‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ‘ಡಂಕಿ’ ಸಿನಿಮಾ ತೆರೆಕಾಣುತ್ತಿರುವ ಹಿನ್ನೆಲೆಯಲ್ಲಿ ಶಾರುಖ್​ ಖಾನ್​ ಅವರು ದೇವರ ಆಶೀರ್ವಾದ ಪಡೆದಿದ್ದಾರೆ.

‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​
ಶಾರುಖ್​ ಖಾನ್​
Follow us
|

Updated on: Dec 13, 2023 | 1:25 PM

ಬಾಲಿವುಡ್​ ನಟ ಶಾರುಖ್​ ಖಾನ್​ (Shah Rukh Khan) ಅವರು ‘ಡಂಕಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ತೆರೆಕಾಣಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ಹಾಡು, ಟ್ರೇಲರ್​, ಪೋಸ್ಟರ್​ಗಳು ಜನಮಚ್ಚುಗೆ ಗಳಿಸಿವೆ. ಡಿಸೆಂಬರ್​ 21ರಂದು ಡಂಕಿ’ ಸಿನಿಮಾ (Dunki Movie) ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಶಾರುಖ್​ ಖಾನ್​ ಅವರು ವೈಷ್ಣೋ ದೇವಿ (Vaishno Devi) ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ಶಾರುಖ್​ ಮನೆಯಲ್ಲಿ ಹಿಂದು ಮತ್ತು ಮುಸ್ಲಿಂ ಎರಡೂ ಧರ್ಮವನ್ನು ಆಚರಿಸುತ್ತಾರೆ. ಹಾಗಾಗಿ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಆರ್ಚೀಸ್’ ಕಮಾನ್, ಶಾರುಖ್ ಪುತ್ರಿ ಸುಹಾನಾಗೆ ಅವಕಾಶಗಳ ಸುರಿಮಳೆ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಡಂಕಿ’ ಕೂಡ ಇದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಪಾತ್ರವರ್ಗದಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ತಾಪ್ಸಿ ಪನ್ನು ಅಭಿನಯಿಸಿದ್ದಾರೆ. ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ವಿಕ್ಕಿ ಕೌಶಲ್​, ಬೋಮನ್​ ಇರಾನಿ ಮುಂತಾದವರು ನಟಿಸಿದ್ದಾರೆ.

ಶಾರುಖ್​ ಖಾನ್​ ಅವರು 2023ರಲ್ಲಿ ಎರಡು ದೊಡ್ಡ ಯಶಸ್ಸು ಕಂಡಿದ್ದಾರೆ. ‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸಿವೆ. ಈಗ ‘ಡಂಕಿ’ ಕೂಡ ಅದೇ ರೀತಿ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸುತ್ತಾ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದ ನಿರ್ಮಾಣದಲ್ಲಿ ಶಾರುಖ್​ ಖಾನ್​ ಅವರ ಪತ್ನಿ ಗೌರಿ ಖಾನ್​ ಕೂಡ ಪಾಲುದಾರಿಕೆ ಹೊಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ