AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ವಿಜಯೇಂದ್ರ ಪ್ರಸಾದ್ ಜತೆ ದೇವಸ್ಥಾನ ಸುತ್ತಿದ್ದ ಕಂಗನಾ ರಣಾವತ್​; ಫೋಟೋ ವೈರಲ್​

Kedarnath Temple: ಬಿಗಿ ಭದ್ರತೆ ನಡುವೆ ಕೇದರನಾಥ ದೇವಸ್ಥಾನಕ್ಕೆ ಕಂಗನಾ ರಣಾವತ್​ ಮತ್ತು ವಿಜಯೇಂದ್ರ ಪ್ರಸಾದ್​ ಅವರು ಭೇಟಿ ನೀಡಿದ್ದಾರೆ. ಅಭಿಮಾನಿಗಳ ಖಾತೆಗಳಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

Kangana Ranaut: ವಿಜಯೇಂದ್ರ ಪ್ರಸಾದ್ ಜತೆ ದೇವಸ್ಥಾನ ಸುತ್ತಿದ್ದ ಕಂಗನಾ ರಣಾವತ್​; ಫೋಟೋ ವೈರಲ್​
ವಿಜಯೇಂದ್ರ ಪ್ರಸಾದ್​, ಕಂಗನಾ ರಣಾವತ್​ ಮುಂತಾದವರು ಕೇದರನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ
ಮದನ್​ ಕುಮಾರ್​
|

Updated on: May 24, 2023 | 10:51 PM

Share

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ (Vijayendra Prasad)​ ಅವರು ಕಥೆಗಾರನಾಗಿ, ಚಿತ್ರಕಥೆ ಬರಹಗಾರನಾಗಿ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಬಾಲಿವುಡ್​ನಲ್ಲೂ ಅವರಿಗೆ ಬೇಡಿಕೆ ಇದೆ. ಅವರ ಬಗ್ಗೆ ನಟಿ ಕಂಗನಾ ರಣಾವತ್​ ಕೂಡ ಗೌರವ ಭಾವನೆ ಹೊಂದಿದ್ದಾರೆ. ಇತ್ತೀಚೆಗೆ ವಿಜಯೇಂದ್ರ ಪ್ರಸಾದ್​, ಕಂಗನಾ ರಣಾವತ್​ ಮುಂತಾದವರು ಕೇದರನಾಥ ದೇವಸ್ಥಾನಕ್ಕೆ (Kedarnath Temple) ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಕಂಗನಾ ರಣಾವತ್​ (Kangana Ranaut) ಫ್ಯಾನ್ಸ್​ ಖಾತೆಗಳಲ್ಲಿ ಈ ಫೋಟೋಗಳು ವೈರಲ್​ ಆಗಿವೆ. ವಿಶೇಷವಾದ ವಿಡಿಯೋವನ್ನು ಕೂಡ ಕಂಗನಾ ಅವರು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ‘ಹರ ಹರ ಮಹದೇವ’ ಎಂದು ಶಿವನ ಸ್ಮರಣೆ ಮಾಡಿದ್ದಾರೆ.

ದೇವರ ಬಗ್ಗೆ ಕಂಗನಾ ರಣಾವತ್​ ಅವರಿಗೆ ತುಂಬ ಭಕ್ತಿ ಇದೆ. ಹಬ್ಬಗಳನ್ನು ಅವರು ಶ್ರದ್ಧೆಯಿಂದ ಆಚರಿಸುತ್ತಾರೆ. ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ‘ಅಂತೂ ಇವತ್ತು ಕೇದಾರನಾಥದಲ್ಲಿ ದೇವರ ದರ್ಶನ ಆಯಿತು. ಅದು ಕೂಡ ಪೂಜ್ಯರಾದ ಕೈಲಾಸಾನಂದ ಮಹಾರಾಜ್​ ಮತ್ತು ವಿಜಯೇಂದ್ರ ಪ್ರಸಾದ್​ ಅವರ ಜೊತೆ. ಧನ್ಯವಾದಗಳು ಉಮೇಶ್​ ಅಣ್ಣ’ ಎಂದು ಅವರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

‘ಎಮರ್ಜೆನ್ಸಿ’ ಚಿತ್ರ ನೋಡಿದ ವಿಜಯೇಂದ್ರ ಪ್ರಸಾದ್​:

ಕಂಗನಾ ರಣಾವತ್ ಅವರು ‘ಎಮರ್ಜೆನ್ಸಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಂಗನಾ ರಣಾವತ್ ಅವರು ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸದ್ಯ ಈ ಸಿನಿಮಾ ಪೋಸ್ಟ್​ ಪ್ರೊಡಕ್ಷನ್ ಹಂತಕ್ಕೆ ಕಾಲಿಟ್ಟಿದೆ. ವಿಶೇಷ ಎಂದರೆ ವಿಜಯೇಂದ್ರ ಪ್ರಸಾದ್ ಅವರು ಈ ಚಿತ್ರವನ್ನು ಇತ್ತೀಚೆಗೆ ವೀಕ್ಷಿಸಿದ್ದಾರೆ. ಅವರಿಗೆ ಈ ಸಿನಿಮಾ ಇಷ್ಟವಾಗಿದೆ. ಅಷ್ಟೇ ಅಲ್ಲ ಅನೇಕ ದೃಶ್ಯಗಳನ್ನು ನೋಡಿ ಅವರು ಕಣ್ಣೀರು ಹಾಕಿದ್ದಾರೆ ಎಂಬ ವಿಚಾರವನ್ನು ಸ್ವತಃ ಕಂಗನಾ ರಣಾವತ್ ಅವರು ಇತ್ತೀಚೆಗೆ ಬಹಿರಂಗಪಡಿಸಿದ್ದರು.

ಇದನ್ನೂ ಓದಿ: Vijayendra Prasad: ‘ನಾನು ಕಥೆ ಕದಿಯುತ್ತೇನೆ’; ಯಶಸ್ಸಿನ ರಹಸ್ಯ ಬಿಚ್ಚಿಟ್ಟ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​

‘ನನ್ನ ಎಲ್ಲಾ ಗುರುಗಳ ಮತ್ತು ಹಿತೈಷಿಗಳ ಆಶೀರ್ವಾದದೊಂದಿಗೆ ಎಮರ್ಜೆನ್ಸಿ ಚಿತ್ರವು ಪೋಸ್ಟ್-ಪ್ರೊಡಕ್ಷನ್ ಹಂತಕ್ಕೆ ಬರಲು ಸಿದ್ಧವಾಗಿದೆ. ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ತಿಳಿಸುತ್ತೇವೆ’ ಎಂದು ಕಂಗನಾ ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ