AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಸೃಷ್ಟಿಯಾಯ್ತು ಇತಿಹಾಸ; 38 ವರ್ಷಗಳ ಬಳಿಕ ಸಿನಿಮಾ ಪ್ರದರ್ಶನ

‘ಗ್ರೌಂಡ್ ಜೀರೋ’ ಚಿತ್ರದಲ್ಲಿ ಗಡಿ ಭದ್ರತಾ ಪಡೆಯ ಯೋಧನಾಗಿ ಇಮ್ರಾನ್ ಹಷ್ಮಿ ನಟಿಸಿದ್ದಾರೆ. ಕಾಶ್ಮೀರಕ್ಕೆ ಸಂಬಂಧಿಸಿದ ಕಥೆ ಈ ಸಿನಿಮಾದಲ್ಲಿದೆ. ವಿಶೇಷ ಏನೆಂದರೆ, ಈ ಸಿನಿಮಾದ ಪ್ರದರ್ಶನವನ್ನು ಕಾಶ್ಮೀರದಲ್ಲೇ ಮಾಡಲಾಗಿದೆ. ಈ ಮೂಲಕ 38 ವರ್ಷಗಳ ನಂತರ ಕಾಶ್ಮೀರದಲ್ಲಿ ಸಿನಿಮಾ ಪ್ರದರ್ಶನ ಆದಂತಾಗಿದೆ.

ಕಾಶ್ಮೀರದಲ್ಲಿ ಸೃಷ್ಟಿಯಾಯ್ತು ಇತಿಹಾಸ; 38 ವರ್ಷಗಳ ಬಳಿಕ ಸಿನಿಮಾ ಪ್ರದರ್ಶನ
Emraan Hashmi
ಮದನ್​ ಕುಮಾರ್​
|

Updated on: Apr 19, 2025 | 3:40 PM

Share

ಕಾಶ್ಮೀರ (Kashmir) ಎಂದಕೂಡಲೇ ಗುಂಡಿನ ಸದ್ದು ನೆನಪಾಗುತ್ತದೆ. ಅಷ್ಟರಮಟ್ಟಿಗೆ ಭಯೋತ್ಪಾದಕ ಚಟುವಟಿಕೆಗಳು ಅಲ್ಲಿ ನಡೆದಿವೆ. ಆದರೆ ಇತ್ತೀಚೆಗೆ ಪರಿಸ್ಥಿತಿ ಸುಧಾರಿಸುತ್ತಿದೆ. ಹಾಗಾಗಿ ಜನಜೀವನದಲ್ಲಿ ಕೂಡ ಬದಲಾವಣೆ ಕಾಣುತ್ತಿದೆ. ಕಳೆದ ನಾಲ್ಕು ದಶಕದಿಂದ ಅಲ್ಲಿ ಯಾವುದೇ ಸಿನಿಮಾ ಪ್ರದರ್ಶನ ಆಗಿರಲಿಲ್ಲ. ಈಗ ಬಾಲಿವುಡ್ನ್ ‘ಗ್ರೌಂಡ್ ಜೀರೋ’ (Ground Zero) ಸಿನಿಮಾ ಇತಿಹಾಸ ಸೃಷ್ಟಿ ಮಾಡಿದೆ. ಬರೋಬ್ಬರಿ 38 ವರ್ಷಗಳ ಬಳಿಕ ಕಾಶ್ಮೀರದ ಶ್ರೀನಗರದಲ್ಲಿ ಸಿನಿಮಾ ಪ್ರದರ್ಶನ ಮಾಡಲಾಗಿದೆ. ಇಷ್ಟು ವರ್ಷಗಳ ಬಳಿಕ ಪ್ರದರ್ಶನ ಕಂಡ ಮೊದಲ ಸಿನಿಮಾ ಎಂಬ ಕೀರ್ತಿ ‘ಗ್ರೌಂಡ್ ಜೀರೋ’ ಚಿತ್ರಕ್ಕೆ ಸಿಕ್ಕಿದೆ. ಈ ಸಿನಿಮಾದಲ್ಲಿ ಇಮ್ರಾನ್ ಹಷ್ಮಿ (Emraan Hashmi) ಅವರು ನಟಿಸಿದ್ದಾರೆ.

ಕಾಶ್ಮೀರದಲ್ಲಿ ನಡೆದ ನೈಜ ಘಟನೆಗಳನ್ನು ಆಧರಿಸಿ ‘ಗ್ರೌಂಡ್ ಜೀರೋ’ ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾದಲ್ಲಿ ಇಮ್ರಾನ್ ಹಷ್ಮಿ ಅವರು ಗಡಿ ಭದ್ರತಾ ಪಡೆಯ ಯೋಧನ ಪಾತ್ರ ಮಾಡಿದ್ದಾರೆ. ಇದು ಅವರ ವೃತ್ತಿ ಜೀವನದ ಡಿಫರೆಂಟ್ ಸಿನಿಮಾ ಆಗಿದೆ. ದೇಶಭಕ್ತಿಯ ಕಹಾನಿ ಈ ಸಿನಿಮಾದಲ್ಲಿದೆ. ಕಾಶ್ಮೀರದ ಹೊಸ ಐನಾಕ್ಸ್ ಚಿತ್ರಮಂದಿರದಲ್ಲಿ ‘ಗ್ರೌಂಡ್ ಜೀರೋ’ ಸಿನಿಮಾದ ವಿಶೇಷ ಪ್ರದರ್ಶನ ಮಾಡಲಾಗಿದೆ.

‘ಗ್ರೌಂಡ್ ಜೀರೋ’ ಸಿನಿಮಾದ ಟ್ರೇಲರ್ ನೋಡಿದ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾ ಏಪ್ರಿಲ್ 25ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಕಾಶ್ಮೀರದಲ್ಲಿ ಸ್ಪೆಷಲ್ ಸ್ಕ್ರೀನಿಂಗ್ ಮೂಲಕ ಸದ್​ದು ಮಾಡಿದೆ. ನಟ ಇಮ್ರಾನ್ ಹಷ್ಮಿ, ನಿರ್ಮಾಪಕ ಫರ್ಹಾನ್ ಅಖ್ತರ್ ಸೇರಿದಂತೆ ಚಿತ್ರತಂಡ ಅನೇಕರು ವಿಶೇಷ ಪ್ರದರ್ಶನಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ
Image
ಹೈದರಾಬಾದ್​ನಲ್ಲಿ ನಟ ಇಮ್ರಾನ್ ಹಷ್ಮಿ ಕತ್ತಿಗೆ ಆಯ್ತು ದೊಡ್ಡ ಗಾಯ
Image
ಇಮ್ರಾನ್ ಹಶ್ಮಿ ಕಿಸ್ಸಿಂಗ್ ದೃಶ್ಯ ಮಾಡಿದಾಗಲೆಲ್ಲ ಪತ್ನಿಗೆ ಸಿಟ್ಟು
Image
ಇಮ್ರಾನ್ ಹಶ್ಮಿ ಬರ್ತ್ಡೇ: ನಟ ಈವರೆಗೆ ಸಂಪಾದಿಸಿದ್ದು ಎಷ್ಟು ಕೋಟಿ ರೂಪಾಯಿ?
Image
ನಮಗಿಂತ ದಕ್ಷಿಣ ಭಾರತದವರು ಶಿಸ್ತಿನ ಕೆಲಸ ಮಾಡುತ್ತಾರೆ ಎಂದ ಇಮ್ರಾನ್ ಹಶ್ಮಿ

ಇದನ್ನೂ ಓದಿ: ಕಾಶ್ಮೀರದ ಕುರಿತು ಪಾಕ್ ಸೇನಾ ಮುಖ್ಯಸ್ಥರ ಹೇಳಿಕೆಗೆ ಭಾರತ ತಿರುಗೇಟು

ತೇಜಸ್ ಪ್ರಭಾ ವಿಜಯ್ ಅವರು ‘ಗ್ರೌಂಡ್ ಜೀರೋ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. 38 ವರ್ಷದ ನಂತರ ಕಾಶ್ಮೀರದಲ್ಲಿ ಸಿನಿಮಾ ಪ್ರದರ್ಶನ ಆಗಿರುವುದು ಈ ಚಿತ್ರತಂಡಕ್ಕೆ ಖುಷಿ ತಂದಿದೆ. ಇನ್ಮುಂದೆ ಬೇರೆ ಬೇರೆ ಸಿನಿಮಾಗಳು ಕೂಡ ಇಲ್ಲಿ ಪ್ರದರ್ಶನ ಆಗಲಿ ಎಂದು ಜನರು ಆಶಿಸುತ್ತಿದ್ದಾರೆ. ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ರೀತಿಯೇ ‘ಗ್ರೌಂಡ್ ಜೀರೋ’ ಸಿನಿಮಾ ಕೂಡ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಾಣುತ್ತಾ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು