AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿಕೆ ಕಂಡ ‘ಡಂಕಿ’ ಸಿನಿಮಾ ಕಲೆಕ್ಷನ್; ಎರಡು ದಿನಕ್ಕೆ ಆದ ಗಳಿಕೆ ಎಷ್ಟು ಕೋಟಿ ರೂಪಾಯಿ?

‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳಲ್ಲಿ ಶಾರುಖ್ ಖಾನ್ ಅವರು ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದರು. ‘ಡಂಕಿ’ ಸಿನಿಮಾದಲ್ಲಿ ಅವರು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲು ಫೈಟ್ಸ್ ಇಲ್ಲ. ಈ ಕಾರಣಕ್ಕೆ ಸಿನಿಮಾ ನಿಧಾನ ಗತಿಯಲ್ಲಿ ಗಳಿಕೆ ಮಾಡುತ್ತಿದೆ.

ಇಳಿಕೆ ಕಂಡ ‘ಡಂಕಿ’ ಸಿನಿಮಾ ಕಲೆಕ್ಷನ್; ಎರಡು ದಿನಕ್ಕೆ ಆದ ಗಳಿಕೆ ಎಷ್ಟು ಕೋಟಿ ರೂಪಾಯಿ?
‘ಡಂಕಿ’ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 23, 2023 | 9:51 AM

Share

ಶಾರುಖ್ ಖಾನ್ (Shah Rukh Khan) ಅವರು ‘ಡಂಕಿ’ ಸಿನಿಮಾದಲ್ಲಿ ಮಾಸ್ ಅವತಾರ ಬಿಟ್ಟು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾಗೆ ಪ್ರೇಕ್ಷಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಪರ್ಫಾರ್ಮೆನ್ಸ್ ತೋರಿಸುತ್ತಿದೆ. ರಾಜ್​ಕುಮಾರ್ ಹಿರಾನಿ ನಿರ್ದೇಶನದ ಈ ಸಿನಿಮಾ ಎರಡನೇ ದಿನ (ಡಿಸೆಂಬರ್ 22) ಕೇವಲ 20 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಗಳಿಕೆ ಎರಡು ದಿನಕ್ಕೆ 50 ಕೋಟಿ ರೂಪಾಯಿ ಆಗಿದೆ. ಈ ಚಿತ್ರ 300 ಕೋಟಿ ರೂಪಾಯಿ ಕ್ಲಬ್ ಸೇರೋದು ಅನುಮಾನ ಎನ್ನಲಾಗುತ್ತಿದೆ.

‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳಲ್ಲಿ ಶಾರುಖ್ ಖಾನ್ ಅವರು ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದರು. ‘ಡಂಕಿ’ ಸಿನಿಮಾದಲ್ಲಿ ಅವರು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲು ಫೈಟ್ಸ್ ಇಲ್ಲ. ಈ ಕಾರಣಕ್ಕೆ ಸಿನಿಮಾ ನಿಧಾನ ಗತಿಯಲ್ಲಿ ಗಳಿಕೆ ಮಾಡುತ್ತಿದೆ. ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಒಟ್ಟಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

‘ಡಂಕಿ’ ಸಿನಿಮಾ ಮೊದಲ ದಿನ 30 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ 19.20 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡಿದಂತೆ ಆಗಿದೆ. ವಿದೇಶದ ಬಾಕ್ಸ್ ಆಫೀಸ್​ನಲ್ಲೂ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ವೀಕೆಂಡ್​ನಲ್ಲಿ ಸಿನಿಮಾ ಯಾವ ರೀತಿಯಲ್ಲಿ ಗಳಿಕೆ ಮಾಡಲಿದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಮೊದಲ ದಿನ 30 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಡಂಕಿ’ ಸಿನಿಮಾ

ಶನಿವಾರ, ಭಾನುವಾರ ಹಾಗೂ ಸೋಮವಾರ (ಕ್ರಿಸ್​ಮಸ್ ರಜೆ) ಚಿತ್ರಕ್ಕೆ ಪ್ರಮುಖವಾಗಿದೆ. ಈ ದಿನಗಳಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡಲೇಬೇಕಿದೆ. ಹಿಂದಿ ಬೆಲ್ಟ್​ನಲ್ಲಿ ಈ ಚಿತ್ರಕ್ಕೆ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದಿಂದ ತೀವ್ರ ಸ್ಪರ್ಧೆ ಇದೆ. ಈ ಸ್ಪರ್ಧೆಯನ್ನು ಎದುರಿಸಿ ನಿಲ್ಲಬೇಕಾದ ಅನಿವಾರ್ಯತೆ ‘ಡಂಕಿ’ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ