AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ‘ಡಂಕಿ’ ಸಿನಿಮಾ ತೆರೆಕಾಣುತ್ತಿರುವ ಹಿನ್ನೆಲೆಯಲ್ಲಿ ಶಾರುಖ್​ ಖಾನ್​ ಅವರು ದೇವರ ಆಶೀರ್ವಾದ ಪಡೆದಿದ್ದಾರೆ.

‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Dec 13, 2023 | 1:25 PM

Share

ಬಾಲಿವುಡ್​ ನಟ ಶಾರುಖ್​ ಖಾನ್​ (Shah Rukh Khan) ಅವರು ‘ಡಂಕಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ತೆರೆಕಾಣಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ಹಾಡು, ಟ್ರೇಲರ್​, ಪೋಸ್ಟರ್​ಗಳು ಜನಮಚ್ಚುಗೆ ಗಳಿಸಿವೆ. ಡಿಸೆಂಬರ್​ 21ರಂದು ಡಂಕಿ’ ಸಿನಿಮಾ (Dunki Movie) ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಶಾರುಖ್​ ಖಾನ್​ ಅವರು ವೈಷ್ಣೋ ದೇವಿ (Vaishno Devi) ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ಶಾರುಖ್​ ಮನೆಯಲ್ಲಿ ಹಿಂದು ಮತ್ತು ಮುಸ್ಲಿಂ ಎರಡೂ ಧರ್ಮವನ್ನು ಆಚರಿಸುತ್ತಾರೆ. ಹಾಗಾಗಿ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಆರ್ಚೀಸ್’ ಕಮಾನ್, ಶಾರುಖ್ ಪುತ್ರಿ ಸುಹಾನಾಗೆ ಅವಕಾಶಗಳ ಸುರಿಮಳೆ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಡಂಕಿ’ ಕೂಡ ಇದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಪಾತ್ರವರ್ಗದಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ತಾಪ್ಸಿ ಪನ್ನು ಅಭಿನಯಿಸಿದ್ದಾರೆ. ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ವಿಕ್ಕಿ ಕೌಶಲ್​, ಬೋಮನ್​ ಇರಾನಿ ಮುಂತಾದವರು ನಟಿಸಿದ್ದಾರೆ.

ಶಾರುಖ್​ ಖಾನ್​ ಅವರು 2023ರಲ್ಲಿ ಎರಡು ದೊಡ್ಡ ಯಶಸ್ಸು ಕಂಡಿದ್ದಾರೆ. ‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸಿವೆ. ಈಗ ‘ಡಂಕಿ’ ಕೂಡ ಅದೇ ರೀತಿ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸುತ್ತಾ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದ ನಿರ್ಮಾಣದಲ್ಲಿ ಶಾರುಖ್​ ಖಾನ್​ ಅವರ ಪತ್ನಿ ಗೌರಿ ಖಾನ್​ ಕೂಡ ಪಾಲುದಾರಿಕೆ ಹೊಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ