AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ ಕಲೆಕ್ಷನ್ ಮಾಡಲ್ಲ ಅನ್ನೋದು ಶಾರುಖ್​ಗೂ ಗೊತ್ತಿತ್ತು’; ರಾಜ್​ಕುಮಾರ್ ಹಿರಾನಿ

‘ಡಂಕಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಬಗ್ಗೆ ರಾಜ್​ಕುಮಾರ್ ಹಿರಾನಿ ಮಾತನಾಡಿದ್ದಾರೆ. ಈ ಬಗ್ಗೆ ಮೊದಲೇ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.  

‘ಡಂಕಿ ಕಲೆಕ್ಷನ್ ಮಾಡಲ್ಲ ಅನ್ನೋದು ಶಾರುಖ್​ಗೂ ಗೊತ್ತಿತ್ತು’; ರಾಜ್​ಕುಮಾರ್ ಹಿರಾನಿ
ಡಂಕಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Jan 01, 2024 | 9:02 AM

Share

ಶಾರುಖ್ ಖಾನ್  (Shah Rukh Khan)ನಟನೆಯ ‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳು ಸೂಪರ್ ಹಿಟ್ ಆದವು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿವೆ. ಈ ಕಾರಣಕ್ಕೆ ‘ಡಂಕಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ರಾಜ್​ಕುಮಾರ್ ಹಿರಾನಿ ಯಾವಾಗಲೂ ಆ್ಯಕ್ಷನ್ ಸಿನಿಮಾ ಮಾಡಿದವರಲ್ಲ. ಕ್ಲಾಸ್ ಕಥೆ ಹೇಳೋಕೆ ಅವರು ಫೇಮಸ್. ‘ಡಂಕಿ’ ಟ್ರೇಲರ್ ನೋಡಿದ ಅನೇಕರಿಗೆ ಇದು ಕ್ಲಾಸ್ ಸಿನಿಮಾ ಅನ್ನೋದು ಗೊತ್ತಾಗಿತ್ತು. ‘ಡಂಕಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಬಗ್ಗೆ ರಾಜ್​ಕುಮಾರ್ ಹಿರಾನಿ ಮಾತನಾಡಿದ್ದಾರೆ. ಈ ಬಗ್ಗೆ ಮೊದಲೇ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.

‘ಡಂಕಿ’ ಸಿನಿಮಾ 150+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಶಾರುಖ್ ಅವರಂಥ ಸ್ಟಾರ್ ಹೀರೋಗೆ ಈ ಕಲೆಕ್ಷನ್ ಕಡಿಮೆಯೇ. ಈ ಬಗ್ಗೆ ರಾಜ್​ಕುಮಾರ್ ಹಿರಾನಿಗೆ ‘ನ್ಯೂಸ್​ 18’ ನಡೆಸಿದ ಕಾರ್ಯಕ್ರಮ ಒಂದರಲ್ಲಿ ಪ್ರಶ್ನೆ ಮಾಡಲಾಗಿದೆ. ಶಾರುಖ್ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಮಧ್ಯೆ ಕಲೆಕ್ಷನ್ ವಿಚಾರದಲ್ಲಿ ಮಾತುಕತೆ ನಡೆದಿತ್ತಂತೆ.

‘ಎರಡು ಬ್ಯಾಕ್ ಟು ಬ್ಯಾಕ್ ಆ್ಯಕ್ಷನ್ ಸಿನಿಮಾ ಮಾಡಿದ ಬಳಿಕ ಶಾರುಖ್ ಖಾನ್ ಅವರು ಡಂಕಿ ಸಿನಿಮಾ ಮಾಡಬಯಸಿದರು. ಈ ರೀತಿಯ ಸಿನಿಮಾ ಮಾಡಲು ಅವರಿಗೆ ಖುಷಿ ಇತ್ತು. ಆ್ಯಕ್ಷನ್ ಸಿನಿಮಾಗಳು ಜನರಿಗೆ ಹೆಚ್ಚು ಇಷ್ಟ ಆಗುತ್ತವೆ ಅನ್ನೋದು ಶಾರುಖ್ ಖಾನ್​ಗೆ ಗೊತ್ತಿತ್ತು. ಹೀಗಾಗಿ, ಡಂಕಿ ಸಿನಿಮಾದಿಂದ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಗಳಿಕೆ ನಿರೀಕ್ಷಿಸಬೇಡಿ ಎಂದು ನನಗೆ ಅವರು ಹೇಳುತ್ತಲೇ ಇದ್ದರು. ನಿಧಾನವಾಗಿ ಸಿನಿಮಾ ಗಳಿಕೆ ಮಾಡುತ್ತದೆ ಅನ್ನೋದು ಅವರಿಗೆ ಗೊತ್ತಿತ್ತು. ಅವರು ಹೇಳಿದಂತೆ ಆಯಿತು. ಇಡೀ ಕುಟುಂಬ ಸಿನಿಮಾ ನೋಡಲು ಬರುತ್ತಿದೆ’ ಎಂದಿದ್ದಾರೆ ರಾಜ್​ಕುಮಾರ್ ಹಿರಾನಿ.

ಇದನ್ನೂ ಓದಿ: ‘ಧೂಮ್ 4’ನಲ್ಲಿ ಶಾರುಖ್ ಖಾನ್ ನಾಯಕ? ಜೊತೆಯಾಗಲಿದ್ದಾರೆ ದಕ್ಷಿಣದ ನಟ?

‘ಮುನ್ನಾ ಭಾಯ್ ಎಂಬಿಬಿಎಸ್’ ಸಿನಿಮಾಗೆ ಶಾರುಖ್ ಖಾನ್ ಅವರು ಮೊದಲ ಆಯ್ಕೆ ಆಗಿದ್ದರು. ಆದರೆ, ಒಟ್ಟಿಗೆ ಕೆಲಸ ಮಾಡಲು ಆಗಲಿಲ್ಲ. ಸಿನಿಮಾ ಮಾಡಲು ಒಪ್ಪದ ಹೊರತಾಗಿಯೂ ಚಿತ್ರದ ಸ್ಕ್ರಿಪ್ಟ್​ನಲ್ಲಿ ಕೆಲವು ಮುಖ್ಯ ಬದಲಾವಣೆ ಮಾಡಲು ಶಾರುಖ್ ಖಾನ್ ಸೂಚಿಸಿದ್ದರು. ಇದು ಚಿತ್ರಕ್ಕೆ ಸಹಕಾರಿ ಆಗಿತ್ತು ಎಂದು ರಾಜ್​ಕುಮಾರ್ ಹಿರಾನಿ ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:35 am, Mon, 1 January 24

Follow Us
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್