AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emergency: ನಟ ಅನುಪಮ್​ ಖೇರ್​ಗೆ ‘ಎಮರ್ಜೆನ್ಸಿ’ ಚಿತ್ರದಲ್ಲೊಂದು ಮುಖ್ಯ ಪಾತ್ರ; ಇಲ್ಲಿದೆ ಫಸ್ಟ್​ ಲುಕ್​

Kangana Ranaut | Anupam Kher: ಕಂಗನಾ ರಣಾವತ್​ ನಟನೆಯ ‘ಎಮರ್ಜೆನ್ಸಿ’ ಚಿತ್ರದಲ್ಲಿ ಅನುಪಮ್​ ಖೇರ್ ಅವರಿಗೆ ಪ್ರಮುಖ ಪಾತ್ರ ಸಿಕ್ಕಿದೆ. ಇದು ಅವರ 527ನೇ ಸಿನಿಮಾ ಎಂಬುದು ವಿಶೇಷ.

Emergency: ನಟ ಅನುಪಮ್​ ಖೇರ್​ಗೆ ‘ಎಮರ್ಜೆನ್ಸಿ’ ಚಿತ್ರದಲ್ಲೊಂದು ಮುಖ್ಯ ಪಾತ್ರ; ಇಲ್ಲಿದೆ ಫಸ್ಟ್​ ಲುಕ್​
ಕಂಗನಾ ರಣಾವತ್, ಅನುಪಮ್ ಖೇರ್
TV9 Web
| Edited By: |

Updated on:Jul 22, 2022 | 4:14 PM

Share

ಬಾಲಿವುಡ್​ನಲ್ಲಿ ನಟ ಅನುಪಮ್​ ಖೇರ್​ (Anupam Kher) ಅವರು ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಎಲ್ಲ ಬಗೆಯ ಪಾತ್ರಗಳಿಗೂ ಬಣ್ಣ ಹಚ್ಚುವ ಮೂಲಕ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ. ಈ ವರ್ಷ ತೆರೆಕಂಡ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ಅವರು ಮಾಡಿದ್ದ ಕಾಶ್ಮೀರಿ ಪಂಡಿತನ ಪಾತ್ರ ಸಖತ್​ ಹೈಲೈಟ್​ ಆಗಿತ್ತು. ಈಗ ಅವರಿಗೆ ‘ಎಮರ್ಜೆನ್ಸಿ’ (Emergency) ಸಿನಿಮಾದಲ್ಲಿ ಕೂಡ ಒಂದು ಪ್ರಮುಖ ಪಾತ್ರ ನೀಡಲಾಗಿದೆ. ಹೌದು, ಈ ಬಹುನಿರೀಕ್ಷಿತ ಚಿತ್ರದಲ್ಲಿ ಅವರು ಜಯಪ್ರಕಾಶ್​ ನಾರಾಯಣ್​ ಪಾತ್ರವನ್ನು ಮಾಡುತ್ತಿದ್ದಾರೆ. ಈಗ ಆ ಪಾತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಈ ಸಿನಿಮಾಗೆ ಕಂಗನಾ ರಣಾವತ್​ ನಾಯಕಿ ಮತ್ತು ನಿರ್ದೇಶಕಿ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರವನ್ನು ಕಂಗನಾ ರಣಾವತ್​ (Kangana Ranaut) ಮಾಡುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ‘ಎಮರ್ಜೆನ್ಸಿ’ ಸಿನಿಮಾ ತಂಡದಿಂದ ಕಂಗನಾ ರಣಾವತ್ ಅವರ ಫಸ್ಟ್​ ಲುಕ್​ ಪೋಸ್ಟರ್​ ಟೀಸರ್​ ರಿಲೀಸ್​ ಆಗಿತ್ತು. ಇಂದಿರಾ ಗಾಂಧಿ ಅವತಾರದಲ್ಲಿ ಕಂಗನಾರನ್ನು ನೋಡಿ ಪ್ರೇಕ್ಷಕರು ಫಿದಾ ಆಗಿದ್ದರು. ಈಗ ಅನುಪಮ್​ ಖೇರ್​ ಅವರ ಪೋಸ್ಟರ್​ ಹೊರಬಂದಿದೆ. ಈ ಲುಕ್​ ಕೂಡ ಸಿನಿಪ್ರಿಯರಿಗೆ ಇಷ್ಟ ಆಗಿದೆ. ಇನ್ನೂ ಹಲವು ರಾಜಕಾರಣಿಗಳ ಪಾತ್ರ ಈ ಸಿನಿಮಾದಲ್ಲಿ ಇರಲಿದ್ದು, ಆ ಪಾತ್ರಗಳನ್ನು ಯಾವ ಕಲಾವಿದರು ಮಾಡುತ್ತಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ
Image
Breast Cancer: ನಟಿ ಮಹಿಮಾ ಚೌಧರಿಗೆ ಸ್ತನ ಕ್ಯಾನ್ಸರ್;​ ಎಮೋಷನಲ್​ ವಿಡಿಯೋ ಹಂಚಿಕೊಂಡ ಅನುಪಮ್​ ಖೇರ್​
Image
‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ; ಹೇಗಿದ್ದ ಅನುಪಮ್​ ಖೇರ್​ ಹೇಗಾದ್ರು ನೋಡಿ
Image
ಹೃತಿಕ್​ ರೋಷನ್​ಗೂ ಅಚ್ಚರಿ ಮೂಡಿಸಿತು 67 ವರ್ಷದ ನಟ ಅನುಪಮ್​ ಖೇರ್​ ಫಿಟ್ನೆಸ್​; ಇಲ್ಲಿದೆ ಫೋಟೋ
Image
ಖ್ಯಾತ ನಟ ಅನುಪಮ್​ ಖೇರ್​​ಗೆ ಅಮೆರಿಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್​ ಪ್ರದಾನ

‘ಭಾರತದ ಇತಿಹಾಸದಲ್ಲಿ ಮಹಾತ್ಮ ಗಾಂಧಿ ನಂತರದ ಅತಿ ಹೆಚ್ಚು ಪ್ರಬಲ ವ್ಯಕ್ತಿ ಆಗಿದ್ದವರು ಜಯಪ್ರಕಾಶ್​ ನಾರಾಯಣ್​. ಜನರ ಮೇಲೆ ಅವರು ಬೀರಿದ ಪ್ರಭಾವ ಅಪಾರ. ಅವರ ಪಾತ್ರಕ್ಕೆ ಅನುಪಮ್​ ಖೇರ್​ ಹೆಚ್ಚು ಸೂಕ್ತ ಆಗುತ್ತಾರೆ. ಅವರು ಈ ಪಾತ್ರವನ್ನು ಮಾಡಲು ಒಪ್ಪಿಕೊಂಡಿದ್ದಕ್ಕೆ ತುಂಬ ಸಂತಸ ಆಗಿದೆ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಕಂಗನಾ ರಣಾವತ್​ ಅವರ ವೃತ್ತಿಜೀವನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ ಬಹುಮುಖ್ಯ ಆಗಲಿದೆ. ಅದಕ್ಕಾಗಿ ಅವರು ಸಖತ್​ ತಯಾರಿ ಮಾಡಿಕೊಂಡು ಶೂಟಿಂಗ್​ ಆರಂಭಿಸಿದ್ದಾರೆ. ಈ ಚಿತ್ರದಲ್ಲಿ ಜಯಪ್ರಕಾಶ್​ ನಾರಾಯಣ್​ ಅವರ ಪಾತ್ರವನ್ನು ಮಾಡುತ್ತಿರುವುದಕ್ಕೆ ಅನುಪಮ್​ ಖೇರ್​ ಅವರಿಗೆ ಹೆಮ್ಮೆ ಇದೆ. ಇದು ಅವರ 527ನೇ ಸಿನಿಮಾ ಎಂಬುದು ವಿಶೇಷ. ಈ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Published On - 4:14 pm, Fri, 22 July 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ