Katrina Kaif: ಪ್ರತಿ ವಾರ ಕತ್ರಿನಾ ಕೈಫ್ ಮನೆಯಲ್ಲಿ ನಡೆಯುತ್ತೆ ಬಜೆಟ್ ಸಭೆ; ಹೊಸ ವಿಷಯ ತಿಳಿಸಿದ ವಿಕ್ಕಿ ಕೌಶಲ್

ಸೆಲೆಬ್ರಿಟಿಗಳು ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡುತ್ತಾರೆ ಎನ್ನುವ ನಂಬಿಕೆ ಅನೇಕರದ್ದು. ಆದರೆ, ಎಲ್ಲರೂ ಇದೇ ರೀತಿ ಇರುವುದಿಲ್ಲ ಎಂಬುದಕ್ಕೆ ಕತ್ರಿನಾ ಉತ್ತಮ ಉದಾಹರಣೆ.

Katrina Kaif: ಪ್ರತಿ ವಾರ ಕತ್ರಿನಾ ಕೈಫ್ ಮನೆಯಲ್ಲಿ ನಡೆಯುತ್ತೆ ಬಜೆಟ್ ಸಭೆ; ಹೊಸ ವಿಷಯ ತಿಳಿಸಿದ ವಿಕ್ಕಿ ಕೌಶಲ್
ವಿಕ್ಕಿ ಕೌಶಲ್, ಕತ್ರಿನಾ ಕೈಫ್
Follow us
|

Updated on: Jun 07, 2023 | 7:01 AM

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ (Katrina Kaif) ಮಧ್ಯೆ ವಯಸ್ಸಿನ ಅಂತರ ಜಾಸ್ತಿ ಇದೆ. ಕತ್ರಿನಾಗಿಂತ ವಿಕ್ಕಿ ಐದು ವರ್ಷ ಸಣ್ಣವರು. ಆದರೆ, ಈ ವಯಸ್ಸಿನ ಅಂತರದಿಂದ ಇವರ ಸಂಸಾರಕ್ಕೆ ಯಾವುದೇ ತೊಂದರೆ ಆಗಿಲ್ಲ. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಇಬ್ಬರ ಮಧ್ಯೆ ಇರುವ ಪ್ರೀತಿ ಎಷ್ಟು ಎಂಬುದು ಈಗಾಗಲೇ ಅನೇಕ ಬಾರಿ ಸಾಬೀತಾಗಿದೆ. ಈಗ ಕತ್ರಿನಾ ಬಗ್ಗೆ ವಿಕ್ಕಿ ಅಚ್ಚರಿಯ ವಿಚಾರ ಹೊರಹಾಕಿದ್ದಾರೆ. ಪ್ರತಿವಾರ ಕತ್ರಿನಾ ಬಜೆಟ್ ಮೀಟಿಂಗ್ ನಡೆಸುತ್ತಾರೆ. ಇದಕ್ಕೆ ಕಾರಣ ಏನು ಎಂಬುದನ್ನು ವಿಕ್ಕಿ ಕೌಶಲ್ ಅವರು ವಿವರಿಸಿದ್ದಾರೆ.

ಸೆಲೆಬ್ರಿಟಿಗಳು ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡುತ್ತಾರೆ ಎನ್ನುವ ನಂಬಿಕೆ ಅನೇಕರದ್ದು. ಆದರೆ, ಎಲ್ಲರೂ ಇದೇ ರೀತಿ ಇರುವುದಿಲ್ಲ ಎಂಬುದಕ್ಕೆ ಕತ್ರಿನಾ ಉತ್ತಮ ಉದಾಹರಣೆ. ಅವರು ಹಣ ಎಲ್ಲೆಲ್ಲಿ ಖರ್ಚಾಗುತ್ತಿದೆ, ಹಣವನ್ನು ಯಾವ ರೀತಿಯಲ್ಲಿ ಬಳಕೆ ಮಾಡಲಾಗುತ್ತಿದೆ ಎಂಬುದನ್ನು ಸಭೆಯಲ್ಲಿ ಮನೆಯ ಸಿಬ್ಬಂದಿ ಬಳಿ ಕೇಳುತ್ತಾರಂತೆ.

‘ನಮ್ಮ ಮನೆಯ ಸಿಬ್ಬಂದಿಯೊಂದಿಗೆ ಕತ್ರಿನಾ ಸಭೆ ನಡೆಸುತ್ತಾರೆ. ಇದು ಸಖತ್ ಫನ್ ಆಗಿರುತ್ತದೆ. ಮನೆಯ ಕೆಲಸದವರನ್ನು ಕರೆದು ಕತ್ರಿನಾ ಮನೆಯ ಬಜೆಟ್​ ಬಗ್ಗೆ ಚರ್ಚೆ ಮಾಡುತ್ತಾರೆ. ಹಣವನ್ನು ಹೇಗೆ ಖರ್ಚು ಮಾಡಲಾಗುತ್ತಿದೆ, ಎಷ್ಟು ವೆಚ್ಚ ಬರುತ್ತಿದೆ ಎಂದು ಅವರು ಲೆಕ್ಕ ಕೇಳುತ್ತಾರೆ. ಆ ಚರ್ಚೆ ನಡೆಯುವಾಗ ನಾನು ಅಲ್ಲಿ ಪ್ರೇಕ್ಷಕ. ಈ ಸಭೆಯನ್ನು ಆನಂದಿಸುತ್ತೇನೆ. ಯಾವಾಗಲೂ ನಾನು ಪಾಪ್‌ಕಾರ್ನ್‌ನೊಂದಿಗೆ ಕುಳಿತಿರುತ್ತೇನೆ’ ಎಂದಿದ್ದಾರೆ ವಿಕ್ಕಿ.

ಇದನ್ನೂ ಓದಿ: ನಟ ವಿಕ್ಕಿ ಕೌಶಲ್ ಅನ್ನು ಬದಿಗೆ ತಳ್ಳಿದ ಸಲ್ಮಾನ್ ಖಾನ್ ಭದ್ರತಾ ಸಿಬ್ಬಂದಿ, ವಿಡಿಯೋ ವೈರಲ್

ಸಿನಿಮಾ ವಿಚಾರಕ್ಕೆ ಬರೋದಾದರೆ ವಿಕ್ಕಿ ಕೌಶಲ್ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ವಿಕ್ಕಿಗೆ ಜೊತೆಯಾಗಿ ಸಾರಾ ಅಲಿ ಖಾನ್ ನಟಿಸಿದ್ದಾರೆ. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 25+ ಕೋಟಿ ಕಲೆಕ್ಷನ್ ಮಾಡಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಮೈಲೇಜ್​ ಪಡೆದುಕೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.   ಇನ್ನು ಕತ್ರಿನಾ ಕೈಫ್ ಅವರು ‘ಮೇರಿ ಕ್ರಿಸ್​​ಮಸ್’ ಹಾಗೂ ‘ಟೈಗರ್ 3’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!