AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು

ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಅವರಿಗೆ ಸತತ ಸೋಲು ಎದುರಾಗಿದೆ. ಹಾಗಿದ್ದರೂ ಅವರಿಗೆ ಅವಕಾಶಗಳು ಸಿಗುತ್ತಿವೆ. ಈ ಅವಕಾಶಗಳಿಗೆ ನೆಪೋಟಿಸಂ ಕಾರಣ ಎಂದು ಅವರು ಒಪ್ಪಿಕೊಂಡಿದ್ದಾರೆ. ತಾನು ಆಮಿರ್ ಖಾನ್ ಮಗ ಎಂಬ ಕಾರಣದಿಂದಲೇ ಹೊಸ ಅವಕಾಶ ಸಿಗುತ್ತಿದೆ ಎಂದು ಅವರು ಹೇಳಿದ್ದಾರೆ.

ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು
Aamir Khan, Junaid Khan
ಮದನ್​ ಕುಮಾರ್​
|

Updated on: May 14, 2026 | 6:48 PM

Share

ಬಾಲಿವುಡ್‌ನಲ್ಲಿ ನೆಪೋಟಿಸಂ (Nepotism) ಎಂಬ ಪದದ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಲೇ ಇರುತ್ತದೆ. ನೆಪೋಟಿಸಂ ಇದೆ ಎಂಬುದನ್ನು ಹಲವು ಸ್ಟಾರ್ ಕಿಡ್​ಗಳು ಒಪ್ಪುವುದಿಲ್ಲ. ಆದರೆ, ಸೂಪರ್ ಸ್ಟಾರ್ ಆಮಿರ್ ಖಾನ್ (Aamir Khan) ಅವರ ಪುತ್ರ ಜುನೈದ್ ಖಾನ್ ಈ ಬಗ್ಗೆ ಯಾವುದೇ ಮುಚ್ಚುಮರೆಯಿಲ್ಲದೆ ಮಾತನಾಡಿದ್ದಾರೆ. ತಮಗೆ ಚಿತ್ರರಂಗದಲ್ಲಿ ಸಿಗುತ್ತಿರುವ ಅವಕಾಶಗಳ ಹಿಂದೆ ತಮ್ಮ ತಂದೆಯ ಹೆಸರಿದೆ ಎಂಬ ವಾಸ್ತವವನ್ನು ಜುನೈದ್ ಖಾನ್ (Junaid Khan) ಅವರು ಒಪ್ಪಿಕೊಂಡಿದ್ದಾರೆ. ನೆಪೋಟಿಸಂ ಬಗ್ಗೆ ಅವರು ನೇರವಾಗಿ ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿದ ಜುನೈದ್ ಖಾನ್, ‘ನೆಪೋಟಿಸಂ ಎಂಬ ಪದ ಕೇಳಿದರೆ ನನಗೆ ಕಿರಿಕಿರಿಯಾಗುವುದಿಲ್ಲ. ಏಕೆಂದರೆ ಅದು ನಿಜ. ನಾನು ಆಮಿರ್ ಖಾನ್ ಮಗ ಎನ್ನುವ ಕಾರಣಕ್ಕಾಗಿಯೇ ನನಗೆ ಸಾಕಷ್ಟು ಕೆಲಸಗಳು ಸಿಗುತ್ತಿವೆ’ ಎಂದು ಹೇಳಿದ್ದಾರೆ. ಸತತ ಸೋಲುಗಳ ನಂತರವೂ ಅವಕಾಶ ಸಿಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಹಾಸ್ಯಮಯವಾಗಿ ಉತ್ತರಿಸಿದ ಅವರು, “ಸತತ ಎರಡು ಫ್ಲಾಪ್‌ಗಳ ನಂತರವೂ ನನಗೆ ಕೆಲಸ ಸಿಗುತ್ತಿದೆ. ಮೊದಲು ಕೆಲಸ ಮಾಡಲು ಬಿಡಿ’ ಎಂದಿದ್ದಾರೆ.

ನಿರ್ಮಾಪಕರು ನಟರನ್ನು ಆಯ್ಕೆ ಮಾಡುವಾಗ ಕೇವಲ ಪ್ರತಿಭೆಯನ್ನಷ್ಟೇ ನೋಡುವುದಿಲ್ಲ, ಬದಲಾಗಿ ಆ ನಟನಿಗೆ ಮಾರುಕಟ್ಟೆಯಲ್ಲಿ ಎಷ್ಟು ಬೇಡಿಕೆಯಿದೆ ಎಂಬುದನ್ನು ನೋಡುತ್ತಾರೆ ಎಂದು ಜುನೈದ್ ಅಭಿಪ್ರಾಯಪಟ್ಟಿದ್ದಾರೆ. ‘ನಿರ್ಮಾಪಕರು ಸಿನಿಮಾ ಮಾರಾಟ ಮಾಡಬೇಕಿರುತ್ತದೆ. ಹಾಗಾಗಿ ಅವರು ಮಾರಾಟವಾಗುವ ಮುಖಗಳನ್ನೇ ಹುಡುಕುತ್ತಾರೆ. ಇಲ್ಲಿ ಪಾತ್ರಕ್ಕೆ ಯಾರು ಸೂಕ್ತ ಎನ್ನುವುದಕ್ಕಿಂತ, ಯಾರಿಂದ ಸಿನಿಮಾ ಚೆನ್ನಾಗಿ ಬಿಸಿನೆಸ್ ಮಾಡುತ್ತದೆ ಎಂಬುದು ಮುಖ್ಯವಾಗುತ್ತದೆ. ಇದು ಕೇವಲ ಇನ್ಸೈಡರ್ ಮತ್ತು ಔಟ್‌ಸೈಡರ್ ನಡುವಿನ ಹೋರಾಟವಲ್ಲ. ಬದಲಾಗಿ ಸರಿಯಾದ ಪಾತ್ರಕ್ಕೆ ಸರಿಯಾದ ವ್ಯಕ್ತಿಯನ್ನು ಆಯ್ಕೆ ಮಾಡುವುದು ಮುಖ್ಯ’ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಮಗನ ಸಿನಿಮಾ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಆಮಿರ್ ಖಾನ್; ವಿಡಿಯೋ ವೈರಲ್

ಜುನೈದ್ ಖಾನ್ 2024ರಲ್ಲಿ ನೆಟ್‌ಫ್ಲಿಕ್ಸ್‌ನ ‘ಮಹಾರಾಜ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಬಳಿಕ ಖುಷಿ ಕಪೂರ್ ಜೊತೆ ‘ಲವ್ಯಾಪ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪ್ರವೇಶಿಸಿದರಾದರೂ ಅದು ಬಾಕ್ಸ್ ಆಫೀಸ್‌ನಲ್ಲಿ ಅಷ್ಟಾಗಿ ಸದ್ದು ಮಾಡಲಿಲ್ಲ. ಈ ವರ್ಷ ಮೇ 1ರಂದು ಬಿಡುಗಡೆಯಾದ ಅವರ ‘ಏಕ್ ದಿನ್’ ಚಿತ್ರ ಕೂಡ ಮಿಶ್ರ ಪ್ರತಿಕ್ರಿಯೆ ಪಡೆದಿದ್ದು, ಕಲೆಕ್ಷನ್ ವಿಚಾರದಲ್ಲಿ ಹಿನ್ನಡೆ ಅನುಭವಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!