ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ

Aishwarya Rai Bachchan: ಪನಾಮಾ ಪೇಪರ್ಸ್​ ಲೀಕ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯಾ ರೈ ಬಚ್ಚನ್​ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.

ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ
ಐಶ್ವರ್ಯಾ ರೈ ಬಚ್ಚನ್
Follow us
| Updated By: ಮದನ್​ ಕುಮಾರ್​

Updated on:Dec 20, 2021 | 12:02 PM

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಅವರಿಗೆ ಸಂಕಷ್ಟ ಎದುರಾಗಿದೆ. ಪನಾಮಾ ಪೇಪರ್ಸ್​ ಲೀಕ್​ (Panama Papers Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಮನ್ಸ್​ (ED Summons) ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (Enforcement Directorate) ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಿದೆ. 2016ರಿಂದಲೂ ಪನಾಮಾ ಪೇಪರ್ಸ್​ ಲೀಕ್​ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.

ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು (ಡಿ.20) ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಲಾಗಿದೆ. ಮುಂಬೈನಲ್ಲಿರುವ ಅವರ ‘ಪ್ರತೀಕ್ಷಾ’ ನಿವಾಸಕ್ಕೆ ಸಮನ್ಸ್​ ತಲುಪಿದೆ. 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ದಾಖಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಸೂಚಿಸಲಾಗಿದೆ. ಆದರೆ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕವನ್ನು ಅವರು ಕೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಎರಡು ಬಾರಿ ಅವರು ವಿಚಾರಣೆ ದಿನಾಂಕ ಮುಂದೂಡಲು ಕೇಳಿಕೊಂಡಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಇದನ್ನೂ ಓದಿ:

ವೈರಲ್ ಆಯ್ತು ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ ಮದುವೆಯ ಚಿತ್ರ; ಫೋಟೋದ ಅಸಲಿಯತ್ತನ್ನು ತೆರೆದಿಟ್ಟ ನಟ

Aishwarya Rai: ಹಿಂದಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಐಶ್ವರ್ಯಾ ರೈ; ಸುಂದರ ಪತ್ರದ ಮೂಲಕ ಶುಭ ಕೋರಿದ ರೇಖಾ

Published On - 11:29 am, Mon, 20 December 21

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು