Dunki Twitter Review: ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ‘ಡಂಕಿ’ ಸಿನಿಮಾ; ನೆಟ್ಟಿಗರ ವಿಮರ್ಶೆ ಹೇಗಿದೆ?

ಒಂದು ದೇಶದಿಂದ ಇನ್ನೊಂದು ದೇಶಕ್ಕೆ ತೆರಳಲು ವೀಸಾ ಪಡೆಯಬೇಕು. ಬಡವರಿಗೆ ಸುಲಭವಾಗಿ ವೀಸಾ ಸಿಗುವುದಿಲ್ಲ. ವಿದೇಶಕ್ಕೆ ಹೋಗಿ ಒಳ್ಳೆಯ ಉದ್ಯೋಗ ಮಾಡಬೇಕು ಎಂದು ಕನಸು ಕಂಡ ಬಡವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ. ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

Dunki Twitter Review: ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ‘ಡಂಕಿ’ ಸಿನಿಮಾ; ನೆಟ್ಟಿಗರ ವಿಮರ್ಶೆ ಹೇಗಿದೆ?
‘ಡಂಕಿ’ ಸಿನಿಮಾ ಪೋಸ್ಟರ್​
Follow us
|

Updated on: Dec 21, 2023 | 1:20 PM

ವಿಶ್ವಾದ್ಯಂತ ‘ಡಂಕಿ’ ಸಿನಿಮಾ (Dunki Movie) ಬಿಡುಗಡೆ ಆಗಿದೆ. ಈ ಸಿನಿಮಾಗೆ ರಾಜ್​ಕುಮಾರ್​ ಹಿರಾನಿ ಅವರು ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್​, ತಾಪ್ಸಿ ಪನ್ನು, ಬೊಮನ್​ ಇರಾನಿ, ವಿಕ್ಕಿ ಕೌಶಲ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ಭಿನ್ನವಾದ ಕಾನ್ಸೆಪ್ಟ್​ ಆಯ್ಕೆ ಮಾಡಿಕೊಂಡು ರಾಜ್​ಕುಮಾರ್​ ಹಿರಾನಿ (Rajkumar Hirani) ಈ ಸಿನಿಮಾ ಮಾಡಿದ್ದಾರೆ. ಮೊದಲ ದಿನ ಮೊದಲ ಶೋ ನೋಡಿದ ಪ್ರೇಕ್ಷಕರು ಸೋಶಿಯಲ್​ ಮೀಡಿಯಾದಲ್ಲಿ ವಿಮರ್ಶೆ (Dunki Review) ಹಂಚಿಕೊಳ್ಳುತ್ತಿದ್ದಾರೆ. ಕೆಲವರಿಗೆ ‘ಡಂಕಿ’ ಸಿನಿಮಾ ಸಖತ್​ ಇಷ್ಟವಾಗಿದೆ. ಆದರೆ ಕೆಲವರಿಗೆ ಇಷ್ಟವಾಗಿಲ್ಲ.

ಇದು ಕ್ಲಾಸ್​ ಸಿನಿಮಾ. ಹಾಗಾಗಿ ಕ್ಲಾಸ್​ ಪ್ರೇಕ್ಷಕರು ಇದನ್ನು ಎಂಜಾಯ್​ ಮಾಡುತ್ತಿದ್ದಾರೆ. ‘ಡಂಕಿ’ ಸಿನಿಮಾದಲ್ಲಿ ಹೊಡಿಬಡಿ ದೃಶ್ಯಗಳು ಇಲ್ಲ. ಅದರ ಬದಲು ಎಮೋಷನ್​ ತುಂಬಿದೆ. ಫ್ಯಾಮಿಲಿ ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟ ಆಗುತ್ತದೆ. ಎಂದಿನಂತೆ ರಾಜ್​ಕುಮಾರ್ ಹಿರಾನಿ ಅವರು ಒಂದು ಉತ್ತಮವಾದ ಮೆಸೇಜ್​ ನೀಡಿದ್ದಾರೆ. ಮೊದಲ ದಿನ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಶಾರುಖ್​ ಖಾನ್ ಅವರ ನಟನೆ, ರಾಜ್​ಕುಮಾರ್​ ಹಿರಾನಿ ಅವರ ನಿರ್ದೇಶನಕ್ಕೆ ಅಭಿಮಾನಿಗಳು ಫುಲ್​ ಮಾರ್ಕ್ಸ್​ ನೀಡುತ್ತಿದ್ದಾರೆ. ಒಂದು ದೇಶದಿಂದ ಇನ್ನೊಂದು ದೇಶಕ್ಕೆ ತೆರಳಲು ವೀಸಾ ಪಡೆಯಬೇಕು. ಬಡವರಿಗೆ ಸುಲಭವಾಗಿ ವೀಸಾ ಸಿಗುವುದಿಲ್ಲ. ಬೇರೆ ದೇಶಕ್ಕೆ ಹೋಗಿ ಒಳ್ಳೆಯ ಉದ್ಯೋಗ ಮಾಡಬೇಕು ಎಂದು ಕನಸು ಕಂಡ ಬಡವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ.

2023ರಲ್ಲಿ ‘ಜವಾನ್​’ ಮತ್ತು ‘ಪಠಾಣ್’ ಸಿನಿಮಾಗಳಿಂದ ಶಾರುಖ್​ ಖಾನ್​ ಅವರಿಗೆ ಭರ್ಜರಿ ಗೆಲವು ಸಿಕ್ಕಿತ್ತು. ಈಗ ಈ ವರ್ಷದಲ್ಲಿ ಅವರ ಮೂರನೇ ಸಿನಿಮಾ ‘ಡಂಕಿ’ ತೆರೆಕಂಡಿದೆ. ಕೆಲವರು ಈ ಚಿತ್ರವನ್ನು ಟೀಕಿಸಿದ್ದಾರೆ. ನಿರೀಕ್ಷಿಸಿದ ರೀತಿಯಲ್ಲಿ ಇದು ಮೂಡಿಬಂದಿಲ್ಲ ಎಂದು ಒಂದಷ್ಟು ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Dunki Movie Review: ನಗಿಸಿ, ಅಳಿಸಿ, ಸಂದೇಶ ನೀಡುವ ಟಿಪಿಕಲ್​ ರಾಜ್​ಕುಮಾರ್ ಹಿರಾನಿ ಸಿನಿಮಾ ‘ಡಂಕಿ’

ರಾಜ್​ಕುಮಾರ್​ ಹಿರಾನಿ ಅವರು ಇನ್ನೂ ಚೆನ್ನಾಗಿ ಈ ಸಿನಿಮಾವನ್ನು ಕಟ್ಟಿಕೊಡಬಹುದಿತ್ತು ಎಂಬ ಅಭಿಪ್ರಾಯ ಕೂಡ ಪ್ರೇಕ್ಷಕರಿಂದ ಕೇಳಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ