AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ

Aishwarya Rai Bachchan: ಪನಾಮಾ ಪೇಪರ್ಸ್​ ಲೀಕ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯಾ ರೈ ಬಚ್ಚನ್​ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.

ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ
ಐಶ್ವರ್ಯಾ ರೈ ಬಚ್ಚನ್
TV9 Web
| Edited By: |

Updated on:Dec 20, 2021 | 12:02 PM

Share

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಅವರಿಗೆ ಸಂಕಷ್ಟ ಎದುರಾಗಿದೆ. ಪನಾಮಾ ಪೇಪರ್ಸ್​ ಲೀಕ್​ (Panama Papers Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಮನ್ಸ್​ (ED Summons) ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (Enforcement Directorate) ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಿದೆ. 2016ರಿಂದಲೂ ಪನಾಮಾ ಪೇಪರ್ಸ್​ ಲೀಕ್​ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.

ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು (ಡಿ.20) ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಲಾಗಿದೆ. ಮುಂಬೈನಲ್ಲಿರುವ ಅವರ ‘ಪ್ರತೀಕ್ಷಾ’ ನಿವಾಸಕ್ಕೆ ಸಮನ್ಸ್​ ತಲುಪಿದೆ. 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ದಾಖಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಸೂಚಿಸಲಾಗಿದೆ. ಆದರೆ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕವನ್ನು ಅವರು ಕೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಎರಡು ಬಾರಿ ಅವರು ವಿಚಾರಣೆ ದಿನಾಂಕ ಮುಂದೂಡಲು ಕೇಳಿಕೊಂಡಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಇದನ್ನೂ ಓದಿ:

ವೈರಲ್ ಆಯ್ತು ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ ಮದುವೆಯ ಚಿತ್ರ; ಫೋಟೋದ ಅಸಲಿಯತ್ತನ್ನು ತೆರೆದಿಟ್ಟ ನಟ

Aishwarya Rai: ಹಿಂದಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಐಶ್ವರ್ಯಾ ರೈ; ಸುಂದರ ಪತ್ರದ ಮೂಲಕ ಶುಭ ಕೋರಿದ ರೇಖಾ

Published On - 11:29 am, Mon, 20 December 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ