AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ವಿಜಯೇಂದ್ರ ಪ್ರಸಾದ್ ಜತೆ ದೇವಸ್ಥಾನ ಸುತ್ತಿದ್ದ ಕಂಗನಾ ರಣಾವತ್​; ಫೋಟೋ ವೈರಲ್​

Kedarnath Temple: ಬಿಗಿ ಭದ್ರತೆ ನಡುವೆ ಕೇದರನಾಥ ದೇವಸ್ಥಾನಕ್ಕೆ ಕಂಗನಾ ರಣಾವತ್​ ಮತ್ತು ವಿಜಯೇಂದ್ರ ಪ್ರಸಾದ್​ ಅವರು ಭೇಟಿ ನೀಡಿದ್ದಾರೆ. ಅಭಿಮಾನಿಗಳ ಖಾತೆಗಳಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

Kangana Ranaut: ವಿಜಯೇಂದ್ರ ಪ್ರಸಾದ್ ಜತೆ ದೇವಸ್ಥಾನ ಸುತ್ತಿದ್ದ ಕಂಗನಾ ರಣಾವತ್​; ಫೋಟೋ ವೈರಲ್​
ವಿಜಯೇಂದ್ರ ಪ್ರಸಾದ್​, ಕಂಗನಾ ರಣಾವತ್​ ಮುಂತಾದವರು ಕೇದರನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ
ಮದನ್​ ಕುಮಾರ್​
|

Updated on: May 24, 2023 | 10:51 PM

Share

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ (Vijayendra Prasad)​ ಅವರು ಕಥೆಗಾರನಾಗಿ, ಚಿತ್ರಕಥೆ ಬರಹಗಾರನಾಗಿ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಬಾಲಿವುಡ್​ನಲ್ಲೂ ಅವರಿಗೆ ಬೇಡಿಕೆ ಇದೆ. ಅವರ ಬಗ್ಗೆ ನಟಿ ಕಂಗನಾ ರಣಾವತ್​ ಕೂಡ ಗೌರವ ಭಾವನೆ ಹೊಂದಿದ್ದಾರೆ. ಇತ್ತೀಚೆಗೆ ವಿಜಯೇಂದ್ರ ಪ್ರಸಾದ್​, ಕಂಗನಾ ರಣಾವತ್​ ಮುಂತಾದವರು ಕೇದರನಾಥ ದೇವಸ್ಥಾನಕ್ಕೆ (Kedarnath Temple) ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಕಂಗನಾ ರಣಾವತ್​ (Kangana Ranaut) ಫ್ಯಾನ್ಸ್​ ಖಾತೆಗಳಲ್ಲಿ ಈ ಫೋಟೋಗಳು ವೈರಲ್​ ಆಗಿವೆ. ವಿಶೇಷವಾದ ವಿಡಿಯೋವನ್ನು ಕೂಡ ಕಂಗನಾ ಅವರು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ‘ಹರ ಹರ ಮಹದೇವ’ ಎಂದು ಶಿವನ ಸ್ಮರಣೆ ಮಾಡಿದ್ದಾರೆ.

ದೇವರ ಬಗ್ಗೆ ಕಂಗನಾ ರಣಾವತ್​ ಅವರಿಗೆ ತುಂಬ ಭಕ್ತಿ ಇದೆ. ಹಬ್ಬಗಳನ್ನು ಅವರು ಶ್ರದ್ಧೆಯಿಂದ ಆಚರಿಸುತ್ತಾರೆ. ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ‘ಅಂತೂ ಇವತ್ತು ಕೇದಾರನಾಥದಲ್ಲಿ ದೇವರ ದರ್ಶನ ಆಯಿತು. ಅದು ಕೂಡ ಪೂಜ್ಯರಾದ ಕೈಲಾಸಾನಂದ ಮಹಾರಾಜ್​ ಮತ್ತು ವಿಜಯೇಂದ್ರ ಪ್ರಸಾದ್​ ಅವರ ಜೊತೆ. ಧನ್ಯವಾದಗಳು ಉಮೇಶ್​ ಅಣ್ಣ’ ಎಂದು ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

‘ಎಮರ್ಜೆನ್ಸಿ’ ಚಿತ್ರ ನೋಡಿದ ವಿಜಯೇಂದ್ರ ಪ್ರಸಾದ್​:

ಕಂಗನಾ ರಣಾವತ್ ಅವರು ‘ಎಮರ್ಜೆನ್ಸಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಂಗನಾ ರಣಾವತ್ ಅವರು ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸದ್ಯ ಈ ಸಿನಿಮಾ ಪೋಸ್ಟ್​ ಪ್ರೊಡಕ್ಷನ್ ಹಂತಕ್ಕೆ ಕಾಲಿಟ್ಟಿದೆ. ವಿಶೇಷ ಎಂದರೆ ವಿಜಯೇಂದ್ರ ಪ್ರಸಾದ್ ಅವರು ಈ ಚಿತ್ರವನ್ನು ಇತ್ತೀಚೆಗೆ ವೀಕ್ಷಿಸಿದ್ದಾರೆ. ಅವರಿಗೆ ಈ ಸಿನಿಮಾ ಇಷ್ಟವಾಗಿದೆ. ಅಷ್ಟೇ ಅಲ್ಲ ಅನೇಕ ದೃಶ್ಯಗಳನ್ನು ನೋಡಿ ಅವರು ಕಣ್ಣೀರು ಹಾಕಿದ್ದಾರೆ ಎಂಬ ವಿಚಾರವನ್ನು ಸ್ವತಃ ಕಂಗನಾ ರಣಾವತ್ ಅವರು ಇತ್ತೀಚೆಗೆ ಬಹಿರಂಗಪಡಿಸಿದ್ದರು.

ಇದನ್ನೂ ಓದಿ: Vijayendra Prasad: ‘ನಾನು ಕಥೆ ಕದಿಯುತ್ತೇನೆ’; ಯಶಸ್ಸಿನ ರಹಸ್ಯ ಬಿಚ್ಚಿಟ್ಟ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​

‘ನನ್ನ ಎಲ್ಲಾ ಗುರುಗಳ ಮತ್ತು ಹಿತೈಷಿಗಳ ಆಶೀರ್ವಾದದೊಂದಿಗೆ ಎಮರ್ಜೆನ್ಸಿ ಚಿತ್ರವು ಪೋಸ್ಟ್-ಪ್ರೊಡಕ್ಷನ್ ಹಂತಕ್ಕೆ ಬರಲು ಸಿದ್ಧವಾಗಿದೆ. ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ತಿಳಿಸುತ್ತೇವೆ’ ಎಂದು ಕಂಗನಾ ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ