AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ರೈ ಬಗ್ಗೆ ನೀಡಿದ್ದ ವಿವಾದತ್ಮಕ ಹೇಳಿಕೆ ಬಗ್ಗೆ ಮೌನ ಮುರಿದ ಇಮ್ರಾನ್ ಹಷ್ಮಿ

Eemran Hashmi: ಬಾಲಿವುಡ್ ನಟ ಇಮ್ರಾನ್ ಹಷ್ಮಿ ಹಲವು ವರ್ಷಗಳ ಹಿಂದೆ ಐಶ್ವರ್ಯಾ ರೈ ಬಗ್ಗೆ ನೀಡಿದ್ದ ಹೇಳಿಕೆಯೊಂದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

ಐಶ್ವರ್ಯಾ ರೈ ಬಗ್ಗೆ ನೀಡಿದ್ದ ವಿವಾದತ್ಮಕ ಹೇಳಿಕೆ ಬಗ್ಗೆ ಮೌನ ಮುರಿದ ಇಮ್ರಾನ್ ಹಷ್ಮಿ
ಇಮ್ರಾನ್ ಹಷ್ಮಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 23, 2024 | 4:42 PM

Share

ನಟ ಇಮ್ರಾನ್ ಹಷ್ಮಿ (Emran Hashmi) ವಿವಾದಗಳಿಂದ ದೂರವೇ ಇರಲು ಬಯಸುತ್ತಾರೆ. ಹಷ್ಮಿ ಸಂದರ್ಶನ ನೀಡೋದು ಬಹಳ ಕಡಿಮೆ. ಪಾರ್ಟಿಗಳಲ್ಲಿ ಭಾಗಿ ಆಗುವುದಿಲ್ಲ. 2013ರಲ್ಲಿ ‘ಕಾಫಿ ವಿತ್ ಕರಣ್ ಸೀಸನ್ 4’ರಲ್ಲಿ ಅವರು ಭಾಗಿ ಆಗಿದ್ದರು. ಈ ವೇಳೆ ಐಶ್ವರ್ಯಾ ರೈ ಅವರನ್ನು ‘ಪ್ಲಾಸ್ಟಿಕ್’ ಎಂದು ಕರೆದಿದ್ದರು. ಇದು ದೊಡ್ಡ ಮಟ್ಟದಲ್ಲಿ ವಿವಾದ ಆಗಿತ್ತು. ಈ ಬಗ್ಗೆ ಕರಣ್ ಜೋಹರ್ ಅವರು ಮಾತನಾಡಿದ್ದಾರೆ. ಈ ಘಟನೆ ನಡೆದು 10 ವರ್ಷಗಳೇ ಕಳೆದಿವೆ. ಈಗ ಅವರು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇಮ್ರಾನ್ ಹಷ್ಮಿ ಹೇಳಿದ್ದೇನು?

‘ಕಾಫಿ ವಿತ್ ಕರಣ್’ ಶೋನಲ್ಲಿ ವಿವಾದಗಳು ಹುಟ್ಟಿಕೊಳ್ಳುತ್ತವೆ. ಇಮ್ರಾನ್ ಹಷ್ಮಿ ಕೂಡ ಈ ರೀತಿ ವಿವಾದ ಮಾಡಿಕೊಂಡಿದ್ದರು. ರ‍್ಯಾಪಿಡ್ ಫೈರ್ ವೇಳೆ ಕರಣ್ ಜೋಹರ್ ಒಂದಷ್ಟು ಪ್ರಶ್ನೆ ಕೇಳಿದ್ದರು. ‘ಪ್ಲಾಸ್ಟಿಕ್’ ಎಂದು ಕೇಳಿದಾಗ ಐಶ್ವರ್ಯಾ ರೈ ಅವರ ಹೆಸರನ್ನು ತೆಗೆದುಕೊಂಡಿದ್ದರು. ಇದಾದ ಬಳಿಕ ಅವರು ಸಾಕಷ್ಟು ಟೀಕೆಗೆ ಒಳಗಾದರು. ಓವರ್ ರೇಟೆಡ್ ಎಂದಾಗ ತಮ್ಮ ಹೆಸರನ್ನೇ ಅವರು ತೆಗೆದುಕೊಂಡಿದ್ದರು ಅನ್ನೋದು ವಿಶೇಷ.

ಭಾರ ಹೊರುತ್ತೇನೆ..

‘ಐಶ್ವರ್ಯಾ ರೈ ಅವರನ್ನು ಪ್ಲಾಸ್ಟಿಕ್ ಎಂದು ಕರೆದಿದ್ದಕ್ಕೆ ಆ ಭಾರವನ್ನು ಹೊರಲು ನಾನು ಸಿದ್ಧನಿದ್ದೇನೆ’ ಎಂದು ಇಮ್ರಾನ್ ಹಷ್ಮಿ ಹೇಳಿದ್ದಾರೆ. ಇಮ್ರಾನ್ ಹಷ್ಮಿ ಅವರ ಹೇಳಿಕೆಯಿಂದ ಕರಣ್ ಜೋಹರ್ ಕೂಡ ಸರ್ಪ್ರೈಸ್​ಗೆ ಒಳಗಾಗಿದ್ದರು. ಈ ಮೊದಲು ಕರಣ್ ಜೋಹರ್ ಅವರು ಈ ಬಗ್ಗೆ ಮಾತನಾಡಿದ್ದರು. ‘ರ್ಯಾಪಿಡ್ ಫೈರ್ ಆಗಿದ್ದಕ್ಕಾಗಿ ನಾನು ಆ ಹೇಳಿಕೆ ನೀಡಿದ್ದೆ’ ಎಂದಿದ್ದರು ಅವರು.

ಇದನ್ನೂ ಓದಿ:ಹೊಸ ಇಮೇಜ್ ಪಡೆಯಲು ಮುಂದಾದ ಇಮ್ರಾನ್ ಹಷ್ಮಿ; ‘ಡಾನ್ 3’ ಚಿತ್ರದಲ್ಲಿ ನೆಗೆಟಿವ್ ಪಾತ್ರ?

ಬದಲಾದ ಆಯ್ಕೆ

ಇಮ್ರಾನ್ ಹಷ್ಮಿ ಅವರು ಸೀರಿಯಲ್ ಕಿಸ್ಸರ್ ಆಗಿ ಕಾಣಿಸಿಕೊಂಡಿದ್ದರು. ಅವರ ಸಿನಿಮಾಗಳು ಈ ರೀತಿ ಆಗಿಯೇ ಹೈಲೈಟ್ ಆಗಿದ್ದರು. ಆದರೆ, ಇತ್ತೀಚೆಗೆ ಅವರ ಪಾತ್ರಗಳ ಆಯ್ಕೆಯಲ್ಲಿ ಬದಲಾಗಿದ್ದಾರೆ. ‘ಟೈಗರ್ 3’ ಸಿನಿಮಾದಲ್ಲಿ ಇಮ್ರಾನ್ ಅವರು ವಿಲನ್ ಪಾತ್ರ ಮಾಡಿದ್ದಾರೆ. ಪವನ್ ಕಲ್ಯಾಣ್ ನಟನೆಯ ‘ಒಜಿ’ ಸಿನಿಮಾದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ನಟನೆಯ ಮೊದಲ ತೆಲುಗು ಸಿನಿಮಾ. ‘ಜಿ2’ ಚಿತ್ರಕ್ಕೂ ಇಮ್ರಾನ್ ಹಷ್ಮಿ ವಿಲನ್. ಅವರನ್ನು ವಿಲನ್ ಆಗಿ ಜನರು ಇಷ್ಟಪಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ