AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿಕೆ ಕಂಡ ‘ಡಂಕಿ’ ಸಿನಿಮಾ ಕಲೆಕ್ಷನ್; ಎರಡು ದಿನಕ್ಕೆ ಆದ ಗಳಿಕೆ ಎಷ್ಟು ಕೋಟಿ ರೂಪಾಯಿ?

‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳಲ್ಲಿ ಶಾರುಖ್ ಖಾನ್ ಅವರು ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದರು. ‘ಡಂಕಿ’ ಸಿನಿಮಾದಲ್ಲಿ ಅವರು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲು ಫೈಟ್ಸ್ ಇಲ್ಲ. ಈ ಕಾರಣಕ್ಕೆ ಸಿನಿಮಾ ನಿಧಾನ ಗತಿಯಲ್ಲಿ ಗಳಿಕೆ ಮಾಡುತ್ತಿದೆ.

ಇಳಿಕೆ ಕಂಡ ‘ಡಂಕಿ’ ಸಿನಿಮಾ ಕಲೆಕ್ಷನ್; ಎರಡು ದಿನಕ್ಕೆ ಆದ ಗಳಿಕೆ ಎಷ್ಟು ಕೋಟಿ ರೂಪಾಯಿ?
‘ಡಂಕಿ’ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Dec 23, 2023 | 9:51 AM

Share

ಶಾರುಖ್ ಖಾನ್ (Shah Rukh Khan) ಅವರು ‘ಡಂಕಿ’ ಸಿನಿಮಾದಲ್ಲಿ ಮಾಸ್ ಅವತಾರ ಬಿಟ್ಟು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾಗೆ ಪ್ರೇಕ್ಷಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಪರ್ಫಾರ್ಮೆನ್ಸ್ ತೋರಿಸುತ್ತಿದೆ. ರಾಜ್​ಕುಮಾರ್ ಹಿರಾನಿ ನಿರ್ದೇಶನದ ಈ ಸಿನಿಮಾ ಎರಡನೇ ದಿನ (ಡಿಸೆಂಬರ್ 22) ಕೇವಲ 20 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಗಳಿಕೆ ಎರಡು ದಿನಕ್ಕೆ 50 ಕೋಟಿ ರೂಪಾಯಿ ಆಗಿದೆ. ಈ ಚಿತ್ರ 300 ಕೋಟಿ ರೂಪಾಯಿ ಕ್ಲಬ್ ಸೇರೋದು ಅನುಮಾನ ಎನ್ನಲಾಗುತ್ತಿದೆ.

‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳಲ್ಲಿ ಶಾರುಖ್ ಖಾನ್ ಅವರು ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದರು. ‘ಡಂಕಿ’ ಸಿನಿಮಾದಲ್ಲಿ ಅವರು ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲು ಫೈಟ್ಸ್ ಇಲ್ಲ. ಈ ಕಾರಣಕ್ಕೆ ಸಿನಿಮಾ ನಿಧಾನ ಗತಿಯಲ್ಲಿ ಗಳಿಕೆ ಮಾಡುತ್ತಿದೆ. ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಒಟ್ಟಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

‘ಡಂಕಿ’ ಸಿನಿಮಾ ಮೊದಲ ದಿನ 30 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ 19.20 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾ ಸುಮಾರು 50 ಕೋಟಿ ರೂಪಾಯಿ ಗಳಿಕೆ ಮಾಡಿದಂತೆ ಆಗಿದೆ. ವಿದೇಶದ ಬಾಕ್ಸ್ ಆಫೀಸ್​ನಲ್ಲೂ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ವೀಕೆಂಡ್​ನಲ್ಲಿ ಸಿನಿಮಾ ಯಾವ ರೀತಿಯಲ್ಲಿ ಗಳಿಕೆ ಮಾಡಲಿದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಮೊದಲ ದಿನ 30 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಡಂಕಿ’ ಸಿನಿಮಾ

ಶನಿವಾರ, ಭಾನುವಾರ ಹಾಗೂ ಸೋಮವಾರ (ಕ್ರಿಸ್​ಮಸ್ ರಜೆ) ಚಿತ್ರಕ್ಕೆ ಪ್ರಮುಖವಾಗಿದೆ. ಈ ದಿನಗಳಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡಲೇಬೇಕಿದೆ. ಹಿಂದಿ ಬೆಲ್ಟ್​ನಲ್ಲಿ ಈ ಚಿತ್ರಕ್ಕೆ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದಿಂದ ತೀವ್ರ ಸ್ಪರ್ಧೆ ಇದೆ. ಈ ಸ್ಪರ್ಧೆಯನ್ನು ಎದುರಿಸಿ ನಿಲ್ಲಬೇಕಾದ ಅನಿವಾರ್ಯತೆ ‘ಡಂಕಿ’ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು