AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ‘ಡಂಕಿ’ ಸಿನಿಮಾ ತೆರೆಕಾಣುತ್ತಿರುವ ಹಿನ್ನೆಲೆಯಲ್ಲಿ ಶಾರುಖ್​ ಖಾನ್​ ಅವರು ದೇವರ ಆಶೀರ್ವಾದ ಪಡೆದಿದ್ದಾರೆ.

‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Dec 13, 2023 | 1:25 PM

Share

ಬಾಲಿವುಡ್​ ನಟ ಶಾರುಖ್​ ಖಾನ್​ (Shah Rukh Khan) ಅವರು ‘ಡಂಕಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ತೆರೆಕಾಣಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ಹಾಡು, ಟ್ರೇಲರ್​, ಪೋಸ್ಟರ್​ಗಳು ಜನಮಚ್ಚುಗೆ ಗಳಿಸಿವೆ. ಡಿಸೆಂಬರ್​ 21ರಂದು ಡಂಕಿ’ ಸಿನಿಮಾ (Dunki Movie) ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಶಾರುಖ್​ ಖಾನ್​ ಅವರು ವೈಷ್ಣೋ ದೇವಿ (Vaishno Devi) ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ಶಾರುಖ್​ ಮನೆಯಲ್ಲಿ ಹಿಂದು ಮತ್ತು ಮುಸ್ಲಿಂ ಎರಡೂ ಧರ್ಮವನ್ನು ಆಚರಿಸುತ್ತಾರೆ. ಹಾಗಾಗಿ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಆರ್ಚೀಸ್’ ಕಮಾನ್, ಶಾರುಖ್ ಪುತ್ರಿ ಸುಹಾನಾಗೆ ಅವಕಾಶಗಳ ಸುರಿಮಳೆ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಡಂಕಿ’ ಕೂಡ ಇದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಪಾತ್ರವರ್ಗದಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ತಾಪ್ಸಿ ಪನ್ನು ಅಭಿನಯಿಸಿದ್ದಾರೆ. ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ವಿಕ್ಕಿ ಕೌಶಲ್​, ಬೋಮನ್​ ಇರಾನಿ ಮುಂತಾದವರು ನಟಿಸಿದ್ದಾರೆ.

ಶಾರುಖ್​ ಖಾನ್​ ಅವರು 2023ರಲ್ಲಿ ಎರಡು ದೊಡ್ಡ ಯಶಸ್ಸು ಕಂಡಿದ್ದಾರೆ. ‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸಿವೆ. ಈಗ ‘ಡಂಕಿ’ ಕೂಡ ಅದೇ ರೀತಿ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸುತ್ತಾ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದ ನಿರ್ಮಾಣದಲ್ಲಿ ಶಾರುಖ್​ ಖಾನ್​ ಅವರ ಪತ್ನಿ ಗೌರಿ ಖಾನ್​ ಕೂಡ ಪಾಲುದಾರಿಕೆ ಹೊಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ