AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

John Abraham: ಹೀರೋ ಅಂತ ಜಂಭ ತೋರಿದ್ದ ಜಾನ್ ಅಬ್ರಾಹಂ ವಿಲನ್​ ಆಗಿಬಿಟ್ರು; ಇದಕ್ಕೆ ನಟನ ಪ್ರತಿಕ್ರಿಯೆ ಏನು?

Ek Villain Returns: ಹೀರೋ ಆಗಿರುವುದು ಎಲ್ಲರಿಗೂ ಇಷ್ಟ. ಆದರೆ ಈಗ ಜಾನ್​ ಅಬ್ರಾಹಂ ವಿಲನ್​ ಆಗಿದ್ದಾರೆ. ಯಾಕೆ ಹೀಗಾಯ್ತು ಎಂಬ ಬಗ್ಗೆ ಅವರು ಮಾತನಾಡಿದ್ದಾರೆ.

John Abraham: ಹೀರೋ ಅಂತ ಜಂಭ ತೋರಿದ್ದ ಜಾನ್ ಅಬ್ರಾಹಂ ವಿಲನ್​ ಆಗಿಬಿಟ್ರು; ಇದಕ್ಕೆ ನಟನ ಪ್ರತಿಕ್ರಿಯೆ ಏನು?
ಜಾನ್ ಅಬ್ರಾಹಂ
TV9 Web
| Edited By: |

Updated on: Jul 01, 2022 | 9:55 AM

Share

ನಟ ಜಾನ್​ ಅಬ್ರಾಹಂ (John Abraham) ಅವರು ಇತ್ತೀಚಿನ ದಿನಗಳಲ್ಲಿ ಹಲವು ಕಾರಣಗಳಿಂದ ಸುದ್ದಿ ಆಗಿದ್ದಾರೆ. ದಕ್ಷಿಣದ ಸಿನಿಮಾಗಳ ಬಗ್ಗೆ, ಒಟಿಟಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಅವರು ಅನೇಕರ ಅಸಮಾಧಾನಕ್ಕೆ ಕಾರಣ ಆಗಿದ್ದರು. ಈಗ ಜಾನ್​ ಅಬ್ರಾಹಂ ನಟಿಸಿರುವ ‘ಏಕ್​ ವಿಲನ್​ ರಿಟರ್ನ್ಸ್​​’ (Ek Villain Returns) ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಹಿಂದಿ ಸಿನಿಪ್ರಿಯರ ವಲಯದಲ್ಲಿ ಇದು ಸಖತ್​ ಸದ್ದು ಮಾಡುತ್ತಿದೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಅವರು ವಿಲನ್​ ಪಾತ್ರ ಮಾಡಿದ್ದಾರೆ. ಕೆಲವೇ ದಿನಗಳ ಹಿಂದೆ ‘ನಾನು ಬಾಲಿವುಡ್​ (Bollywood) ಹೀರೋ, ಪ್ರಾದೇಶಿಕ ಸಿನಿಮಾ ಮಾಡಲ್ಲ’ ಎಂದು ಜಂಭದಿಂದ ಮಾತನಾಡಿದ್ದ ಅವರು ಈಗ ವಿಲನ್​ ಪಾತ್ರಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಹೀರೋ ಪಟ್ಟದಿಂದ ಕೆಳಗಿಳಿದು ವಿಲನ್​ ಆಗಿದ್ದರ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬೈನಲ್ಲಿ ಅದ್ದೂರಿಯಾಗಿ ‘ಏಕ್​ ವಿಲನ್​ ರಿಟರ್ನ್ಸ್​’ ಸಿನಿಮಾದ ಟ್ರೇಲರ್​ ಲಾಂಚ್​ ಮಾಡಲಾಗಿದೆ. ಯೂಟ್ಯೂಬ್​ನಲ್ಲಿ ಈ ಟ್ರೇಲರ್​ಗೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಚಿತ್ರದಲ್ಲಿ ಅರ್ಜುನ್ ಕಪೂರ್​, ತಾರಾ ಸುತಾರಿಯಾ, ಜಾನ್​ ಅಬ್ರಾಹಂ, ದಿಶಾ ಪಟಾಣಿ ಮುಂತಾದವರು ನಟಿಸಿದ್ದಾರೆ. ಇದರಲ್ಲಿ ಜಾನ್ ಅಬ್ರಾಹಂ ಅವರಿಗೆ ನೆಗೆಟಿವ್​ ಪಾತ್ರ ಇದೆ. ಅದರ ಕುರಿತು ಅವರು ಟ್ರೇಲರ್​ ಲಾಂಚ್​ ವೇಳೆ ಮಾತನಾಡಿದ್ದಾರೆ.

‘ನನ್ನ ವೃತ್ತಿಜೀವನ ಆರಂಭ ಆಗಿದ್ದೇ ‘ಜಿಸ್ಮ್​’ ಸಿನಿಮಾದ ನೆಗೆಟಿವ್​ ರೋಲ್​ನಿಂದ. ಈಗ ಮತ್ತೆ ವಿಲನ್​ ಪಾತ್ರ ಮಾಡಿದ್ದಕ್ಕೆ ಖುಷಿ ಇದೆ. ಯಾವಾಗಲೂ ಹೀರೋ ಪಾತ್ರವನ್ನೇ ಮಾಡುವುದು ಬೋರಿಂಗ್​ ಎನಿಸುತ್ತದೆ. ಖಳನಟನಾಗಿ ಅಭಿನಯಿಸುವುದು ಕೂಡ ಒಳ್ಳೆಯದು’ ಎಂದು ಜಾನ್​ ಅಬ್ರಾಹಂ ಹೇಳಿದ್ದಾರೆ.

ಇದನ್ನೂ ಓದಿ
Image
ಒನ್​ ಸೈಡ್​ ಪ್ರೇಮಿಗಳು ನೋಡ್ಲೇಬೇಕಾದ ಟ್ರೇಲರ್​ ಇದು; ಇಲ್ಲಿ ಒಳ್ಳೆಯವರು ಯಾರು? ಕೆಟ್ಟವರು ಯಾರು?
Image
ನಾನು ಬಾಲಿವುಡ್ ಹೀರೋ, ನಾನು ಎಂದಿಗೂ ರೀಜನಲ್​ ಸಿನಿಮಾ ಮಾಡಲ್ಲ ಎಂದ ಜಾನ್​ ಅಬ್ರಾಹಂ
Image
ಸ್ವೀಟ್​ ಕಂಡರೆ ಅತ್ತ ತಿರುಗಿಯೂ ನೋಡಲ್ಲ ಜಾನ್​ ಅಬ್ರಾಹಂ; ಅವರಿಗೆ ಇರೋ ಸಮಸ್ಯೆ ಏನು?
Image
ವಿಡಿಯೋ ಮಾಡಿದ್ದಕ್ಕೆ ಅಭಿಮಾನಿಯ ಮೊಬೈಲ್​ ಕಸಿದುಕೊಂಡ ಜಾನ್​ ಅಬ್ರಾಹಂ; ಮುಂದೇನಾಯ್ತು?

ಪ್ರಾದೇಶಿಕ ಚಿತ್ರಗಳ ಬಗ್ಗೆ ತಾತ್ಸಾರದ ಮಾತಾಡಿದ್ದ ಜಾನ್​:

ಬಾಲಿವುಡ್​ನ ಅನೇಕ ಹೀರೋಗಳು ದಕ್ಷಿಣ ಭಾರತದ ಸಿನಿಮಾಗಳಲ್ಲಿ ವಿಶೇಷ ಪಾತ್ರಗಳನ್ನು ಮಾಡುವುದು ಟ್ರೆಂಡ್​ ಆಗಿದೆ. ಆದರೆ ಈ ವಿಚಾರದಲ್ಲಿ ಜಾನ್​ ಅಬ್ರಾಹಂ ನಿಲುವು ಬೇರೆ. ‘ನಾನು ಬಾಲಿವುಡ್​ ಹೀರೋ. ಪ್ರಾದೇಶಿಕ ಸಿನಿಮಾಗಳನ್ನು ಮಾಡುವುದಿಲ್ಲ’ ಎಂದು ಅವರು ಹೇಳಿದ್ದರು. ಅದೇ ರೀತಿ, ಒಟಿಟಿ ಬಗ್ಗೆಯೂ ಅವರು ಹಗುರವಾಗಿ ಮಾತನಾಡಿದ್ದರು.

‘ನಾನು ಬಿಗ್​ ಸ್ಕ್ರೀನ್​ ಹೀರೋ. ಅಲ್ಲಿಯೇ ನಾನು ಕಾಣಿಸಿಕೊಳ್ಳಲು ಬಯಸುತ್ತೇನೆ. ಈ ಸಂದರ್ಭದಲ್ಲಿ ನಾನು ದೊಡ್ಡ ಪರದೆಗಾಗಿಯೇ ಸಿನಿಮಾಗಳನ್ನು ಮಾಡುತ್ತೇನೆ. ಟ್ಯಾಬ್ಲೆಟ್​ನಲ್ಲಿ ಯಾರಾದರೂ ನನ್ನ ಸಿನಿಮಾ ನೋಡುತ್ತಾ ಅರ್ಧಕ್ಕೆ ನಿಲ್ಲಿಸಿ ವಾಶ್​ರೂಮ್​ಗೆ ಹೋದರೆ ನನಗೆ ಅವಮಾನ ಆದಂತೆ ಅನಿಸುತ್ತದೆ. 299 ಅಥವಾ 499 ರೂಪಾಯಿಗೆ ಒಟಿಟಿಯಲ್ಲಿ ಲಭ್ಯವಾಗಲು ನನಗೆ ಇಷ್ಟವಿಲ್ಲ. ಅದರಲ್ಲಿ ನನಗೆ ಸಮಸ್ಯೆ ಇದೆ’ ಎಂದು ಜಾನ್​ ಅಬ್ರಾಹಂ ಹೇಳಿದ್ದರು.

ಇದನ್ನೂ ಓದಿ: ‘ನಾನು ಹಿಂದಿ ಹೀರೋ’ ಎಂದು ಗರ್ವ ತೋರಿಸಿ ಸೋತ ಜಾನ್​ ಅಬ್ರಾಹಂ ಸಿನಿಮಾಗೆ ಈಗ ಒಟಿಟಿ ಮಾತ್ರ ಗತಿ

ಸೌತ್​ ಸಿನಿಮಾ ಬಗ್ಗೆ ಹಗುರಾಗಿ ಮಾತಾಡಿದ್ದ ಜಾನ್​ ಅಬ್ರಾಹಂ; ‘ಆರ್​ಆರ್​ಆರ್​’ ಎದುರಲ್ಲಿ ಹೀನಾಯ ಸೋಲು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ