AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ರಣಾವತ್​ ವಾಟ್ಸಪ್​ ಮೆಸೇಜ್​ ಲೀಕ್​; ಸ್ಟಾರ್​ ದಂಪತಿ ಮೇಲೆ ಅನುಮಾನ

Kangana Ranaut WhatsApp Leak: ಕಂಗನಾ ರಣಾವತ್​ ಅವರು ಸೂಚ್ಯವಾಗಿ ಅನೇಕ ವಿಚಾರಗಳನ್ನು ಹೇಳಿದ್ದಾರೆ. ಅದನ್ನೆಲ್ಲ ಗಮನಿಸಿದರೆ ರಣಬೀರ್​ ಕಪೂರ್ ಮತ್ತು ಆಲಿಯಾ ಭಟ್​ ಕುರಿತಾಗಿಯೇ ಹೇಳಿರಬಹುದು ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ.

Kangana Ranaut: ಕಂಗನಾ ರಣಾವತ್​ ವಾಟ್ಸಪ್​ ಮೆಸೇಜ್​ ಲೀಕ್​; ಸ್ಟಾರ್​ ದಂಪತಿ ಮೇಲೆ ಅನುಮಾನ
ಕಂಗನಾ ರಣಾವತ್
ಮದನ್​ ಕುಮಾರ್​
|

Updated on: Feb 06, 2023 | 6:30 PM

Share

ಒಂದಿಲ್ಲೊಂದು ಕಾರಣಕ್ಕೆ ನಟಿ ಕಂಗನಾ ರಣಾವತ್​ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಸದ್ಯ ಅವರ ‘ಎಮರ್ಜೆನ್ಸಿ’ (Emergency Movie) ಸಿನಿಮಾದ ಕೆಲಸಗಳು ಪೋಸ್ಟ್​ ಪ್ರೊಡಕ್ಷನ್​ ಹಂತದಲ್ಲಿವೆ. ಅದರ ನಡುವೆ ಅವರ ವೈಯಕ್ತಿಕ ಜೀವನದ ಬಗ್ಗೆ ಸುದ್ದಿ ಆಗಿದೆ. ಅಚ್ಚರಿ ಏನೆಂದರೆ, ಕಂಗನಾ ರಣಾವತ್​ ಅವರ ವಾಟ್ಸಪ್​ (WhatsApp) ಸಂದೇಶ ಲೀಕ್​ ಆಗಿದೆ. ಇದು ಗಾಸಿಪ್​ ಅಲ್ಲವೇ ಅಲ್ಲ. ಸ್ವತಃ ಕಂಗನಾ ಅವರೇ ಈ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಮೇಲೆ ಗೂಢಚಾರಿಕೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೆಲ್ಲ ಮಾಡುತ್ತಿರುವುದು ಬಾಲಿವುಡ್​ನ ಸ್ಟಾರ್​ ದಂಪತಿ ಎಂದು ಕೂಡ ಕಂಗನಾ ರಣಾವತ್​ (Kangana Ranaut) ಹೇಳಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಕಂಗನಾ ರಣಾವತ್​ ಅವರು ಈ ವಿಷಯ ಹಂಚಿಕೊಂಡಿದ್ದಾರೆ. ಒಂದಷ್ಟು ದಿನಗಳಿಂದ ಅವರನ್ನು ಯಾರೋ ಹಿಂಬಾಲಿಸುತ್ತಿದ್ದಾರೆ. ಹೋದಲ್ಲಿ, ಬಂದಲ್ಲಿ ಅವರ ಫೋಟೋ ಕ್ಲಿಕ್ಕಿಸಲಾಗುತ್ತಿದೆ. ಅಲ್ಲದೇ ಆನ್​ಲೈನ್​ ಚಟುವಟಿಕೆಗಳ ಮೇಲೂ ಕಣ್ಣು ಇಡಲಾಗಿದೆ. ಇದನ್ನೆಲ್ಲ ಮಾಡಿಸುತ್ತಿರುವ ಸ್ಟಾರ್​ ದಂಪತಿಗೆ ಕಂಗನಾ ರಣಾವತ್​ ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Kangana Ranaut: ‘ಸಿದ್ದಾರ್ಥ್​ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ಅವರದ್ದು ನಿಜವಾದ ಪ್ರೀತಿ’: ಕಂಗನಾ ರಣಾವತ್​

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ಆ ಸ್ಟಾರ್​ ನಟನ ಮೇಲೆ ಕಂಗನಾ ಅವರು ಒಂದು ಗಂಭೀರ ಆರೋಪ ಹೊರಿಸಿದ್ದಾರೆ. ‘ನೆಪೋಟಿಸಂ ಮಾಫಿಯಾದ ಆ ವಿದೂಷಕ ಒಮ್ಮೆ ನನ್ನ ಮನೆ ಬಾಗಿಲಿಗೆ ಬಂದು ಬಲವಂತಕ್ಕೆ ಯತ್ನಿಸಿದ್ದ. ಆತ ಸ್ತ್ರಿಲೋಲ ಅಂತಲೇ ಗುರುತಿಸಿಕೊಂಡಿದ್ದವನು. ಈಗ ನೆಪೋಟಿಸಂ ಸಂಘದ ಉಪಾಧ್ಯಕ್ಷ ಆಗಿದ್ದಾನೆ. ತನ್ನ ಹೆಂಡತಿಯನ್ನು ನಿರ್ಮಾಪಕಿ ಆಗು ಅಂತ ಒತ್ತಾಯಿಸುತ್ತಿದ್ದಾನೆ. ಮಹಿಳಾಪ್ರಧಾನ ಸಿನಿಮಾಗಳನ್ನು ಹೆಚ್ಚಾಗಿ ಮಾಡುವಂತೆ ಒತ್ತಾಯಿಸುತ್ತಿದ್ದಾನೆ’ ಎಂದು ಕಂಗನಾ ರಣಾವತ್​ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kangana Ranaut: ‘ನನ್ನ ಧಾಕಡ್​ ಚಿತ್ರದ್ದು ಐತಿಹಾಸಿಕ ಸೋಲು ನಿಜ’: ಕಂಗನಾ ರಣಾವತ್​ ಬಹಿರಂಗ ಹೇಳಿಕೆ

ಎಲ್ಲಿಯೂ ಅವರು ಬಾಲಿವುಡ್​ನ ಯಾವುದೇ ಸೆಲೆಬ್ರಿಟಿ ಜೋಡಿಯ ಹೆಸರುಗಳನ್ನು ಪ್ರಸ್ತಾಪಿಸಿಲ್ಲ. ಆದರೆ ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗಿದೆ. ಕಂಗನಾ ರಣಾವತ್​ ಅವರು ಸೂಚ್ಯವಾಗಿ ಹೇಳಿರುವ ವಿಚಾರಗಳನ್ನು ಗಮನಿಸಿದರೆ ರಣಬೀರ್​ ಕಪೂರ್ ಮತ್ತು ಆಲಿಯಾ ಭಟ್​ ಕುರಿತಾಗಿಯೇ ಅವರು ಇಷ್ಟೆಲ್ಲ ಹೇಳಿರಬಹುದು ಎಂದು ಅನೇಕರು ಊಹಿಸುತ್ತಿದ್ದಾರೆ.

ಇದನ್ನೂ ಓದಿ: Emergency: ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡಲು ಆಸ್ತಿ ಅಡವಿಟ್ಟ ಕಂಗನಾ ರಣಾವತ್​

ಈ ವಿಚಾರಗಳನ್ನು ಬಹಿರಂಗ ಪಡಿಸಿದ ಮೇಲೆ ಆ ಸೆಲೆಬ್ರಿಟಿ ದಂಪತಿ ಸೈಲೆಂಟ್​ ಆಗಿದ್ದಾರೆ. ಆ ಬಗ್ಗೆಯೂ ಕಂಗನಾ ರಣಾವತ್​ ಅವರು ಮಾಹಿತಿ ನೀಡಿದ್ದಾರೆ. ಈಗ ಅವರ ಸುತ್ತಮುತ್ತ ಯಾವುದೇ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ. ಬಾಲಿವುಡ್​ನಲ್ಲಿ ಅನೇಕರನ್ನು ಕಂಗನಾ ರಣಾವತ್​ ಎದುರು ಹಾಕಿಕೊಂಡಿದ್ದಾರೆ. ಈ ಹಿಂದೆ ಅವರು ನಟಿಸಿದ್ದ ‘ಧಾಕಡ್​’ ಸಿನಿಮಾ ಹೀನಾಯವಾಗಿ ಸೋತಿತ್ತು. ಈಗ ‘ಎಮರ್ಜೆನ್ಸಿ’ ಚಿತ್ರದ ಮೂಲಕ ಗೆಲ್ಲುವ ಅನಿವಾರ್ಯತೆ ಅವರಿಗೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್