AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿಕೆ ಕಂಡ ‘ಡಂಕಿ’ ಸಿನಿಮಾ ಕಲೆಕ್ಷನ್; ಎರಡು ದಿನಕ್ಕೆ ಆದ ಗಳಿಕೆ ಎಷ್ಟು ಕೋಟಿ ರೂಪಾಯಿ?

‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳಲ್ಲಿ ಶಾರುಖ್ ಖಾನ್ ಅವರು ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದರು. ‘ಡಂಕಿ’ ಸಿನಿಮಾದಲ್ಲಿ ಅವರು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲು ಫೈಟ್ಸ್ ಇಲ್ಲ. ಈ ಕಾರಣಕ್ಕೆ ಸಿನಿಮಾ ನಿಧಾನ ಗತಿಯಲ್ಲಿ ಗಳಿಕೆ ಮಾಡುತ್ತಿದೆ.

ಇಳಿಕೆ ಕಂಡ ‘ಡಂಕಿ’ ಸಿನಿಮಾ ಕಲೆಕ್ಷನ್; ಎರಡು ದಿನಕ್ಕೆ ಆದ ಗಳಿಕೆ ಎಷ್ಟು ಕೋಟಿ ರೂಪಾಯಿ?
‘ಡಂಕಿ’ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 23, 2023 | 9:51 AM

Share

ಶಾರುಖ್ ಖಾನ್ (Shah Rukh Khan) ಅವರು ‘ಡಂಕಿ’ ಸಿನಿಮಾದಲ್ಲಿ ಮಾಸ್ ಅವತಾರ ಬಿಟ್ಟು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾಗೆ ಪ್ರೇಕ್ಷಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಪರ್ಫಾರ್ಮೆನ್ಸ್ ತೋರಿಸುತ್ತಿದೆ. ರಾಜ್​ಕುಮಾರ್ ಹಿರಾನಿ ನಿರ್ದೇಶನದ ಈ ಸಿನಿಮಾ ಎರಡನೇ ದಿನ (ಡಿಸೆಂಬರ್ 22) ಕೇವಲ 20 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಗಳಿಕೆ ಎರಡು ದಿನಕ್ಕೆ 50 ಕೋಟಿ ರೂಪಾಯಿ ಆಗಿದೆ. ಈ ಚಿತ್ರ 300 ಕೋಟಿ ರೂಪಾಯಿ ಕ್ಲಬ್ ಸೇರೋದು ಅನುಮಾನ ಎನ್ನಲಾಗುತ್ತಿದೆ.

‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳಲ್ಲಿ ಶಾರುಖ್ ಖಾನ್ ಅವರು ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದರು. ‘ಡಂಕಿ’ ಸಿನಿಮಾದಲ್ಲಿ ಅವರು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲು ಫೈಟ್ಸ್ ಇಲ್ಲ. ಈ ಕಾರಣಕ್ಕೆ ಸಿನಿಮಾ ನಿಧಾನ ಗತಿಯಲ್ಲಿ ಗಳಿಕೆ ಮಾಡುತ್ತಿದೆ. ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಒಟ್ಟಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

‘ಡಂಕಿ’ ಸಿನಿಮಾ ಮೊದಲ ದಿನ 30 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ 19.20 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡಿದಂತೆ ಆಗಿದೆ. ವಿದೇಶದ ಬಾಕ್ಸ್ ಆಫೀಸ್​ನಲ್ಲೂ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ವೀಕೆಂಡ್​ನಲ್ಲಿ ಸಿನಿಮಾ ಯಾವ ರೀತಿಯಲ್ಲಿ ಗಳಿಕೆ ಮಾಡಲಿದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಮೊದಲ ದಿನ 30 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಡಂಕಿ’ ಸಿನಿಮಾ

ಶನಿವಾರ, ಭಾನುವಾರ ಹಾಗೂ ಸೋಮವಾರ (ಕ್ರಿಸ್​ಮಸ್ ರಜೆ) ಚಿತ್ರಕ್ಕೆ ಪ್ರಮುಖವಾಗಿದೆ. ಈ ದಿನಗಳಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡಲೇಬೇಕಿದೆ. ಹಿಂದಿ ಬೆಲ್ಟ್​ನಲ್ಲಿ ಈ ಚಿತ್ರಕ್ಕೆ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದಿಂದ ತೀವ್ರ ಸ್ಪರ್ಧೆ ಇದೆ. ಈ ಸ್ಪರ್ಧೆಯನ್ನು ಎದುರಿಸಿ ನಿಲ್ಲಬೇಕಾದ ಅನಿವಾರ್ಯತೆ ‘ಡಂಕಿ’ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!