AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಮರ್ಜೆನ್ಸಿ’ ಸಿನಿಮಾ: ಪ್ರಿಯಾಂಕಾ ಗಾಂಧಿಗೂ ಇಷ್ಟ ಆಗಿದೆ ಕಂಗನಾ ಕೆಲಸ

ಈ ವರ್ಷ ಬಿಡುಗಡೆ ಆಗಲಿರುವ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಎಮರ್ಜೆನ್ಸಿ’ ಕೂಡ ಇದೆ. ರಾಜಕೀಯದ ಕಥಾಹಂದರ ಇರುವ ಕಾರಣದಿಂದ ಈ ಸಿನಿಮಾ ಮೇಲೆ ಹೈಪ್ ಸೃಷ್ಟಿ ಆಗಿದೆ. ಇಂದಿರಾ ಗಾಂಧಿ ಪಾತ್ರವನ್ನು ಮಾಡಿರುವ ಕಂಗನಾ ರಣಾವತ್ ಅವರೇ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ‘ಎಮರ್ಜೆನ್ಸಿ’ ಸಿನಿಮಾ ನೋಡುವ ಸಾಧ್ಯತೆ ಇದೆ.

‘ಎಮರ್ಜೆನ್ಸಿ’ ಸಿನಿಮಾ: ಪ್ರಿಯಾಂಕಾ ಗಾಂಧಿಗೂ ಇಷ್ಟ ಆಗಿದೆ ಕಂಗನಾ ಕೆಲಸ
Kangana Ranaut, Priyanka Gandhi
ಮದನ್​ ಕುಮಾರ್​
|

Updated on: Jan 08, 2025 | 9:03 PM

Share

ಕಂಗನಾ ರಣಾವತ್ ಅವರು ಈಗ ನಟಿ, ನಿರ್ದೇಶಕಿ ಮಾತ್ರವಲ್ಲ. ಸಂಸದೆ ಕೂಡ ಹೌದು. ಬಿಜೆಪಿ ಪಕ್ಷದಿಂದ ಸಂಸದೆ ಆಗಿರುವ ಅವರು ರಾಜಕೀಯ ಹಾಗೂ ಸಿನಿಮಾ ಎರಡೂ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಅವರು ತುರ್ತು ಪರಿಸ್ಥಿತಿಯ ವಿವರಗಳನ್ನು ದೊಡ್ಡ ಪರದೆಯಲ್ಲಿ ತೋರಿಸಲಿದ್ದಾರೆ. ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಅವರ ಗೆಟಪ್​ ಗಮನ ಸೆಳೆದಿದೆ. ಅಚ್ಚರಿ ಏನೆಂದರೆ, ಇಂದಿರಾ ಗಾಂಧಿ ಕುಟುಂಬದವರಿಗೂ ಇದು ಮೆಚ್ಚುಗೆ ಆಗಿದೆ. ಪ್ರಿಯಾಂಕಾ ಗಾಂಧಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು ಕಂಗನಾ ಹೇಳಿದ್ದಾರೆ.

‘ಎಮರ್ಜೆನ್ಸಿ’ ಸಿನಿಮಾ ಜನವರಿ 17ರಂದು ಬಿಡುಗಡೆ ಆಗುತ್ತಿದ್ದು, ಅದರ ಸಲುವಾಗಿ ಎಲ್ಲ ಕಡೆಗಳಲ್ಲಿ ಕಂಗನಾ ಸಂದರ್ಶನ ನೀಡುತ್ತಿದ್ದಾರೆ. ಪಿಟಿಐ ನ್ಯೂಸ್​ ಏಜೆನ್ಸಿಗೆ ನೀಡಿದ ಸಂದರ್ಶನದಲ್ಲಿ ಒಂದು ಪ್ರಶ್ನೆ ಕೇಳಲಾಗಿದೆ. ‘ಈ ಸಿನಿಮಾ ಬಗ್ಗೆ ಮಾತನಾಡಲು ಇಂದಿರಾ ಗಾಂಧಿ ಕುಟುಂಬದವರು ನಿಮ್ಮ ಬಳಿ ಬಂದಿದ್ದಾರಾ’ ಎಂದು ಕೇಳಿದ್ದಕ್ಕೆ ಕಂಗನಾ ಅವರು ಈ ವಿಷಯ ತಿಳಿಸಿದ್ದಾರೆ.

‘ಇಲ್ಲ.. ಅವರು ಯಾರೂ ನನ್ನ ಬಳಿ ಮಾತನಾಡಿಲ್ಲ. ಆದರೆ ನಾನು ಪಾರ್ಲಿಮೆಂಟ್​ನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾದೆ. ಅವರು ನನ್ನ ಕೆಲಸ ಮತ್ತು ಕೇಶ ವಿನ್ಯಾಸದ ಬಗ್ಗೆ ಮೆಚ್ಚುಗೆ ಸೂಚಿಸಿದರು. ನಾನು ಎಮರ್ಜೆನ್ಸಿ ಸಿನಿಮಾ ಮಾಡಿದ್ದೇನೆ, ನೀವು ನೋಡಬೇಕು ಅಂತ ಅವರಿಗೆ ಹೇಳಿದೆ. ಓಕೆ, ನೋಡೋಣ ಅಂತ ಅವರು ಹೇಳಿದರು’ ಎಂದಿದ್ದಾರೆ ಕಂಗನಾ ರಣಾವತ್.

ಇದನ್ನೂ ಓದಿ: ‘ನಮ್ಮ ದೇಶವನ್ನು ಕೆಟ್ಟದಾಗಿ ತೋರಿಸುವ ಸಿನಿಮಾಗಳನ್ನೇ ಆಸ್ಕರ್​ ಆಯ್ಕೆ ಮಾಡುತ್ತದೆ’: ಕಂಗನಾ

ಇತ್ತೀಚೆಗೆ ‘ಎಮರ್ಜೆನ್ಸಿ’ ಸಿನಿಮಾದ 2ನೇ ಟ್ರೇಲರ್​ ಬಿಡುಗಡೆ ಆಯಿತು. ಅದನ್ನು ನೋಡಿದ ಸಿನಿಪ್ರಿಯರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. 1975ರಲ್ಲಿ ಹೇರಿಕೆ ಆಗಿದ್ದ ತುರ್ತು ಪರಿಸ್ಥಿತಿ ಭಾರತದ ಇತಿಹಾಸದಲ್ಲಿ ಎಂದಿಗೂ ಚರ್ಚೆ ಆಗುವಂತಹ ವಿಷಯ. ಸಿನಿಮಾ ಬಿಡುಗಡೆ ಆದ ಬಳಿಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮುಂತಾದವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಸುವ ಕೌತುಕ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ