AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emergency: ನಟ ಅನುಪಮ್​ ಖೇರ್​ಗೆ ‘ಎಮರ್ಜೆನ್ಸಿ’ ಚಿತ್ರದಲ್ಲೊಂದು ಮುಖ್ಯ ಪಾತ್ರ; ಇಲ್ಲಿದೆ ಫಸ್ಟ್​ ಲುಕ್​

Kangana Ranaut | Anupam Kher: ಕಂಗನಾ ರಣಾವತ್​ ನಟನೆಯ ‘ಎಮರ್ಜೆನ್ಸಿ’ ಚಿತ್ರದಲ್ಲಿ ಅನುಪಮ್​ ಖೇರ್ ಅವರಿಗೆ ಪ್ರಮುಖ ಪಾತ್ರ ಸಿಕ್ಕಿದೆ. ಇದು ಅವರ 527ನೇ ಸಿನಿಮಾ ಎಂಬುದು ವಿಶೇಷ.

Emergency: ನಟ ಅನುಪಮ್​ ಖೇರ್​ಗೆ ‘ಎಮರ್ಜೆನ್ಸಿ’ ಚಿತ್ರದಲ್ಲೊಂದು ಮುಖ್ಯ ಪಾತ್ರ; ಇಲ್ಲಿದೆ ಫಸ್ಟ್​ ಲುಕ್​
ಕಂಗನಾ ರಣಾವತ್, ಅನುಪಮ್ ಖೇರ್
TV9 Web
| Edited By: |

Updated on:Jul 22, 2022 | 4:14 PM

Share

ಬಾಲಿವುಡ್​ನಲ್ಲಿ ನಟ ಅನುಪಮ್​ ಖೇರ್​ (Anupam Kher) ಅವರು ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಎಲ್ಲ ಬಗೆಯ ಪಾತ್ರಗಳಿಗೂ ಬಣ್ಣ ಹಚ್ಚುವ ಮೂಲಕ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ. ಈ ವರ್ಷ ತೆರೆಕಂಡ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ಅವರು ಮಾಡಿದ್ದ ಕಾಶ್ಮೀರಿ ಪಂಡಿತನ ಪಾತ್ರ ಸಖತ್​ ಹೈಲೈಟ್​ ಆಗಿತ್ತು. ಈಗ ಅವರಿಗೆ ‘ಎಮರ್ಜೆನ್ಸಿ’ (Emergency) ಸಿನಿಮಾದಲ್ಲಿ ಕೂಡ ಒಂದು ಪ್ರಮುಖ ಪಾತ್ರ ನೀಡಲಾಗಿದೆ. ಹೌದು, ಈ ಬಹುನಿರೀಕ್ಷಿತ ಚಿತ್ರದಲ್ಲಿ ಅವರು ಜಯಪ್ರಕಾಶ್​ ನಾರಾಯಣ್​ ಪಾತ್ರವನ್ನು ಮಾಡುತ್ತಿದ್ದಾರೆ. ಈಗ ಆ ಪಾತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಈ ಸಿನಿಮಾಗೆ ಕಂಗನಾ ರಣಾವತ್​ ನಾಯಕಿ ಮತ್ತು ನಿರ್ದೇಶಕಿ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರವನ್ನು ಕಂಗನಾ ರಣಾವತ್​ (Kangana Ranaut) ಮಾಡುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ‘ಎಮರ್ಜೆನ್ಸಿ’ ಸಿನಿಮಾ ತಂಡದಿಂದ ಕಂಗನಾ ರಣಾವತ್ ಅವರ ಫಸ್ಟ್​ ಲುಕ್​ ಪೋಸ್ಟರ್​ ಟೀಸರ್​ ರಿಲೀಸ್​ ಆಗಿತ್ತು. ಇಂದಿರಾ ಗಾಂಧಿ ಅವತಾರದಲ್ಲಿ ಕಂಗನಾರನ್ನು ನೋಡಿ ಪ್ರೇಕ್ಷಕರು ಫಿದಾ ಆಗಿದ್ದರು. ಈಗ ಅನುಪಮ್​ ಖೇರ್​ ಅವರ ಪೋಸ್ಟರ್​ ಹೊರಬಂದಿದೆ. ಈ ಲುಕ್​ ಕೂಡ ಸಿನಿಪ್ರಿಯರಿಗೆ ಇಷ್ಟ ಆಗಿದೆ. ಇನ್ನೂ ಹಲವು ರಾಜಕಾರಣಿಗಳ ಪಾತ್ರ ಈ ಸಿನಿಮಾದಲ್ಲಿ ಇರಲಿದ್ದು, ಆ ಪಾತ್ರಗಳನ್ನು ಯಾವ ಕಲಾವಿದರು ಮಾಡುತ್ತಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ
Image
Breast Cancer: ನಟಿ ಮಹಿಮಾ ಚೌಧರಿಗೆ ಸ್ತನ ಕ್ಯಾನ್ಸರ್;​ ಎಮೋಷನಲ್​ ವಿಡಿಯೋ ಹಂಚಿಕೊಂಡ ಅನುಪಮ್​ ಖೇರ್​
Image
‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ; ಹೇಗಿದ್ದ ಅನುಪಮ್​ ಖೇರ್​ ಹೇಗಾದ್ರು ನೋಡಿ
Image
ಹೃತಿಕ್​ ರೋಷನ್​ಗೂ ಅಚ್ಚರಿ ಮೂಡಿಸಿತು 67 ವರ್ಷದ ನಟ ಅನುಪಮ್​ ಖೇರ್​ ಫಿಟ್ನೆಸ್​; ಇಲ್ಲಿದೆ ಫೋಟೋ
Image
ಖ್ಯಾತ ನಟ ಅನುಪಮ್​ ಖೇರ್​​ಗೆ ಅಮೆರಿಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್​ ಪ್ರದಾನ

‘ಭಾರತದ ಇತಿಹಾಸದಲ್ಲಿ ಮಹಾತ್ಮ ಗಾಂಧಿ ನಂತರದ ಅತಿ ಹೆಚ್ಚು ಪ್ರಬಲ ವ್ಯಕ್ತಿ ಆಗಿದ್ದವರು ಜಯಪ್ರಕಾಶ್​ ನಾರಾಯಣ್​. ಜನರ ಮೇಲೆ ಅವರು ಬೀರಿದ ಪ್ರಭಾವ ಅಪಾರ. ಅವರ ಪಾತ್ರಕ್ಕೆ ಅನುಪಮ್​ ಖೇರ್​ ಹೆಚ್ಚು ಸೂಕ್ತ ಆಗುತ್ತಾರೆ. ಅವರು ಈ ಪಾತ್ರವನ್ನು ಮಾಡಲು ಒಪ್ಪಿಕೊಂಡಿದ್ದಕ್ಕೆ ತುಂಬ ಸಂತಸ ಆಗಿದೆ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಕಂಗನಾ ರಣಾವತ್​ ಅವರ ವೃತ್ತಿಜೀವನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ ಬಹುಮುಖ್ಯ ಆಗಲಿದೆ. ಅದಕ್ಕಾಗಿ ಅವರು ಸಖತ್​ ತಯಾರಿ ಮಾಡಿಕೊಂಡು ಶೂಟಿಂಗ್​ ಆರಂಭಿಸಿದ್ದಾರೆ. ಈ ಚಿತ್ರದಲ್ಲಿ ಜಯಪ್ರಕಾಶ್​ ನಾರಾಯಣ್​ ಅವರ ಪಾತ್ರವನ್ನು ಮಾಡುತ್ತಿರುವುದಕ್ಕೆ ಅನುಪಮ್​ ಖೇರ್​ ಅವರಿಗೆ ಹೆಮ್ಮೆ ಇದೆ. ಇದು ಅವರ 527ನೇ ಸಿನಿಮಾ ಎಂಬುದು ವಿಶೇಷ. ಈ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Published On - 4:14 pm, Fri, 22 July 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ