AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ ಕಲೆಕ್ಷನ್ ಮಾಡಲ್ಲ ಅನ್ನೋದು ಶಾರುಖ್​ಗೂ ಗೊತ್ತಿತ್ತು’; ರಾಜ್​ಕುಮಾರ್ ಹಿರಾನಿ

‘ಡಂಕಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಬಗ್ಗೆ ರಾಜ್​ಕುಮಾರ್ ಹಿರಾನಿ ಮಾತನಾಡಿದ್ದಾರೆ. ಈ ಬಗ್ಗೆ ಮೊದಲೇ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.  

‘ಡಂಕಿ ಕಲೆಕ್ಷನ್ ಮಾಡಲ್ಲ ಅನ್ನೋದು ಶಾರುಖ್​ಗೂ ಗೊತ್ತಿತ್ತು’; ರಾಜ್​ಕುಮಾರ್ ಹಿರಾನಿ
ಡಂಕಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Jan 01, 2024 | 9:02 AM

Share

ಶಾರುಖ್ ಖಾನ್  (Shah Rukh Khan)ನಟನೆಯ ‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳು ಸೂಪರ್ ಹಿಟ್ ಆದವು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿವೆ. ಈ ಕಾರಣಕ್ಕೆ ‘ಡಂಕಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ರಾಜ್​ಕುಮಾರ್ ಹಿರಾನಿ ಯಾವಾಗಲೂ ಆ್ಯಕ್ಷನ್ ಸಿನಿಮಾ ಮಾಡಿದವರಲ್ಲ. ಕ್ಲಾಸ್ ಕಥೆ ಹೇಳೋಕೆ ಅವರು ಫೇಮಸ್. ‘ಡಂಕಿ’ ಟ್ರೇಲರ್ ನೋಡಿದ ಅನೇಕರಿಗೆ ಇದು ಕ್ಲಾಸ್ ಸಿನಿಮಾ ಅನ್ನೋದು ಗೊತ್ತಾಗಿತ್ತು. ‘ಡಂಕಿ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ಈ ಬಗ್ಗೆ ರಾಜ್​ಕುಮಾರ್ ಹಿರಾನಿ ಮಾತನಾಡಿದ್ದಾರೆ. ಈ ಬಗ್ಗೆ ಮೊದಲೇ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.

‘ಡಂಕಿ’ ಸಿನಿಮಾ 150+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಶಾರುಖ್ ಅವರಂಥ ಸ್ಟಾರ್ ಹೀರೋಗೆ ಈ ಕಲೆಕ್ಷನ್ ಕಡಿಮೆಯೇ. ಈ ಬಗ್ಗೆ ರಾಜ್​ಕುಮಾರ್ ಹಿರಾನಿಗೆ ‘ನ್ಯೂಸ್​ 18’ ನಡೆಸಿದ ಕಾರ್ಯಕ್ರಮ ಒಂದರಲ್ಲಿ ಪ್ರಶ್ನೆ ಮಾಡಲಾಗಿದೆ. ಶಾರುಖ್ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಮಧ್ಯೆ ಕಲೆಕ್ಷನ್ ವಿಚಾರದಲ್ಲಿ ಮಾತುಕತೆ ನಡೆದಿತ್ತಂತೆ.

‘ಎರಡು ಬ್ಯಾಕ್ ಟು ಬ್ಯಾಕ್ ಆ್ಯಕ್ಷನ್ ಸಿನಿಮಾ ಮಾಡಿದ ಬಳಿಕ ಶಾರುಖ್ ಖಾನ್ ಅವರು ಡಂಕಿ ಸಿನಿಮಾ ಮಾಡಬಯಸಿದರು. ಈ ರೀತಿಯ ಸಿನಿಮಾ ಮಾಡಲು ಅವರಿಗೆ ಖುಷಿ ಇತ್ತು. ಆ್ಯಕ್ಷನ್ ಸಿನಿಮಾಗಳು ಜನರಿಗೆ ಹೆಚ್ಚು ಇಷ್ಟ ಆಗುತ್ತವೆ ಅನ್ನೋದು ಶಾರುಖ್ ಖಾನ್​ಗೆ ಗೊತ್ತಿತ್ತು. ಹೀಗಾಗಿ, ಡಂಕಿ ಸಿನಿಮಾದಿಂದ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಗಳಿಕೆ ನಿರೀಕ್ಷಿಸಬೇಡಿ ಎಂದು ನನಗೆ ಅವರು ಹೇಳುತ್ತಲೇ ಇದ್ದರು. ನಿಧಾನವಾಗಿ ಸಿನಿಮಾ ಗಳಿಕೆ ಮಾಡುತ್ತದೆ ಅನ್ನೋದು ಅವರಿಗೆ ಗೊತ್ತಿತ್ತು. ಅವರು ಹೇಳಿದಂತೆ ಆಯಿತು. ಇಡೀ ಕುಟುಂಬ ಸಿನಿಮಾ ನೋಡಲು ಬರುತ್ತಿದೆ’ ಎಂದಿದ್ದಾರೆ ರಾಜ್​ಕುಮಾರ್ ಹಿರಾನಿ.

ಇದನ್ನೂ ಓದಿ: ‘ಧೂಮ್ 4’ನಲ್ಲಿ ಶಾರುಖ್ ಖಾನ್ ನಾಯಕ? ಜೊತೆಯಾಗಲಿದ್ದಾರೆ ದಕ್ಷಿಣದ ನಟ?

‘ಮುನ್ನಾ ಭಾಯ್ ಎಂಬಿಬಿಎಸ್’ ಸಿನಿಮಾಗೆ ಶಾರುಖ್ ಖಾನ್ ಅವರು ಮೊದಲ ಆಯ್ಕೆ ಆಗಿದ್ದರು. ಆದರೆ, ಒಟ್ಟಿಗೆ ಕೆಲಸ ಮಾಡಲು ಆಗಲಿಲ್ಲ. ಸಿನಿಮಾ ಮಾಡಲು ಒಪ್ಪದ ಹೊರತಾಗಿಯೂ ಚಿತ್ರದ ಸ್ಕ್ರಿಪ್ಟ್​ನಲ್ಲಿ ಕೆಲವು ಮುಖ್ಯ ಬದಲಾವಣೆ ಮಾಡಲು ಶಾರುಖ್ ಖಾನ್ ಸೂಚಿಸಿದ್ದರು. ಇದು ಚಿತ್ರಕ್ಕೆ ಸಹಕಾರಿ ಆಗಿತ್ತು ಎಂದು ರಾಜ್​ಕುಮಾರ್ ಹಿರಾನಿ ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:35 am, Mon, 1 January 24

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್