AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಪಂಚೆ ಧರಿಸಿ ಕುಣಿದಿದ್ದಕ್ಕೆ ಎದುರಾಯ್ತು ಕಿರಿಕ್​; ಸಿನಿಮಾ ಬ್ಯಾನ್​ ಮಾಡಲು ಒತ್ತಾಯ

Yentamma song: ‘ಈ ಹಾಡಿನಿಂದಾಗಿ ದಕ್ಷಿಣ ಭಾರತದ ಸಂಸ್ಕೃತಿಗೆ ಧಕ್ಕೆ ಆಗಿದೆ. ಸಾಂಪ್ರದಾಯಿಕ ಉಡುಗೆಯನ್ನು ಅಸಹ್ಯವಾಗಿ ತೋರಿಸಲಾಗಿದೆ’ ಎಂದು ಲಕ್ಷ್ಮಣ್​ ಶಿವರಾಮಕೃಷ್ಣನ್​ ಕಿಡಿ ಕಾರಿದ್ದಾರೆ.

ಸಲ್ಮಾನ್​ ಖಾನ್​ ಪಂಚೆ ಧರಿಸಿ ಕುಣಿದಿದ್ದಕ್ಕೆ ಎದುರಾಯ್ತು ಕಿರಿಕ್​; ಸಿನಿಮಾ ಬ್ಯಾನ್​ ಮಾಡಲು ಒತ್ತಾಯ
ಸಲ್ಮಾನ್ ಖಾನ್
ಮದನ್​ ಕುಮಾರ್​
|

Updated on:Apr 09, 2023 | 1:05 PM

Share

ನಟ ಸಲ್ಮಾನ್​ ಖಾನ್​ (Salman Khan) ಅವರು ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುವುದರ ಜೊತೆಗೆ ನಿರ್ಮಾಣವನ್ನೂ ಅವರೇ ಮಾಡಿದ್ದಾರೆ. ಈದ್​ ಹಬ್ಬದ ಪ್ರಯುಕ್ತ ಏಪ್ರಿಲ್​ 21ರಂದು ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ಸಿನಿಮಾ ರಿಲೀಸ್​ ಆಗಲಿದೆ. ಕೆಲವೇ ದಿನಗಳ ಹಿಂದೆ ಈ ಚಿತ್ರದ ‘ಯೆಂಟಮ್ಮಾ..’ ಹಾಡು ಬಿಡುಗಡೆ ಆಯಿತು. ಎಲ್ಲ ಕಡೆಗಳಿಂದ ಈ ಗೀತೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದರಲ್ಲಿ ಸಲ್ಮಾನ್​ ಖಾನ್​ ಅವರು ಪಂಚೆ ಧರಿಸಿ ಕುಣಿದಿದ್ದಾರೆ. ಅವರಿಗೆ ರಾಮ್​ ಚರಣ್​, ದಗ್ಗುಬಾಟಿ ವೆಂಕಟೇಶ್​ ಕೂಡ ಸಾಥ್​ ನೀಡಿದ್ದಾರೆ. ಆದರೆ ಈ ಹಾಡಿನ ವಿರುದ್ಧ ಕೆಲವರು ಕಿಡಿಕಾರಿದ್ದಾರೆ. ಮಾಜಿ ಕ್ರಿಕೆಟರ್​, ಕಾಮೆಂಟೇಟರ್​ ಲಕ್ಷ್ಮಣ್​ ಶಿವರಾಮಕೃಷ್ಣನ್​ (Laxman Sivaramakrishnan) ಅವರು ‘ಯೆಂಟಮ್ಮಾ..’ ಗೀತೆ ಬಗ್ಗೆ ತಕರಾರು ಎತ್ತಿದ್ದಾರೆ.

ಲಕ್ಷ್ಮಣ್​ ಶಿವರಾಮಕೃಷ್ಣನ್​ ತಕರಾರು ಏನು?

‘ಈ ಹಾಡಿನಿಂದಾಗಿ ದಕ್ಷಿಣ ಭಾರತದ ಸಂಸ್ಕೃತಿಗೆ ಧಕ್ಕೆ ಆಗಿದೆ. ಇದು ಲುಂಗಿ ಅಲ್ಲ. ಇದು ಧೋತಿ. ಸಾಂಪ್ರದಾಯಿಕ ಉಡುಗೆಯನ್ನು ಅಸಹ್ಯವಾಗಿ ತೋರಿಸಲಾಗಿದೆ’ ಎಂದು ಲಕ್ಷ್ಮಣ್​ ಶಿವರಾಮಕೃಷ್ಣನ್​ ಟ್ವೀಟ್​ ಮಾಡಿದ್ದಾರೆ. ಅವರ ಮಾತಿಗೆ ಕೆಲವು ನೆಟ್ಟಿಗರು ಬೆಂಬಲ ಸೂಚಿಸಿದ್ದಾರೆ. ಅವರ ಈ ಟ್ವೀಟ್​ ವೈರಲ್​ ಆಗಿದೆ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಸಿನಿಮಾ ಬ್ಯಾನ್​ ಮಾಡಲು ಮನವಿ:

‘ಇಂದಿನ ಕಾಲದಲ್ಲಿ ಜನರು ದುಡ್ಡಿಗಾಗಿ ಏನನ್ನು ಬೇಕಿದ್ದಾರೂ ಮಾಡುತ್ತಾರೆ. ಲುಂಗಿ ಮತ್ತು ಧೋತಿ ಎಂದರೆ ಏನು ಅಂತ ಸಣ್ಣ ಅಧ್ಯಯನ ಮಾಡೋದು ಬೇಡವೇ? ಶೂಟಿಂಗ್ ಸೆಟ್​ ಆಗಿದ್ದರೂ ಕೂಡ ಅದನ್ನು ದೇವಸ್ಥಾನದ ರೀತಿ ತೋರಿಸಲಾಗುತ್ತದೆ. ಅಂಥ ದೇವಸ್ಥಾನದ ಜಾಗದಲ್ಲಿ ಚಪ್ಪಲಿ ಹಾಕಬಾರದು ಅನ್ನೋದು ಸಿನಿಮಾದವರಿಗೆ ಗೊತ್ತಾಗಲ್ವಾ? ಈ ಸಿನಿಮಾವನ್ನು ಬ್ಯಾನ್​ ಮಾಡಬೇಕು ಎಂದು ಸೆನ್ಸಾರ್​ ಮಂಡಳಿಗೆ ಮನವಿ ಮಾಡುತ್ತೇನೆ’ ಎಂದು ಕೂಡ ಲಕ್ಷ್ಮಣ್​ ಶಿವರಾಮಕೃಷ್ಣನ್​ ಟ್ವೀಟ್​ ಮಾಡಿದ್ದಾರೆ.

Salman Khan: ಬೆದರಿಕೆ ಹೆಚ್ಚಾದ ಬೆನ್ನಲ್ಲೇ ಬುಲೆಟ್​ಪ್ರೂಫ್​ ಕಾರು ಖರೀದಿಸಿದ ಸಲ್ಮಾನ್​ ಖಾನ್; ಇದರ ಬೆಲೆ ಎಷ್ಟು?

ಹೇಗಿದೆ ‘ಯೆಂಟಮ್ಮಾ..’ ಹಾಡು?

ಸಲ್ಮಾನ್​ ಖಾನ್​ ಮತ್ತು ಪೂಜಾ ಹೆಗ್ಡೆ ನಟಿಸಿರುವ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದ ಮೊದಲ ಹಾಡು ಕೆಲವು ಕಾರಣದಿಂದ ಟ್ರೋಲ್​ ಆಗಿತ್ತು. ಆದರೆ ಈಗ ‘ಯೆಂಟಮ್ಮಾ..’ ಸಾಂಗ್​ ಧೂಳೆಬ್ಬಿಸುತ್ತಿದೆ. ಈ ಹಾಡಿನಲ್ಲಿ ಸಲ್ಮಾನ್​ ಖಾನ್​, ರಾಮ್​ ಚರಣ್​, ದಗ್ಗುಬಾಟಿ ವೆಂಕಟೇಶ್​ ಅವರು ಪಂಚೆ ಎತ್ತಿಕಟ್ಟಿ ಕುಣಿದಿದ್ದಾರೆ. ಪಾಯಲ್​ ದೇವ್​ ಸಂಗೀತ ನಿರ್ದೇಶನ ಮಾಡಿರುವ ಈ ಹಾಡಿನಲ್ಲಿ ಹಿಂದಿ ಮತ್ತು ತೆಲುಗು ಮಿಶ್ರಿತ ಸಾಹಿತ್ಯ ಇದೆ. ಇದು ಅಭಿಮಾನಿಗಳಿಗೆ ಹೊಸ ಕಿಕ್​ ನೀಡುತ್ತಿದೆ. ಅಂದಹಾಗೆ, ರಾಮ್​ ಚರಣ್​ ಅವರು ಈ ಚಿತ್ರದಲ್ಲಿ ನಟಿಸಿಲ್ಲ. ಅವರು ಈ ಹಾಡಿನಲ್ಲಿ ಗೆಸ್ಟ್​ ಅಪಿಯರೆನ್ಸ್​ ನೀಡಿದ್ದಾರೆ ಅಷ್ಟೇ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:05 pm, Sun, 9 April 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ