AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ

Aishwarya Rai Bachchan: ಪನಾಮಾ ಪೇಪರ್ಸ್​ ಲೀಕ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯಾ ರೈ ಬಚ್ಚನ್​ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.

ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ
ಐಶ್ವರ್ಯಾ ರೈ ಬಚ್ಚನ್
TV9 Web
| Edited By: |

Updated on:Dec 20, 2021 | 12:02 PM

Share

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಅವರಿಗೆ ಸಂಕಷ್ಟ ಎದುರಾಗಿದೆ. ಪನಾಮಾ ಪೇಪರ್ಸ್​ ಲೀಕ್​ (Panama Papers Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಮನ್ಸ್​ (ED Summons) ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (Enforcement Directorate) ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಿದೆ. 2016ರಿಂದಲೂ ಪನಾಮಾ ಪೇಪರ್ಸ್​ ಲೀಕ್​ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.

ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು (ಡಿ.20) ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಲಾಗಿದೆ. ಮುಂಬೈನಲ್ಲಿರುವ ಅವರ ‘ಪ್ರತೀಕ್ಷಾ’ ನಿವಾಸಕ್ಕೆ ಸಮನ್ಸ್​ ತಲುಪಿದೆ. 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ದಾಖಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಸೂಚಿಸಲಾಗಿದೆ. ಆದರೆ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕವನ್ನು ಅವರು ಕೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಎರಡು ಬಾರಿ ಅವರು ವಿಚಾರಣೆ ದಿನಾಂಕ ಮುಂದೂಡಲು ಕೇಳಿಕೊಂಡಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಇದನ್ನೂ ಓದಿ:

ವೈರಲ್ ಆಯ್ತು ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ ಮದುವೆಯ ಚಿತ್ರ; ಫೋಟೋದ ಅಸಲಿಯತ್ತನ್ನು ತೆರೆದಿಟ್ಟ ನಟ

Aishwarya Rai: ಹಿಂದಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಐಶ್ವರ್ಯಾ ರೈ; ಸುಂದರ ಪತ್ರದ ಮೂಲಕ ಶುಭ ಕೋರಿದ ರೇಖಾ

Published On - 11:29 am, Mon, 20 December 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ