AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ವಂಚನೆ ಪ್ರಕರಣದ ಕಿಂಗ್​ ಪಿನ್​ ಜತೆ ಕಿಸ್ಸಿಂಗ್​; ನಟಿ ಜಾಕ್ವೆಲಿನ್​ಗೆ ನೋಟಿಸ್

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಫರ್ನಾಂಡಿಸ್​ ​ಮೇಲೂ ಅನುಮಾನ ಮೂಡಿತ್ತು.

Jacqueline Fernandez: ವಂಚನೆ ಪ್ರಕರಣದ ಕಿಂಗ್​ ಪಿನ್​ ಜತೆ ಕಿಸ್ಸಿಂಗ್​; ನಟಿ ಜಾಕ್ವೆಲಿನ್​ಗೆ ನೋಟಿಸ್
ಜಾಕ್ವೆಲಿನ್​ ಮತ್ತು ಸುಕೇಶ್​
TV9 Web
| Edited By: |

Updated on: Dec 06, 2021 | 7:58 PM

Share

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಈಗ ದೊಡ್ಡ ಸಂಕಷ್ಟ ಎದುರಾಗಿದೆ. ಬರೋಬ್ಬರಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ. ಪ್ರಕರಣದ ಕಿಂಗ್​ ಪಿನ್​ ಸುಕೇಶ್​ ಚಂದ್ರಶೇಖರ್ ಜತೆ ಆಪ್ತವಾಗಿರುವ ಫೋಟೋಗಳು ಲೀಕ್​ ಆಗಿವೆ. ಇದರಿಂದ ಪ್ರಕರಣಕ್ಕೆ ಮತ್ತಷ್ಟು ಸಾಕ್ಷ್ಯ ಸಿಕ್ಕಂತಾಗಿದೆ. ಹೀಗಾಗಿ, ಡಿಸೆಂಬರ್​ 8ರಂದು ವಿಚಾರಣೆಗೆ ಹಾಜರಾಗುವಂತೆ ಜಾಕ್ವೆಲಿನ್​ಗೆ ನೋಟಿಸ್​ ನೀಡಲಾಗಿದೆ.

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಫರ್ನಾಂಡಿಸ್​ ​ಮೇಲೂ ಅನುಮಾನ ಮೂಡಿತ್ತು. ಈಗ ಇಬ್ಬರೂ ಆಪ್ತವಾಗಿರುವ ಫೋಟೋ ಲೀಕ್​​ ಆಗಿದ್ದು, ನಟಿಗೆ ಸಂಕಷ್ಟ ಹೆಚ್ಚಾಗಿದೆ.

ಜಾಕ್ವೆಲಿನ್​ ಫರ್ನಾಂಡಿಸ್​ ಜತೆ ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ ​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ದೆಹಲಿ ಜೈಲಿನಲ್ಲಿ ಸುಕೇಶ್ ಚಂದ್ರಶೇಖರ್ ಇದ್ದಾರೆ. ಈತ ದೆಹಲಿ ಜೈಲಿನಲ್ಲಿ ಇದ್ದುಕೊಂಡೇ ಉದ್ಯಮಿಗಳ ಪತ್ನಿಯರಿಗೆ ಕಾಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು ಎಂದು ವರದಿ ಆಗಿದೆ. ಈ ಮೊದಲು ತಮಿಳುನಾಡಿನ ಟಿಟಿವಿ ದಿನಕರನ್​​ಗೆ ಎಐಎಡಿಎಂಕೆ ಪಕ್ಷದ ಚಿಹ್ನೆ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ್ದ ಬಗ್ಗೆ ದೂರು ದಾಖಲಾಗಿದೆ. ಇವರ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಕಿಚ್ಚ ಸುದೀಪ್​ ನಟನೆಯ, ಅನೂಪ್​ ಭಂಡಾರಿ ನಿರ್ದೇಶನದ ‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಒಂದು ವಿಶೇಷ ಪಾತ್ರ ಮಾಡಿದ್ದಾರೆ. ಗಡಂಗ್​ ರಕ್ಕಮ್ಮ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಆದರೆ ಅವರು ಕನ್ನಡ ಸಿನಿಪ್ರಿಯರಿಗೆ ಪರಿಚಯಗೊಳ್ಳುವ ಮುನ್ನವೇ ಈ ರೀತಿ ವಿವಾದಗಳಲ್ಲಿ ಸಿಕ್ಕಿ ಹಾಕಿಕೊಂಡಿರುವುದು ವಿಪರ್ಯಾಸ.

ಇದನ್ನೂ ಓದಿ: ಜಾಕ್ವೆಲಿನ್​ಗೆ 36 ಲಕ್ಷ ರೂಪಾಯಿ ಬೆಲೆಯ ಬೆಕ್ಕನ್ನು ಗಿಫ್ಟ್​ ನೀಡಿದ್ದ ಬಹುಕೋಟಿ ವಂಚನೆ ಆರೋಪಿ ಸುಕೇಶ್​

ಜಾಕ್ವೆಲಿನ್​ ಕಿಸ್ಸಿಂಗ್​ ಪ್ರಕರಣ: ನಟಿಯನ್ನು ದೂರ ಇಡೋಕೆ ಮುಂದಾದ ಸಲ್ಮಾನ್​ ಖಾನ್

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?