AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ದೀಪಿಕಾ ಪಡುಕೋಣೆ ವಿಚಾರದಲ್ಲಿ ಕಂಗನಾ ರಣಾವತ್​ ದ್ವಂದ್ವ ನೀತಿ; ಸ್ವಷ್ಟನೆ ನೀಡಿದ ನಟಿ

Deepika Padukone | Oscar Awards: ದೀಪಿಕಾ ಪಡುಕೋಣೆ ಅವರನ್ನು ಕಂಗನಾ ರಣಾವತ್​ ಏಕಾಏಕಿ ಹೊಗಳಿರುವುದು ಅಚ್ಚರಿಗೆ ಕಾರಣ ಆಗಿದೆ. ಆ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

Kangana Ranaut: ದೀಪಿಕಾ ಪಡುಕೋಣೆ ವಿಚಾರದಲ್ಲಿ ಕಂಗನಾ ರಣಾವತ್​ ದ್ವಂದ್ವ ನೀತಿ; ಸ್ವಷ್ಟನೆ ನೀಡಿದ ನಟಿ
ಕಂಗನಾ ರಣಾವತ್, ದೀಪಿಕಾ ಪಡುಕೋಣೆ
ಮದನ್​ ಕುಮಾರ್​
|

Updated on:Mar 15, 2023 | 5:34 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ಸದಾ ಕಾಲ ವಿವಾದದ ಮೂಲಕವೇ ಸುದ್ದಿ ಆಗುತ್ತಾರೆ. ಬಾಲಿವುಡ್​ನ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಅದರಲ್ಲೂ ದೀಪಿಕಾ ಪಡುಕೋಣೆ (Deepika Padukone) ವಿರುದ್ಧ ಅನೇಕ ಸಂದರ್ಭದಲ್ಲಿ ಅವರು ಟೀಕೆ ಮಾಡಿದ್ದರು. ಆದರೆ ಈಗ ಏಕಾಏಕಿ ವರಸೆ ಬದಲಾಯಿಸಿದ್ದಾರೆ. ಆಸ್ಕರ್​ (Oscars 2023) ಸಮಾರಂಭದಲ್ಲಿ ವೇದಿಕೆ ಏರಿದ ದೀಪಿಕಾರನ್ನು ಕಂಗನಾ ಬಾಯಿತುಂಬ ಹೊಗಳಿದ್ದಾರೆ. ಈ ಬದಲಾವಣೆ ಕಂಡು ನೆಟ್ಟಿಗರಿಗೆ ಅಚ್ಚರಿ ಆಗಿದೆ. ಹಾಗಾಗಿ ಕಂಗನಾ ರಣಾವತ್​ ಅವರ ದ್ವಂದ್ವ ನೀತಿಯನ್ನು ಟ್ರೋಲ್​ ಮಾಡಲಾಗುತ್ತಿದೆ. ಅದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಮೊದಲು ತೆಗಳಿದ್ದು ಯಾಕೆ ಮತ್ತು ಈಗ ಹೊಗಳಿದ್ದು ಯಾಕೆ ಎಂಬುದನ್ನು ಕಂಗನಾ ರಣಾವತ್​ ವಿವರಿಸಿದ್ದಾರೆ.

ದೀಪಿಕಾ ಬಗ್ಗೆ ಕಂಗನಾ ಟ್ವೀಟ್​:

‘ದೀಪಿಕಾ ಪಡುಕೋಣೆ ಎಷ್ಟು ಸುಂದರವಾಗಿ ಕಾಣುತ್ತಿದ್ದಾರೆ. ಆ ಕೋಮಲ ಹೆಗಲುಗಳ ಮೇಲೆ ಇಡೀ ದೇಶದ ಪ್ರತಿಷ್ಠೆಯನ್ನು ಹೊತ್ತುಕೊಂಡು, ಆ ವೇದಿಕೆಯಲ್ಲಿ ನಿಂತು ಮಾತನಾಡುವುದು ಸುಲಭವಲ್ಲ. ಭಾರತೀಯ ಮಹಿಳೆಯರು ದಿ ಬೆಸ್ಟ್​ ಎಂಬುದರ ಸಂಕೇತವಾಗಿ ದೀಪಿಕಾ ನಿಂತಿದ್ದಾರೆ’ ಎಂದು ಕಂಗನಾ ರಣಾವತ್​ ಅವರು ಟ್ವೀಟ್​ ಮಾಡಿದರು.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ಇದನ್ನೂ ಓದಿ: Kangana Ranaut: ಹೃತಿಕ್​ ರೋಷನ್​ಗೆ ನಟನೆ ಬರಲ್ಲ ಎಂದು ನೇರವಾಗಿ ಹೇಳಿದ ಕಂಗನಾ​; ತಿರುಗೇಟು ನೀಡಿದ ಫ್ಯಾನ್ಸ್​

ದೀಪಿಕಾ ಪಡುಕೋಣೆ ಬಗ್ಗೆ ಈ ಕಂಗನಾ ರಣಾವತ್​ ಅವರು ಈ ರೀತಿ ಟ್ವೀಟ್​ ಮಾಡುತ್ತಿದ್ದಂತೆಯೇ ನೆಟ್ಟಿಗರಿಗೆ ಗೊಂದಲ ಆಯ್ತು. ಈ ಮೊದಲು ಅನೇಕ ಬಾರಿ ದೀಪಿಕಾರನ್ನು ಕಂಗನಾ ಕಟುವಾಗಿ ಟೀಕಿಸಿದ್ದರು. ಈಗ ವರಸೆ ಬದಲಿಸಿ ಹೊಗಳಿದ್ದು ಯಾಕೆ ಎಂದು ಎಲ್ಲರೂ ಪ್ರಶ್ನಿಸಿದ್ದಾರೆ. ಅದಕ್ಕೆ ಟ್ವಿಟರ್​ ಮೂಲಕವೇ ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಕಂಗನಾ ಬಿಟ್ಟು ದೀಪಿಕಾ, ಆಲಿಯಾ ಹೊಗಳಿದ ಆಮಿರ್ ಖಾನ್; ಸರಿಯಾಗಿ ತಿರುಗೇಟು ಕೊಟ್ಟ ರಣಾವತ್

ಟ್ರೋಲ್​ ಮಾಡಿದವರಿಗೆ ಕಂಗನಾ ಉತ್ತರ:

‘ನಾನು ದೀಪಿಕಾ ಪಡುಕೋಣೆ ಅವರನ್ನು ಹೊಗಳಿದ್ದಕ್ಕೆ ಯಾರಿಗೆಲ್ಲ ಅಚ್ಚರಿ ಆಗಿದೆಯೋ ಅಂಥವರು ಹೆಚ್ಚು ಯೋಚನೆ ಮಾಡಬೇಡಿ. ಕೃಷ್ಣ ಮತ್ತು ಧರ್ಮವನ್ನು ಫಾಲೋ ಮಾಡುವ ಸಿಂಪಲ್​ ವ್ಯಕ್ತಿ ನಾನು. ಅರ್ಹರಲ್ಲದವರಿಗೆ ಮೆಚ್ಚುಗೆ ನೀಡುವುದು ಅನಾಚಾರ. ಆದರೆ ಅರ್ಹವಾದ ವ್ಯಕ್ತಿಗೆ ಕ್ರೆಡಿಟ್​ ನೀಡಿದೇ ಇರುವುದು ಅದಕ್ಕಿಂತಲೂ ದೊಡ್ಡ ಪಾಪ ಅಂಥ ಕೃಷ್ಣ ಹೇಳಿದ್ದಾನೆ’ ಎಂದು ಪೋಸ್ಟ್ ಮಾಡುವ ಮೂಲಕ ಕಂಗನಾ ರಣಾವತ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಟಿಯಾಗಿ ಮಾತ್ರವಲ್ಲದೇ ನಿರ್ಮಾಪಕಿ ಮತ್ತು ನಿರ್ದೇಶಕಿಯಾಗಿಯೂ ಕಂಗನಾ ರಣಾವತ್​ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಅವರ ನಿರ್ದೇಶನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ಅವರು ಇಂದಿರಾ ಗಾಂಧಿಯ ಪಾತ್ರ ಮಾಡುತ್ತಿದ್ದಾರೆ. ಅನೇಕ ಪ್ರತಿಭಾವಂತ ಕಲಾವಿದರು ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:14 pm, Wed, 15 March 23

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್