AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ ಕಲೆಕ್ಷನ್ ಮಾಡಲ್ಲ ಅನ್ನೋದು ಶಾರುಖ್​ಗೂ ಗೊತ್ತಿತ್ತು’; ರಾಜ್​ಕುಮಾರ್ ಹಿರಾನಿ

‘ಡಂಕಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಬಗ್ಗೆ ರಾಜ್​ಕುಮಾರ್ ಹಿರಾನಿ ಮಾತನಾಡಿದ್ದಾರೆ. ಈ ಬಗ್ಗೆ ಮೊದಲೇ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.  

‘ಡಂಕಿ ಕಲೆಕ್ಷನ್ ಮಾಡಲ್ಲ ಅನ್ನೋದು ಶಾರುಖ್​ಗೂ ಗೊತ್ತಿತ್ತು’; ರಾಜ್​ಕುಮಾರ್ ಹಿರಾನಿ
ಡಂಕಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Jan 01, 2024 | 9:02 AM

Share

ಶಾರುಖ್ ಖಾನ್  (Shah Rukh Khan)ನಟನೆಯ ‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳು ಸೂಪರ್ ಹಿಟ್ ಆದವು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿವೆ. ಈ ಕಾರಣಕ್ಕೆ ‘ಡಂಕಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ರಾಜ್​ಕುಮಾರ್ ಹಿರಾನಿ ಯಾವಾಗಲೂ ಆ್ಯಕ್ಷನ್ ಸಿನಿಮಾ ಮಾಡಿದವರಲ್ಲ. ಕ್ಲಾಸ್ ಕಥೆ ಹೇಳೋಕೆ ಅವರು ಫೇಮಸ್. ‘ಡಂಕಿ’ ಟ್ರೇಲರ್ ನೋಡಿದ ಅನೇಕರಿಗೆ ಇದು ಕ್ಲಾಸ್ ಸಿನಿಮಾ ಅನ್ನೋದು ಗೊತ್ತಾಗಿತ್ತು. ‘ಡಂಕಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಬಗ್ಗೆ ರಾಜ್​ಕುಮಾರ್ ಹಿರಾನಿ ಮಾತನಾಡಿದ್ದಾರೆ. ಈ ಬಗ್ಗೆ ಮೊದಲೇ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.

‘ಡಂಕಿ’ ಸಿನಿಮಾ 150+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಶಾರುಖ್ ಅವರಂಥ ಸ್ಟಾರ್ ಹೀರೋಗೆ ಈ ಕಲೆಕ್ಷನ್ ಕಡಿಮೆಯೇ. ಈ ಬಗ್ಗೆ ರಾಜ್​ಕುಮಾರ್ ಹಿರಾನಿಗೆ ‘ನ್ಯೂಸ್​ 18’ ನಡೆಸಿದ ಕಾರ್ಯಕ್ರಮ ಒಂದರಲ್ಲಿ ಪ್ರಶ್ನೆ ಮಾಡಲಾಗಿದೆ. ಶಾರುಖ್ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಮಧ್ಯೆ ಕಲೆಕ್ಷನ್ ವಿಚಾರದಲ್ಲಿ ಮಾತುಕತೆ ನಡೆದಿತ್ತಂತೆ.

‘ಎರಡು ಬ್ಯಾಕ್ ಟು ಬ್ಯಾಕ್ ಆ್ಯಕ್ಷನ್ ಸಿನಿಮಾ ಮಾಡಿದ ಬಳಿಕ ಶಾರುಖ್ ಖಾನ್ ಅವರು ಡಂಕಿ ಸಿನಿಮಾ ಮಾಡಬಯಸಿದರು. ಈ ರೀತಿಯ ಸಿನಿಮಾ ಮಾಡಲು ಅವರಿಗೆ ಖುಷಿ ಇತ್ತು. ಆ್ಯಕ್ಷನ್ ಸಿನಿಮಾಗಳು ಜನರಿಗೆ ಹೆಚ್ಚು ಇಷ್ಟ ಆಗುತ್ತವೆ ಅನ್ನೋದು ಶಾರುಖ್ ಖಾನ್​ಗೆ ಗೊತ್ತಿತ್ತು. ಹೀಗಾಗಿ, ಡಂಕಿ ಸಿನಿಮಾದಿಂದ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಗಳಿಕೆ ನಿರೀಕ್ಷಿಸಬೇಡಿ ಎಂದು ನನಗೆ ಅವರು ಹೇಳುತ್ತಲೇ ಇದ್ದರು. ನಿಧಾನವಾಗಿ ಸಿನಿಮಾ ಗಳಿಕೆ ಮಾಡುತ್ತದೆ ಅನ್ನೋದು ಅವರಿಗೆ ಗೊತ್ತಿತ್ತು. ಅವರು ಹೇಳಿದಂತೆ ಆಯಿತು. ಇಡೀ ಕುಟುಂಬ ಸಿನಿಮಾ ನೋಡಲು ಬರುತ್ತಿದೆ’ ಎಂದಿದ್ದಾರೆ ರಾಜ್​ಕುಮಾರ್ ಹಿರಾನಿ.

ಇದನ್ನೂ ಓದಿ: ‘ಧೂಮ್ 4’ನಲ್ಲಿ ಶಾರುಖ್ ಖಾನ್ ನಾಯಕ? ಜೊತೆಯಾಗಲಿದ್ದಾರೆ ದಕ್ಷಿಣದ ನಟ?

‘ಮುನ್ನಾ ಭಾಯ್ ಎಂಬಿಬಿಎಸ್’ ಸಿನಿಮಾಗೆ ಶಾರುಖ್ ಖಾನ್ ಅವರು ಮೊದಲ ಆಯ್ಕೆ ಆಗಿದ್ದರು. ಆದರೆ, ಒಟ್ಟಿಗೆ ಕೆಲಸ ಮಾಡಲು ಆಗಲಿಲ್ಲ. ಸಿನಿಮಾ ಮಾಡಲು ಒಪ್ಪದ ಹೊರತಾಗಿಯೂ ಚಿತ್ರದ ಸ್ಕ್ರಿಪ್ಟ್​ನಲ್ಲಿ ಕೆಲವು ಮುಖ್ಯ ಬದಲಾವಣೆ ಮಾಡಲು ಶಾರುಖ್ ಖಾನ್ ಸೂಚಿಸಿದ್ದರು. ಇದು ಚಿತ್ರಕ್ಕೆ ಸಹಕಾರಿ ಆಗಿತ್ತು ಎಂದು ರಾಜ್​ಕುಮಾರ್ ಹಿರಾನಿ ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:35 am, Mon, 1 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು