡಿಕೊಂಡು ಬಂದಿದ್ದ. ಸಿನಿಮಾ ನೋಡಿ ಉದ್ವೇಗಕ್ಕೆ ಒಳಗಾದ ಆತ ಪರದೆಯ ಬಳಿ ಹೋಗಿ ಪುಂಡಾಟ ಮೆರೆದಿದ್ದಾನೆ. ಸಿನಿಮಾ ಪ್ರದರ್ಶನ ಆಗುವಾಗಲೇ ಚಿತ್ರಮಂದಿರದ ಪರದೆಯನ್ನು ಹರಿದು ಹಾಕಿದ್ದಾನೆ. ಬಳಿಕ ಚಿತ್ರಮಂದಿರದ ಸಿಬ್ಬಂದಿ ಬಂದು ಆತನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಕಳೆದ ಭಾನುವಾರ (ಫೆಬ್ರವರಿ 16) ಈ ಘಟನೆ ನಡೆದಿದೆ ಎನ್ನಲಾಗಿದೆ. ಪರದೆ ಹರಿದು ಹಾಕಿದ ವ್ಯಕ್ತಿಯನ್ನು ಜಯೇಶ್ ವಾಸವ ಎಂದು ಗುರುತಿಸಲಾಗಿದೆ.

ಇದೇ ರೀತಿಯ ಇನ್ನೊಂದು ಘಟನೆ ಕೂಡ ನಡೆದಿದೆ. ಸಿನಿಮಾ ನೋಡಲು ಬಂದ ಅಭಿಮಾನಿಯೊಬ್ಬ ಛತ್ರಪತಿ ಶಂಭಾಜಿ ಮಹಾರಾಜ್ ರೀತಿ ವೇಷ ಧರಿಸಿಕೊಂಡು, ಕುದುರೆ ಏರಿ ಚಿತ್ರಮಂದಿರದ ಒಳಗೆ ಪ್ರವೇಶಿಸಿದ್ದಾನೆ. ಆತನ ವಿಡಿಯೋ ಕೂಡ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮಹಾರಾಣಿ ಆಗಿದ್ದಕ್ಕೆ ರಶ್ಮಿಕಾ ಮಂದಣ್ಣಗೆ ಖುಷಿಯೋ ಖುಷಿ

ಲಕ್ಷ್ಮಣ್ ಉಟೇಕರ್ ಅವರು ‘ಛಾವ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಛತ್ರಪತಿ ಶಂಭಾಜಿ ಮಹಾರಾಜ್ ಜೀವನವನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ವಿಕ್ಕಿ ಕೌಶಲ್ ಅವರು ಶಂಭಾಜಿ ಪಾತ್ರವನ್ನು ನಿಭಾಯಿಸಿದ್ದಾರೆ. ನಾಯಕಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. 4 ದಿನಕ್ಕೆ ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ 145.53 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಸೋಮವಾರ 24.10 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ವಿಕ್ಕಿ ಕೌಶಲ್ ಅವರ ಅಭಿನಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ