AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಎಎ ಅಂದ್ರೆ ಏನು ಅಂತ ಮೊದಲು ತಿಳಿದುಕೊಳ್ಳಿ’: ವಿರೋಧಿಗಳಿಗೆ ಕಂಗನಾ ಸಂದೇಶ

ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ಕೇಂದ್ರ ಸರ್ಕಾರದ ಕ್ರಮಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದಲ್ಲಿ ನಟಿ ಕಂಗನಾ ರಣಾವತ್​ ಅವರು ಕೇಂದ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಸಿಎಎ ಬಗ್ಗೆ ನರೇಂದ್ರ ಮೋದಿ ಅವರು 2014ರಲ್ಲಿ ಮಾತನಾಡಿದ ವಿಡಿಯೋವನ್ನು ಕಂಗನಾ ಈಗ ಶೇರ್​ ಮಾಡಿಕೊಂಡಿದ್ದಾರೆ.

‘ಸಿಎಎ ಅಂದ್ರೆ ಏನು ಅಂತ ಮೊದಲು ತಿಳಿದುಕೊಳ್ಳಿ’: ವಿರೋಧಿಗಳಿಗೆ ಕಂಗನಾ ಸಂದೇಶ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Mar 12, 2024 | 5:26 PM

Share

ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) ಜಾರಿಗೊಳಿಸುವ ಕುರಿತು ಕೇಂದ್ರ ಸರ್ಕಾರ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆ ಜೋರಾಗಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ನಟಿ ಕಂಗನಾ ರಣಾವತ್​ (Kangana Ranaut) ಅವರು ಕೂಡ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ. ಆದರೆ ದಳಪತಿ ವಿಜಯ್​ ಸೇರಿದಂತೆ ಕೆಲವು ಸೆಲೆಬ್ರಿಟಿಗಳು ಪೌರತ್ವ ತಿದ್ದುಪಡಿ ಕಾಯ್ದೆಯ (CAA) ಬಗ್ಗೆ ತಕರಾರು ತೆಗೆದಿದ್ದಾರೆ.

ಕಂಗನಾ ರಣಾವತ್ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಅವರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಸಿಎಎ ಎಂದು ಕ್ಯಾಪ್ಷನ್​ ನೀಡಿದ್ದು ಇಂಡಿಯನ್​ ಫ್ಲ್ಯಾಗ್​ ಎಮೋಜಿಯನ್ನು ಅವರು ಬಳಸಿದ್ದಾರೆ. ಆ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಆಗುತ್ತಿರುವುದಕ್ಕೆ ತಮ್ಮ ಬೆಂಬಲ ಇದೆ ಎಂಬುದನ್ನು ಅವರು ಸೂಚಿಸಿದ್ದಾರೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾತನಾಡಿದ ವಿಡಿಯೋವನ್ನು ಕಂಗನಾ ರಣಾವತ್​ ಅವರು ಈಗ ಹಂಚಿಕೊಂಡಿದ್ದಾರೆ. ‘ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನಿಮ್ಮ ಭಾವನೆ ಮತ್ತು ಅಭಿಪ್ರಾಯವನ್ನು ವ್ಯಕ್ತಪಡಿಸುವುದಕ್ಕೂ ಮುನ್ನ ಸಿಎಎ ಎಂದರೆ ಏನು ಎಂಬುದನ್ನು ತಿಳಿದುಕೊಳ್ಳಿ’ ಎಂದು ಕಂಗನಾ ರಣಾವತ್​ ಅವರು ಕ್ಯಾಪ್ಷನ್​ ನೀಡಿದ್ದಾರೆ.

ಇದನ್ನೂ ಓದಿ: ಸಿಎಎ ಸ್ವೀಕಾರಾರ್ಹವಲ್ಲ ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು: ದಳಪತಿ ವಿಜಯ್

ಕಂಗನಾ ರಣಾವತ್​ ಅವರು ಇನ್ನೂ ನೇರವಾಗಿ ರಾಜಕೀಯಕ್ಕೆ ಕಾಲಿಟ್ಟಿಲ್ಲ. ಆದರೂ ಅವರು ರಾಜಕೀಯದ ಕುರಿತು ಅನೇಕ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ತಿಳಿಸುತ್ತಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ಕಂಗನಾ ಅವರು ‘ಎಮರ್ಜೆನ್ಸಿ’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡುವುದರ ಜೊತೆ ನಿರ್ದೇಶಕವನ್ನೂ ಅವರೇ ಮಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ಮುಸ್ಲಿಮರು ಸಿಎಎ ಸ್ವಾಗತಿಸಬೇಕು: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಟಿವಿ9 ನೆಟ್​ವರ್ಕ್​ ನಡೆಸಿದ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೇ’ ಕಾನ್​ಕ್ಲೇವ್​ನ ಸಂವಾದದಲ್ಲಿ ಕಂಗನಾ ಅವರು ರಾಜಕೀಯದ ಎಂಟ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ್ದರು. ‘ದೇಶಕ್ಕಾಗಿ ಏನನ್ನಾದರೂ ಮಾಡಲು ನನಗೆ ಸೀಟ್​, ಟಿಕೆಟ್​​ ಅಥವಾ ಅಧಿಕಾರ ಬೇಕಿಲ್ಲ. ನಟಿಯಾಗಿಯೇ ನಾನು ರಾಜಕೀಯ ಪಕ್ಷಗಳ ಎದುರು ಹೋರಾಡಿದ್ದೇನೆ. ಒಂದು ವೇಳೆ ನಾನು ರಾಜಕೀಯಕ್ಕೆ ಬರಬೇಕು ಎಂದರೆ ಇದು ಸರಿಯಾದ ಸಮಯ’ ಎಂದು ಕಂಗನಾ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್