Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲೆಕ್ಷನ್ ವಿಚಾರದಲ್ಲಿ ತೆವಳಿಕೊಂಡು ಸಾಗುತ್ತಿದೆ ‘ಎಮರ್ಜೆನ್ಸಿ’ ಸಿನಿಮಾ

ಕಂಗನಾ ರಣಾವತ್ ಅವರ ನಿರ್ದೇಶನ ಮತ್ತು ನಟನೆಯ ‘ಎಮರ್ಜೆನ್ಸಿ’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದೆ. 25 ಕೋಟಿ ರೂಪಾಯಿಗೂ ಅಧಿಕ ಬಜೆಟ್‌ನ ಈ ಚಿತ್ರವು 10 ಕೋಟಿಗೂ ಕಡಿಮೆ ಗಳಿಕೆ ಮಾಡಿದೆ. ಇಂದಿರಾ ಗಾಂಧಿ ಅವರ ತುರ್ತು ಪರಿಸ್ಥಿತಿಯನ್ನು ಆಧರಿಸಿದ ಈ ಚಿತ್ರದ ವಾಣಿಜ್ಯ ವಿಫಲತೆಯು ಕಂಗನಾ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.

ಕಲೆಕ್ಷನ್ ವಿಚಾರದಲ್ಲಿ ತೆವಳಿಕೊಂಡು ಸಾಗುತ್ತಿದೆ ‘ಎಮರ್ಜೆನ್ಸಿ’ ಸಿನಿಮಾ
ಕಂಗನಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Jan 22, 2025 | 8:06 AM

ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಾಕಷ್ಟು ಕಷ್ಟಗಳನ್ನು ಮೀರಿ ಈ ಚಿತ್ರ ರಿಲೀಸ್ ಏನೋ ಆಯಿತು. ಆದರೆ, ಸಿನಿಮಾ ಅಂದುಕೊಂಡ ರೀತಿಯ ಕಲೆಕ್ಷನ್ ಮಾಡುತ್ತಿಲ್ಲ. ಈ ವಿಚಾರ ಕಂಗನಾಗೆ ಬೇಸರ ಮೂಡಿಸಿದೆ. ಹೀಗೆ ಮುಂದುವರಿದರೆ ಸಿನಿಮಾ ಲಾಭ ಕಾಣೋದು ಕಷ್ಟ ಆಗಬಹುದು ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

‘ಎಮರ್ಜೆನ್ಸಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಲಿದೆ ಎಂದು ಕಂಗನಾ ಅಂದುಕೊಂಡಿದ್ದರು. 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರ ಸಾಕಷ್ಟು ವಿವಾದಗಳನ್ನೇನೋ ಮಾಡಿತು. ಆದರೆ, ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಲು ಸಿನಿಮಾ ವಿಫಲವಾಗಿದೆ.

‘ಎಮರ್ಜೆನ್ಸಿ’ ಸಿನಿಮಾ ಮೊದಲ ದಿನ ಎರಡೂವರೆ ಕೋಟಿ ರೂಪಾಯಿ, ಎರಡನೇ ದಿನ ಮೂರುವರೆ ಕೋಟಿ ರೂಪಾಯಿ ಹಾಗೂ ನಾಲ್ಕನೇ ದಿನ 4.35 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಸಿನಿಮಾದ ಒಟ್ಟಾರೆ ಗಳಿಕೆ 10 ಕೋಟಿ ರೂಪಾಯಿಗೆ ಸೀಮಿತವಾಗಿದೆ. ಕಂಗನಾ ಇಟ್ಟುಕೊಂಡ ನಿರೀಕ್ಷೆಗೂ ಗಳಿಕೆಯ ಲೆಕ್ಕಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ಸಿನಿಮಾ ತೆವಳಿಕೊಂಡು ಸಾಗುತ್ತಿದೆ.

ಇದನ್ನೂ ಓದಿ: ಹೀನಾಯ ಸ್ಥಿತಿಯಲ್ಲಿದೆ ಕಂಗನಾ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಗಳಿಕೆ; ಎರಡು ದಿನದ ಕಲೆಕ್ಷನ್ ಎಷ್ಟು?

ಕಂಗನಾ ಅವರು ‘ಎಮರ್ಜೆನ್ಸಿ’ ಸಿನಿಮಾಗೆ 25 ಕೋಟಿ ರೂಪಾಯಿಗೂ ಹೆಚ್ಚಿನ ಬಜೆಟ್​ ಹಾಕಿದ್ದಾರೆ. ಈ ಸಿನಿಮಾ ಲಾಭ ಕಾಣಬೇಕು ಎಂದರೆ ಸಿನಿಮಾ 50 ಕೋಟಿ ರೂಪಾಯಿ ಮೇಲೆ ಕಲೆಕ್ಷನ್ ಮಾಡಬೇಕಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಅದು ಸಾಧ್ಯವಿಲ್ಲ. ಇದು ಕಂಗನಾ ಅವರನ್ನು ಮತ್ತಷ್ಟು ಚಿಂತೆಗೆ ಒಳ ಮಾಡಿದೆ.

ಕಂಗನಾ ಜೊತೆ ಅನುಪಮ್ ಖೇರ್ ಮೊದಲಾದವರು ನಟಿಸಿದ್ದಾರೆ. ಸಿನಿಮಾದ ಟಿವಿ ಹಕ್ಕು, ಒಟಿಟಿ ಹಕ್ಕು ಸೇರಿದರೆ ಅಲ್ಲಿಂದ ಅಲ್ಲಿಗೆ ಬಿಸ್ನೆಸ್ ಮಾಡಿದಂತೆ ಆಗಲಿದೆ. ಕಂಗನಾ ಅವರು ಈ ಚಿತ್ರದಲ್ಲಿ ಇಂದಿರಾ ಗಾಂಧಿ ಅವರ ಪಾತ್ರ ಮಾಡಿದ್ದಾರೆ. ಅವರದ್ದೇ ನಿರ್ದೇಶನ ಕೂಡ ಚಿತ್ರಕ್ಕೆ ಇದೆ. ಜೀ ಸ್ಟುಡಿಯೋ ಜೊತೆ ಸೇರಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅವರು ಈ ರೀತಿಯ ಸಿನಿಮಾಗಳನ್ನು ಮಾಡುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:26 pm, Mon, 20 January 25

ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ