AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ ಕಲೆಕ್ಷನ್ ಮಾಡಲ್ಲ ಅನ್ನೋದು ಶಾರುಖ್​ಗೂ ಗೊತ್ತಿತ್ತು’; ರಾಜ್​ಕುಮಾರ್ ಹಿರಾನಿ

‘ಡಂಕಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಬಗ್ಗೆ ರಾಜ್​ಕುಮಾರ್ ಹಿರಾನಿ ಮಾತನಾಡಿದ್ದಾರೆ. ಈ ಬಗ್ಗೆ ಮೊದಲೇ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.  

‘ಡಂಕಿ ಕಲೆಕ್ಷನ್ ಮಾಡಲ್ಲ ಅನ್ನೋದು ಶಾರುಖ್​ಗೂ ಗೊತ್ತಿತ್ತು’; ರಾಜ್​ಕುಮಾರ್ ಹಿರಾನಿ
ಡಂಕಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Jan 01, 2024 | 9:02 AM

Share

ಶಾರುಖ್ ಖಾನ್  (Shah Rukh Khan)ನಟನೆಯ ‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳು ಸೂಪರ್ ಹಿಟ್ ಆದವು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿವೆ. ಈ ಕಾರಣಕ್ಕೆ ‘ಡಂಕಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ರಾಜ್​ಕುಮಾರ್ ಹಿರಾನಿ ಯಾವಾಗಲೂ ಆ್ಯಕ್ಷನ್ ಸಿನಿಮಾ ಮಾಡಿದವರಲ್ಲ. ಕ್ಲಾಸ್ ಕಥೆ ಹೇಳೋಕೆ ಅವರು ಫೇಮಸ್. ‘ಡಂಕಿ’ ಟ್ರೇಲರ್ ನೋಡಿದ ಅನೇಕರಿಗೆ ಇದು ಕ್ಲಾಸ್ ಸಿನಿಮಾ ಅನ್ನೋದು ಗೊತ್ತಾಗಿತ್ತು. ‘ಡಂಕಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಬಗ್ಗೆ ರಾಜ್​ಕುಮಾರ್ ಹಿರಾನಿ ಮಾತನಾಡಿದ್ದಾರೆ. ಈ ಬಗ್ಗೆ ಮೊದಲೇ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.

‘ಡಂಕಿ’ ಸಿನಿಮಾ 150+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಶಾರುಖ್ ಅವರಂಥ ಸ್ಟಾರ್ ಹೀರೋಗೆ ಈ ಕಲೆಕ್ಷನ್ ಕಡಿಮೆಯೇ. ಈ ಬಗ್ಗೆ ರಾಜ್​ಕುಮಾರ್ ಹಿರಾನಿಗೆ ‘ನ್ಯೂಸ್​ 18’ ನಡೆಸಿದ ಕಾರ್ಯಕ್ರಮ ಒಂದರಲ್ಲಿ ಪ್ರಶ್ನೆ ಮಾಡಲಾಗಿದೆ. ಶಾರುಖ್ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಮಧ್ಯೆ ಕಲೆಕ್ಷನ್ ವಿಚಾರದಲ್ಲಿ ಮಾತುಕತೆ ನಡೆದಿತ್ತಂತೆ.

‘ಎರಡು ಬ್ಯಾಕ್ ಟು ಬ್ಯಾಕ್ ಆ್ಯಕ್ಷನ್ ಸಿನಿಮಾ ಮಾಡಿದ ಬಳಿಕ ಶಾರುಖ್ ಖಾನ್ ಅವರು ಡಂಕಿ ಸಿನಿಮಾ ಮಾಡಬಯಸಿದರು. ಈ ರೀತಿಯ ಸಿನಿಮಾ ಮಾಡಲು ಅವರಿಗೆ ಖುಷಿ ಇತ್ತು. ಆ್ಯಕ್ಷನ್ ಸಿನಿಮಾಗಳು ಜನರಿಗೆ ಹೆಚ್ಚು ಇಷ್ಟ ಆಗುತ್ತವೆ ಅನ್ನೋದು ಶಾರುಖ್ ಖಾನ್​ಗೆ ಗೊತ್ತಿತ್ತು. ಹೀಗಾಗಿ, ಡಂಕಿ ಸಿನಿಮಾದಿಂದ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಗಳಿಕೆ ನಿರೀಕ್ಷಿಸಬೇಡಿ ಎಂದು ನನಗೆ ಅವರು ಹೇಳುತ್ತಲೇ ಇದ್ದರು. ನಿಧಾನವಾಗಿ ಸಿನಿಮಾ ಗಳಿಕೆ ಮಾಡುತ್ತದೆ ಅನ್ನೋದು ಅವರಿಗೆ ಗೊತ್ತಿತ್ತು. ಅವರು ಹೇಳಿದಂತೆ ಆಯಿತು. ಇಡೀ ಕುಟುಂಬ ಸಿನಿಮಾ ನೋಡಲು ಬರುತ್ತಿದೆ’ ಎಂದಿದ್ದಾರೆ ರಾಜ್​ಕುಮಾರ್ ಹಿರಾನಿ.

ಇದನ್ನೂ ಓದಿ: ‘ಧೂಮ್ 4’ನಲ್ಲಿ ಶಾರುಖ್ ಖಾನ್ ನಾಯಕ? ಜೊತೆಯಾಗಲಿದ್ದಾರೆ ದಕ್ಷಿಣದ ನಟ?

‘ಮುನ್ನಾ ಭಾಯ್ ಎಂಬಿಬಿಎಸ್’ ಸಿನಿಮಾಗೆ ಶಾರುಖ್ ಖಾನ್ ಅವರು ಮೊದಲ ಆಯ್ಕೆ ಆಗಿದ್ದರು. ಆದರೆ, ಒಟ್ಟಿಗೆ ಕೆಲಸ ಮಾಡಲು ಆಗಲಿಲ್ಲ. ಸಿನಿಮಾ ಮಾಡಲು ಒಪ್ಪದ ಹೊರತಾಗಿಯೂ ಚಿತ್ರದ ಸ್ಕ್ರಿಪ್ಟ್​ನಲ್ಲಿ ಕೆಲವು ಮುಖ್ಯ ಬದಲಾವಣೆ ಮಾಡಲು ಶಾರುಖ್ ಖಾನ್ ಸೂಚಿಸಿದ್ದರು. ಇದು ಚಿತ್ರಕ್ಕೆ ಸಹಕಾರಿ ಆಗಿತ್ತು ಎಂದು ರಾಜ್​ಕುಮಾರ್ ಹಿರಾನಿ ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:35 am, Mon, 1 January 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ