‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ‘ಡಂಕಿ’ ಸಿನಿಮಾ ತೆರೆಕಾಣುತ್ತಿರುವ ಹಿನ್ನೆಲೆಯಲ್ಲಿ ಶಾರುಖ್​ ಖಾನ್​ ಅವರು ದೇವರ ಆಶೀರ್ವಾದ ಪಡೆದಿದ್ದಾರೆ.

‘ಡಂಕಿ’ ಬಿಡುಗಡೆಗೂ ಮುನ್ನ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾರುಖ್​ ಖಾನ್​
ಶಾರುಖ್​ ಖಾನ್​

Updated on: Dec 13, 2023 | 1:25 PM

ಬಾಲಿವುಡ್​ ನಟ ಶಾರುಖ್​ ಖಾನ್​ (Shah Rukh Khan) ಅವರು ‘ಡಂಕಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ತೆರೆಕಾಣಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ಹಾಡು, ಟ್ರೇಲರ್​, ಪೋಸ್ಟರ್​ಗಳು ಜನಮಚ್ಚುಗೆ ಗಳಿಸಿವೆ. ಡಿಸೆಂಬರ್​ 21ರಂದು ಡಂಕಿ’ ಸಿನಿಮಾ (Dunki Movie) ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಶಾರುಖ್​ ಖಾನ್​ ಅವರು ವೈಷ್ಣೋ ದೇವಿ (Vaishno Devi) ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಶಾರುಖ್​ ಖಾನ್​ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಬಂದಾಗ ಅವರ ಅಂಗರಕ್ಷಕರು ಸುತ್ತುವರಿದಿದ್ದರು. ಶಾರುಖ್​ ಅವರು ಕಪ್ಪು ಬಣ್ಣದ ಬಟ್ಟೆ ಧರಿಸಿದ್ದರು. ಅವರ ಮ್ಯಾನೇಜರ್​ ಕೂಡ ಜೊತೆಯಲ್ಲಿ ಇದ್ದರು. ಶಾರುಖ್​ ಮನೆಯಲ್ಲಿ ಹಿಂದು ಮತ್ತು ಮುಸ್ಲಿಂ ಎರಡೂ ಧರ್ಮವನ್ನು ಆಚರಿಸುತ್ತಾರೆ. ಹಾಗಾಗಿ ಅವರು ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಆರ್ಚೀಸ್’ ಕಮಾನ್, ಶಾರುಖ್ ಪುತ್ರಿ ಸುಹಾನಾಗೆ ಅವಕಾಶಗಳ ಸುರಿಮಳೆ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಡಂಕಿ’ ಕೂಡ ಇದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಪಾತ್ರವರ್ಗದಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ತಾಪ್ಸಿ ಪನ್ನು ಅಭಿನಯಿಸಿದ್ದಾರೆ. ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ವಿಕ್ಕಿ ಕೌಶಲ್​, ಬೋಮನ್​ ಇರಾನಿ ಮುಂತಾದವರು ನಟಿಸಿದ್ದಾರೆ.

ಶಾರುಖ್​ ಖಾನ್​ ಅವರು 2023ರಲ್ಲಿ ಎರಡು ದೊಡ್ಡ ಯಶಸ್ಸು ಕಂಡಿದ್ದಾರೆ. ‘ಜವಾನ್​’ ಮತ್ತು ‘ಪಠಾಣ್​’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸಿವೆ. ಈಗ ‘ಡಂಕಿ’ ಕೂಡ ಅದೇ ರೀತಿ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸುತ್ತಾ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದ ನಿರ್ಮಾಣದಲ್ಲಿ ಶಾರುಖ್​ ಖಾನ್​ ಅವರ ಪತ್ನಿ ಗೌರಿ ಖಾನ್​ ಕೂಡ ಪಾಲುದಾರಿಕೆ ಹೊಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us