AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಎಎ ಅಂದ್ರೆ ಏನು ಅಂತ ಮೊದಲು ತಿಳಿದುಕೊಳ್ಳಿ’: ವಿರೋಧಿಗಳಿಗೆ ಕಂಗನಾ ಸಂದೇಶ

ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ಕೇಂದ್ರ ಸರ್ಕಾರದ ಕ್ರಮಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದಲ್ಲಿ ನಟಿ ಕಂಗನಾ ರಣಾವತ್​ ಅವರು ಕೇಂದ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಸಿಎಎ ಬಗ್ಗೆ ನರೇಂದ್ರ ಮೋದಿ ಅವರು 2014ರಲ್ಲಿ ಮಾತನಾಡಿದ ವಿಡಿಯೋವನ್ನು ಕಂಗನಾ ಈಗ ಶೇರ್​ ಮಾಡಿಕೊಂಡಿದ್ದಾರೆ.

‘ಸಿಎಎ ಅಂದ್ರೆ ಏನು ಅಂತ ಮೊದಲು ತಿಳಿದುಕೊಳ್ಳಿ’: ವಿರೋಧಿಗಳಿಗೆ ಕಂಗನಾ ಸಂದೇಶ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Mar 12, 2024 | 5:26 PM

Share

ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) ಜಾರಿಗೊಳಿಸುವ ಕುರಿತು ಕೇಂದ್ರ ಸರ್ಕಾರ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆ ಜೋರಾಗಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ನಟಿ ಕಂಗನಾ ರಣಾವತ್​ (Kangana Ranaut) ಅವರು ಕೂಡ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ. ಆದರೆ ದಳಪತಿ ವಿಜಯ್​ ಸೇರಿದಂತೆ ಕೆಲವು ಸೆಲೆಬ್ರಿಟಿಗಳು ಪೌರತ್ವ ತಿದ್ದುಪಡಿ ಕಾಯ್ದೆಯ (CAA) ಬಗ್ಗೆ ತಕರಾರು ತೆಗೆದಿದ್ದಾರೆ.

ಕಂಗನಾ ರಣಾವತ್ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಅವರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಸಿಎಎ ಎಂದು ಕ್ಯಾಪ್ಷನ್​ ನೀಡಿದ್ದು ಇಂಡಿಯನ್​ ಫ್ಲ್ಯಾಗ್​ ಎಮೋಜಿಯನ್ನು ಅವರು ಬಳಸಿದ್ದಾರೆ. ಆ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಆಗುತ್ತಿರುವುದಕ್ಕೆ ತಮ್ಮ ಬೆಂಬಲ ಇದೆ ಎಂಬುದನ್ನು ಅವರು ಸೂಚಿಸಿದ್ದಾರೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾತನಾಡಿದ ವಿಡಿಯೋವನ್ನು ಕಂಗನಾ ರಣಾವತ್​ ಅವರು ಈಗ ಹಂಚಿಕೊಂಡಿದ್ದಾರೆ. ‘ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನಿಮ್ಮ ಭಾವನೆ ಮತ್ತು ಅಭಿಪ್ರಾಯವನ್ನು ವ್ಯಕ್ತಪಡಿಸುವುದಕ್ಕೂ ಮುನ್ನ ಸಿಎಎ ಎಂದರೆ ಏನು ಎಂಬುದನ್ನು ತಿಳಿದುಕೊಳ್ಳಿ’ ಎಂದು ಕಂಗನಾ ರಣಾವತ್​ ಅವರು ಕ್ಯಾಪ್ಷನ್​ ನೀಡಿದ್ದಾರೆ.

ಇದನ್ನೂ ಓದಿ: ಸಿಎಎ ಸ್ವೀಕಾರಾರ್ಹವಲ್ಲ ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು: ದಳಪತಿ ವಿಜಯ್

ಕಂಗನಾ ರಣಾವತ್​ ಅವರು ಇನ್ನೂ ನೇರವಾಗಿ ರಾಜಕೀಯಕ್ಕೆ ಕಾಲಿಟ್ಟಿಲ್ಲ. ಆದರೂ ಅವರು ರಾಜಕೀಯದ ಕುರಿತು ಅನೇಕ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ತಿಳಿಸುತ್ತಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ಕಂಗನಾ ಅವರು ‘ಎಮರ್ಜೆನ್ಸಿ’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡುವುದರ ಜೊತೆ ನಿರ್ದೇಶಕವನ್ನೂ ಅವರೇ ಮಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ಮುಸ್ಲಿಮರು ಸಿಎಎ ಸ್ವಾಗತಿಸಬೇಕು: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಟಿವಿ9 ನೆಟ್​ವರ್ಕ್​ ನಡೆಸಿದ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೇ’ ಕಾನ್​ಕ್ಲೇವ್​ನ ಸಂವಾದದಲ್ಲಿ ಕಂಗನಾ ಅವರು ರಾಜಕೀಯದ ಎಂಟ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ್ದರು. ‘ದೇಶಕ್ಕಾಗಿ ಏನನ್ನಾದರೂ ಮಾಡಲು ನನಗೆ ಸೀಟ್​, ಟಿಕೆಟ್​​ ಅಥವಾ ಅಧಿಕಾರ ಬೇಕಿಲ್ಲ. ನಟಿಯಾಗಿಯೇ ನಾನು ರಾಜಕೀಯ ಪಕ್ಷಗಳ ಎದುರು ಹೋರಾಡಿದ್ದೇನೆ. ಒಂದು ವೇಳೆ ನಾನು ರಾಜಕೀಯಕ್ಕೆ ಬರಬೇಕು ಎಂದರೆ ಇದು ಸರಿಯಾದ ಸಮಯ’ ಎಂದು ಕಂಗನಾ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು