AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lala Amarnath: ಖ್ಯಾತ ಕ್ರಿಕೆಟರ್​ ಬಯೋಪಿಕ್​ ಮಾಡಲು ಮುಂದಾದ ನಿರ್ದೇಶಕ ರಾಜ್​ಕುಮಾರ್​ ಹಿರಾನಿ

Rajkumar Hirani | Lala Amarnath Biopic: ಲಾಲಾ​ ಅಮರನಾಥ್​ ಬದುಕಿನ ಕಥೆಯನ್ನು ಬೇರೆಯದೇ ಫ್ಲೇವರ್​ನಲ್ಲಿ ತೆರೆಗೆ ತರಲು ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಈ ಬಗ್ಗೆ ವರದಿ ಆಗಿದೆ.

Lala Amarnath: ಖ್ಯಾತ ಕ್ರಿಕೆಟರ್​ ಬಯೋಪಿಕ್​ ಮಾಡಲು ಮುಂದಾದ ನಿರ್ದೇಶಕ ರಾಜ್​ಕುಮಾರ್​ ಹಿರಾನಿ
ರಾಜ್ಕುಮಾರ್ ಹಿರಾನಿ
Follow us
ಮದನ್​ ಕುಮಾರ್​
|

Updated on:Feb 09, 2023 | 5:36 PM

ಬಾಲಿವುಡ್​ನಲ್ಲಿ ನಿರ್ದೇಶಕ ರಾಜ್​ಕುಮಾರ್​ ಹಿರಾನಿ (Rajkumar Hirani) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನವಾಗುತ್ತದೆ. ಅವರ ಕೆಲಸದ ಬಗ್ಗೆ ಸಿನಿಪ್ರಿಯರಿಗೆ ತುಂಬ ಭರವಸೆ ಇದೆ. ‘3 ಈಡಿಯಟ್ಸ್​’, ‘ಸಂಜು’, ‘ಮುನ್ನಾಭಾಯ್​ ಎಂಬಿಬಿಎಸ್​’, ‘ಲಗೇರಹೋ ಮುನ್ನಾಭಾಯ್​’, ‘ಪಿಕೆ’ ಸಿನಿಮಾ ಮಾಡಿ ರಾಜ್​ಕುಮಾರ್​ ಹಿರಾನಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ಶಾರುಖ್​ ಖಾನ್​ ಜೊತೆ ‘ಡಂಕಿ’ (Dunki Movie) ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಬಳಿಕ ಅವರು ಯಾವ ಪ್ರಾಜೆಕ್ಟ್​ ಕೈಗೆತ್ತಿಕೊಳ್ಳಲಿದ್ದಾರೆ ಎಂಬ ಬಗ್ಗೆ ಸುದ್ದಿ ಕೇಳಿಬಂದಿದೆ. ಮಾಜಿ ಕ್ರಿಕೆಟರ್​ ಲಾಲಾ​ ಅಮರನಾಥ್​ (Lala Amarnath) ಜೀವನದ ಕುರಿತು ರಾಜ್​ಕುಮಾರ್​ ಹಿರಾನಿ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಈ ಬಯೋಪಿಕ್​ ತುಂಬ ಡಿಫರೆಂಟ್​ ಆಗಿ ಮೂಡಿಬರಲಿದೆ.

ಈವರೆಗಿನ ತಮ್ಮ ವೃತ್ತಿಜೀವನದಲ್ಲಿ ರಾಜ್​ಕುಮಾರ್​ ಹಿರಾನಿ ಅವರು ಮಾಡಿದ ಏಕೈಕ ಬಯೋಪಿಕ್​ ಎಂದರೆ ‘ಸಂಜು’. ಖ್ಯಾತ ನಟ ಸಂಜಯ್​ ದತ್​ ಅವರ ಜೀವನಾಧಾರಿತ ಆ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ಅವರು ಲಾಲಾ​ ಅಮರ​ನಾಥ್​ ಕುರಿತು ಸಿನಿಮಾ ಮಾಡುವ ಉತ್ಸಾಹದಲ್ಲಿ ಇದ್ದಾರೆ. ಹಾಗಂತ ಅವರ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸದ್ಯಕ್ಕೆ ಇದು ಕೇವಲ ಅಂತೆ-ಕಂತೆ ಹಂತದಲ್ಲಿದೆ.

ಇದನ್ನೂ ಓದಿ: ತೆರೆ ಮೇಲೆ ಶೋಯೆಬ್ ಅಖ್ತರ್ ಜೀವನ ಚರಿತ್ರೆ; ನನ್ನ ಬಯೋಪಿಕ್​ಗೆ ಸಲ್ಮಾನ್ ಖಾನ್ ಸೂಕ್ತ ಎಂದ ಪಾಕ್ ಬೌಲರ್

ಇದನ್ನೂ ಓದಿ
Image
ಲತಾ ಮಂಗೇಶ್ಕರ್​ ಕುರಿತು ಬರಲಿದೆ ಬಯೋಪಿಕ್​; ರೇಸ್​ನಲ್ಲಿದ್ದಾರೆ ಖ್ಯಾತ ನಿರ್ದೇಶಕರು
Image
ಕಪಿಲ್​ ಶರ್ಮಾ ಕುರಿತು ಬಯೋಪಿಕ್​; ಅಧಿಕೃತ ಘೋಷಣೆ ಮಾಡಿದ ಚಿತ್ರತಂಡ
Image
ದ್ರಾವಿಡ್​ ಬಯೋಪಿಕ್​ನಲ್ಲಿ ಸುದೀಪ್ ಮುಖ್ಯಭೂಮಿಕೆ? ಹಕ್ಕು ತಂದ್ರೆ ಸಿನಿಮಾ ಮಾಡ್ತೀನಿ ಎಂದ ಕಬೀರ್​ ಖಾನ್
Image
ಪುನೀತ್​ ಕುರಿತು ಸಿದ್ಧವಾಗಲಿದೆ ಬಯೋಪಿಕ್​? ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನೀಡಿದ್ರು ಸೂಚನೆ

ಭಾರತಕ್ಕಾಗಿ 24 ಟೆಸ್ಟ್​ ಪಂದ್ಯಗಳನ್ನು ಆಡಿದ ಕೀರ್ತಿ ಲಾಲಾ​ ಅಮರ​ನಾಥ್​ ಅವರಿಗೆ ಸಲ್ಲುತ್ತದೆ. ಮಾಮೂಲಿ ಕ್ರೀಡಾಧಾರಿತ ಸಿನಿಮಾ ರೀತಿಯಲ್ಲಿ ಅವರ ಬದುಕಿನ ಕಥೆಯನ್ನು ಕಟ್ಟಿಕೊಡುವ ಬದಲು ಬೇರೆಯದೇ ಫ್ಲೇವರ್​ನಲ್ಲಿ ಈ ಸಿನಿಮಾವನ್ನು ನಿರ್ದೇಶಿಸಲು ರಾಜ್​ಕುಮಾರ್​ ಹಿರಾನಿ ಪ್ಲ್ಯಾನ್​ ಮಾಡಿಕೊಂಡಿದ್ದಾರೆ ಎಂದು ಕೆಲವೆಡೆ ವರದಿ ಆಗಿದೆ.

ಇದನ್ನೂ ಓದಿ: Lionel Messi Biopic: ‘ಲಿಯೋನೆಲ್‌ ಮೆಸ್ಸಿ ಬಯೋಪಿಕ್​ನಲ್ಲಿ ಅಕ್ಷಯ್​ ಕುಮಾರ್​ ನಟಿಸಬೇಕು’; ಮೀಮ್ಸ್​ ವೈರಲ್​

ಲಾಲಾ​ ಅಮರನಾಥ್​ ಬದುಕಿನ ವಿವರಗಳಿಂದ ರಾಜ್​ಕುಮಾರ್​ ಹಿರಾನಿ ಪ್ರೇರೇಪಿತರಾಗಿದ್ದಾರೆ. ಹಾಗಾಗಿ ಈ ಸ್ಕ್ರಿಪ್ಟ್​ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಒಂದು ಮೂಲದ ಪ್ರಕಾರ, ಇದೇ ಕಥೆಯನ್ನು ಅವರು ಶಾರುಖ್​ ಖಾನ್​ಗೆ ಹೇಳಿದ್ದರು. ಆದರೆ ಶಾರುಖ್​ ಖಾನ್​ ಒಪ್ಪಿಕೊಂಡಿಲ್ಲ. ಅದರ ಬದಲು ಅವರಿಬ್ಬರು ಈಗ ‘ಡಂಕಿ’ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರದ ಕೆಲಗಳು ಪೂರ್ಣಗೊಂಡ ಬಳಿಕ ಲಾಲಾ​ ಅಮರನಾಥ್​ ಬಯೋಪಿಕ್​ ಕೆಲಸಗಳು ಆರಂಭ ಆಗಲಿವೆ.

ರಾಜ್​ಕುಮಾರ್​ ಹಿರಾನಿ ಅವರು ಪ್ರತಿ ಸಿನಿಮಾದಲ್ಲಿ ಒಂದಿಲ್ಲೊಂದು ವಿಶೇಷವನ್ನು ಅಭಿಮಾನಿಗಳಿಗೆ ಪರಿಚಯಿಸುತ್ತಾರೆ. ಸಿನಿಮಾ ಮಾಡಲು ಅವರು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಾರೆ. ಲೇಟ್​ ಆದ್ರೂ ಲೇಟೆಸ್ಟ್​ ಆಗಿ ಜನರ ಮುಂದೆ ಬರಬೇಕು ಎಂಬ ನಿಯಮ ಅವರದ್ದು. ಹಾಗಾಗಿ ‘ಡಂಕಿ’ ಚಿತ್ರ ಕೂಡ ಬೆಟ್ಟದಷ್ಟು ನಿರೀಕ್ಷೆ ಹುಟ್ಟುಹಾಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:36 pm, Thu, 9 February 23

ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ