AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ

Aishwarya Rai Bachchan: ಪನಾಮಾ ಪೇಪರ್ಸ್​ ಲೀಕ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯಾ ರೈ ಬಚ್ಚನ್​ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.

ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ
ಐಶ್ವರ್ಯಾ ರೈ ಬಚ್ಚನ್
TV9 Web
| Edited By: |

Updated on:Dec 20, 2021 | 12:02 PM

Share

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಅವರಿಗೆ ಸಂಕಷ್ಟ ಎದುರಾಗಿದೆ. ಪನಾಮಾ ಪೇಪರ್ಸ್​ ಲೀಕ್​ (Panama Papers Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಮನ್ಸ್​ (ED Summons) ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (Enforcement Directorate) ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಿದೆ. 2016ರಿಂದಲೂ ಪನಾಮಾ ಪೇಪರ್ಸ್​ ಲೀಕ್​ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.

ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು (ಡಿ.20) ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಲಾಗಿದೆ. ಮುಂಬೈನಲ್ಲಿರುವ ಅವರ ‘ಪ್ರತೀಕ್ಷಾ’ ನಿವಾಸಕ್ಕೆ ಸಮನ್ಸ್​ ತಲುಪಿದೆ. 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ದಾಖಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಸೂಚಿಸಲಾಗಿದೆ. ಆದರೆ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕವನ್ನು ಅವರು ಕೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಎರಡು ಬಾರಿ ಅವರು ವಿಚಾರಣೆ ದಿನಾಂಕ ಮುಂದೂಡಲು ಕೇಳಿಕೊಂಡಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಇದನ್ನೂ ಓದಿ:

ವೈರಲ್ ಆಯ್ತು ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ ಮದುವೆಯ ಚಿತ್ರ; ಫೋಟೋದ ಅಸಲಿಯತ್ತನ್ನು ತೆರೆದಿಟ್ಟ ನಟ

Aishwarya Rai: ಹಿಂದಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಐಶ್ವರ್ಯಾ ರೈ; ಸುಂದರ ಪತ್ರದ ಮೂಲಕ ಶುಭ ಕೋರಿದ ರೇಖಾ

Published On - 11:29 am, Mon, 20 December 21

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ