Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ‘ಡಂಕಿ’ ಸಿನಿಮಾ ತೆರೆಕಾಣುತ್ತಿರುವ ಹಿನ್ನೆಲೆಯಲ್ಲಿ ಶಾರುಖ್​ ಖಾನ್​ ಅವರು ದೇವರ ಆಶೀರ್ವಾದ ಪಡೆದಿದ್ದಾರೆ.

‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​
ಶಾರುಖ್​ ಖಾನ್​
Follow us
ಮದನ್​ ಕುಮಾರ್​
|

Updated on: Dec 13, 2023 | 1:25 PM

ಬಾಲಿವುಡ್​ ನಟ ಶಾರುಖ್​ ಖಾನ್​ (Shah Rukh Khan) ಅವರು ‘ಡಂಕಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ತೆರೆಕಾಣಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ಹಾಡು, ಟ್ರೇಲರ್​, ಪೋಸ್ಟರ್​ಗಳು ಜನಮಚ್ಚುಗೆ ಗಳಿಸಿವೆ. ಡಿಸೆಂಬರ್​ 21ರಂದು ಡಂಕಿ’ ಸಿನಿಮಾ (Dunki Movie) ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಶಾರುಖ್​ ಖಾನ್​ ಅವರು ವೈಷ್ಣೋ ದೇವಿ (Vaishno Devi) ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ಶಾರುಖ್​ ಮನೆಯಲ್ಲಿ ಹಿಂದು ಮತ್ತು ಮುಸ್ಲಿಂ ಎರಡೂ ಧರ್ಮವನ್ನು ಆಚರಿಸುತ್ತಾರೆ. ಹಾಗಾಗಿ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಆರ್ಚೀಸ್’ ಕಮಾನ್, ಶಾರುಖ್ ಪುತ್ರಿ ಸುಹಾನಾಗೆ ಅವಕಾಶಗಳ ಸುರಿಮಳೆ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಡಂಕಿ’ ಕೂಡ ಇದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಪಾತ್ರವರ್ಗದಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ತಾಪ್ಸಿ ಪನ್ನು ಅಭಿನಯಿಸಿದ್ದಾರೆ. ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ವಿಕ್ಕಿ ಕೌಶಲ್​, ಬೋಮನ್​ ಇರಾನಿ ಮುಂತಾದವರು ನಟಿಸಿದ್ದಾರೆ.

ಶಾರುಖ್​ ಖಾನ್​ ಅವರು 2023ರಲ್ಲಿ ಎರಡು ದೊಡ್ಡ ಯಶಸ್ಸು ಕಂಡಿದ್ದಾರೆ. ‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸಿವೆ. ಈಗ ‘ಡಂಕಿ’ ಕೂಡ ಅದೇ ರೀತಿ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸುತ್ತಾ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದ ನಿರ್ಮಾಣದಲ್ಲಿ ಶಾರುಖ್​ ಖಾನ್​ ಅವರ ಪತ್ನಿ ಗೌರಿ ಖಾನ್​ ಕೂಡ ಪಾಲುದಾರಿಕೆ ಹೊಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್