AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿಕೆ ಕಂಡ ‘ಡಂಕಿ’ ಸಿನಿಮಾ ಕಲೆಕ್ಷನ್; ಎರಡು ದಿನಕ್ಕೆ ಆದ ಗಳಿಕೆ ಎಷ್ಟು ಕೋಟಿ ರೂಪಾಯಿ?

‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳಲ್ಲಿ ಶಾರುಖ್ ಖಾನ್ ಅವರು ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದರು. ‘ಡಂಕಿ’ ಸಿನಿಮಾದಲ್ಲಿ ಅವರು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲು ಫೈಟ್ಸ್ ಇಲ್ಲ. ಈ ಕಾರಣಕ್ಕೆ ಸಿನಿಮಾ ನಿಧಾನ ಗತಿಯಲ್ಲಿ ಗಳಿಕೆ ಮಾಡುತ್ತಿದೆ.

ಇಳಿಕೆ ಕಂಡ ‘ಡಂಕಿ’ ಸಿನಿಮಾ ಕಲೆಕ್ಷನ್; ಎರಡು ದಿನಕ್ಕೆ ಆದ ಗಳಿಕೆ ಎಷ್ಟು ಕೋಟಿ ರೂಪಾಯಿ?
‘ಡಂಕಿ’ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 23, 2023 | 9:51 AM

Share

ಶಾರುಖ್ ಖಾನ್ (Shah Rukh Khan) ಅವರು ‘ಡಂಕಿ’ ಸಿನಿಮಾದಲ್ಲಿ ಮಾಸ್ ಅವತಾರ ಬಿಟ್ಟು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾಗೆ ಪ್ರೇಕ್ಷಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಪರ್ಫಾರ್ಮೆನ್ಸ್ ತೋರಿಸುತ್ತಿದೆ. ರಾಜ್​ಕುಮಾರ್ ಹಿರಾನಿ ನಿರ್ದೇಶನದ ಈ ಸಿನಿಮಾ ಎರಡನೇ ದಿನ (ಡಿಸೆಂಬರ್ 22) ಕೇವಲ 20 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಗಳಿಕೆ ಎರಡು ದಿನಕ್ಕೆ 50 ಕೋಟಿ ರೂಪಾಯಿ ಆಗಿದೆ. ಈ ಚಿತ್ರ 300 ಕೋಟಿ ರೂಪಾಯಿ ಕ್ಲಬ್ ಸೇರೋದು ಅನುಮಾನ ಎನ್ನಲಾಗುತ್ತಿದೆ.

‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳಲ್ಲಿ ಶಾರುಖ್ ಖಾನ್ ಅವರು ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದರು. ‘ಡಂಕಿ’ ಸಿನಿಮಾದಲ್ಲಿ ಅವರು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲು ಫೈಟ್ಸ್ ಇಲ್ಲ. ಈ ಕಾರಣಕ್ಕೆ ಸಿನಿಮಾ ನಿಧಾನ ಗತಿಯಲ್ಲಿ ಗಳಿಕೆ ಮಾಡುತ್ತಿದೆ. ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಒಟ್ಟಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

‘ಡಂಕಿ’ ಸಿನಿಮಾ ಮೊದಲ ದಿನ 30 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ 19.20 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡಿದಂತೆ ಆಗಿದೆ. ವಿದೇಶದ ಬಾಕ್ಸ್ ಆಫೀಸ್​ನಲ್ಲೂ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ವೀಕೆಂಡ್​ನಲ್ಲಿ ಸಿನಿಮಾ ಯಾವ ರೀತಿಯಲ್ಲಿ ಗಳಿಕೆ ಮಾಡಲಿದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಮೊದಲ ದಿನ 30 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಡಂಕಿ’ ಸಿನಿಮಾ

ಶನಿವಾರ, ಭಾನುವಾರ ಹಾಗೂ ಸೋಮವಾರ (ಕ್ರಿಸ್​ಮಸ್ ರಜೆ) ಚಿತ್ರಕ್ಕೆ ಪ್ರಮುಖವಾಗಿದೆ. ಈ ದಿನಗಳಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡಲೇಬೇಕಿದೆ. ಹಿಂದಿ ಬೆಲ್ಟ್​ನಲ್ಲಿ ಈ ಚಿತ್ರಕ್ಕೆ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದಿಂದ ತೀವ್ರ ಸ್ಪರ್ಧೆ ಇದೆ. ಈ ಸ್ಪರ್ಧೆಯನ್ನು ಎದುರಿಸಿ ನಿಲ್ಲಬೇಕಾದ ಅನಿವಾರ್ಯತೆ ‘ಡಂಕಿ’ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ