AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಸಿನಿಮಾ ನೋಡಲು ದುಬೈನಿಂದ ಭಾರತಕ್ಕೆ ಬರಲಿರುವ ಪ್ರೇಕ್ಷಕರು

ದುಬೈ, ಪಾಕಿಸ್ತಾನ ಮುಂತಾದ ಕಡೆಗಳಲ್ಲಿ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗುವುದಿಲ್ಲ. ಅಲ್ಲಿರುವ ಪ್ರೇಕ್ಷಕರು ಮಾರ್ಚ್ 19ರ ಆಸುಪಾಸಿನಲ್ಲಿ ಭಾರತಕ್ಕೆ ಬಂದು ಸಿನಿಮಾ ನೋಡಲಿದ್ದಾರೆ. ಅಷ್ಟರಮಟ್ಟಿಗೆ ಈ ಸಿನಿಮಾ ಬಗ್ಗೆ ಕ್ರೇಜ್ ಸೃಷ್ಟಿ ಆಗಿದೆ ಎಂದು ನಟ ಆರ್. ಮಾಧವನ್ ಹೇಳಿದ್ದಾರೆ.

‘ಧುರಂಧರ್ 2’ ಸಿನಿಮಾ ನೋಡಲು ದುಬೈನಿಂದ ಭಾರತಕ್ಕೆ ಬರಲಿರುವ ಪ್ರೇಕ್ಷಕರು
Ranveer Singh
ಮದನ್​ ಕುಮಾರ್​
|

Updated on: Feb 26, 2026 | 3:18 PM

Share

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಕಳೆದ ವರ್ಷ ಬ್ಲಾಕ್ ಬಸ್ಟರ್ ಹಿಟ್ ಆಯಿತು. ಈಗ ಆ ಚಿತ್ರದ ಸೀಕ್ವೆಲ್ ಸಿದ್ಧವಾಗಿದೆ. ಮಾರ್ಚ್ 19ರಂದು ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗಲಿದೆ. ಆದರೆ ಕೆಲವು ದೇಶಗಳಲ್ಲಿ ಈ ಚಿತ್ರವನ್ನು ಬ್ಯಾನ್ ಮಾಡಲಾಗಿದೆ. ಮಿಡಲ್ ಈಸ್ಟ್ ದೇಶಗಳಲ್ಲಿ ಈ ಸಿನಿಮಾದ ಬಿಡುಗಡೆಗೆ ನಿಷೇಧ ಹೇರಲಾಗಿದೆ. ಆದರೂ ಪ್ರೇಕ್ಷಕರ ಕ್ರೇಜ್ ಕಡಿಮೆ ಆಗಿಲ್ಲ. ಅನೇಕರು ದುಬೈನಿಂದ ಭಾರತಕ್ಕೆ ಬಂದು ಸಿನಿಮಾ ನೋಡಲಿದ್ದಾರೆ ಎಂದು ಚಿತ್ರದ ನಟ ಆರ್. ಮಾಧವನ್ (R. Madhavan) ಅವರು ಹೇಳಿದ್ದಾರೆ.

‘ಧುರಂಧರ್ 2’ ಸಿನಿಮಾದಲ್ಲಿ ಆರ್. ಮಾಧವನ್ ಅವರು ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಸಿನಿಮಾ ಬಗ್ಗೆ ಜನರಿಗೆ ಇರುವ ಕ್ರೇಜ್ ಎಂಥದ್ದು ಎಂಬುದನ್ನು ಅವರು ವಿವರಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಕೆಲವು ದೇಶಗಳಲ್ಲಿ ಬ್ಯಾನ್ ಆಗಿದ್ದರೂ ಕೂಡ ಪ್ರೇಕ್ಷಕರ ಕ್ರೇಜ್ ಕಡಿಮೆ ಆಗಿಲ್ಲ ಎಂದು ಆರ್. ಮಾಧವನ್ ಹೇಳಿದ್ದಾರೆ.

‘ಅದು ಒಳ್ಳೆಯ ಕಂಟೆಂಟ್​ನ ಶಕ್ತಿ. ದುಬೈನಲ್ಲಿ ಇರುವವರು ಮಾರ್ಚ್ 19ರ ಆಸುಪಾಸಿನಲ್ಲಿ ತಮ್ಮ ಬಿಸ್ನೆಸ್ ಮೀಟಿಂಗ್ ಪ್ಲ್ಯಾನ್ ಮಾಡಿಕೊಂಡು ಭಾರತಕ್ಕೆ ಬರಲಿದ್ದಾರೆ. ಮೀಟಿಂಗ್​​ನಲ್ಲಿ ಭಾಗವಹಿಸುವುದರ ಜೊತೆಗೆ ‘ಧುರಂಧರ್ 2’ ಸಿನಿಮಾವನ್ನು ಕೂಡ ಅವರು ನೋಡಬಹುದು. ಯಾಕೆಂದರೆ ಈ ಸಿನಿಮಾ ದುಬೈನಲ್ಲಿ ರಿಲೀಸ್ ಆಗುತ್ತಿಲ್ಲ’ ಎಂದಿದ್ದಾರೆ ಆರ್. ಮಾಧವನ್.

ಪಾಕಿಸ್ತಾನ, ದುಬೈ ಮುಂತಾದ ಕಡೆಗಳಲ್ಲಿ ‘ಧುರಂಧರ್’ ಸಿನಿಮಾ ರಿಲೀಸ್ ಆಗಿರಲಿಲ್ಲ. ಆದರೆ ಪೈರಸಿ ಕಾಪಿ ಮೂಲಕ ಅಲ್ಲಿನ ಕೋಟ್ಯಂತರ ಜನರು ಸಿನಿಮಾ ನೋಡಿದರು. ಬಳಿಕ ಒಟಿಟಿಯಲ್ಲಿ ಕೂಡ ಸಿನಿಮಾವನ್ನು ವೀಕ್ಷಿಸಿದರು. ಮೊದಲ ಪಾರ್ಟ್ ಸೂಪರ್ ಹಿಟ್ ಆಗಿದ್ದರಿಂದ ಸೀಕ್ವೆಲ್ ಮೇಲೆ ಭಾರಿ ನಿರೀಕ್ಷೆ ಮನೆ ಮಾಡಿದೆ.

ಇದನ್ನೂ ಓದಿ: ಕೆಟ್ಟ ವಿಮರ್ಶೆಗೆ ತಿರುಗೇಟು: ಪ್ರಶಸ್ತಿ ತಿರಸ್ಕರಿಸಿ ಮುಖಭಂಗ ಮಾಡಿದ ‘ಧುರಂಧರ್’ ಚಿತ್ರತಂಡ

ಆರ್. ಮಾಧವನ್, ಸಾರಾ ಅರ್ಜುನ್, ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್ ಮುಂತಾದವರು ‘ಧುರಂಧರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಆದಿತ್ಯ ಧಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮಾರ್ಚ್ 19ರಂದು ‘ಧುರಂಧರ್ 2’ ಎದುರು ಕನ್ನಡದ ‘ಟಾಕ್ಸಿಕ್’ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ. ಆದ್ದರಿಂದ ಪೈಪೋಟಿ ಹೆಚ್ಚಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!