AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆಗೆ ಗಂಡು ಮಗು ಜನಿಸಿದೆ ಅಂತ ಸುಳ್ಳು ಸುದ್ದಿ ಹಬ್ಬಲು ಕಾರಣವಾಯ್ತು ಈ ಫೋಟೋ

ಪರಸ್ಪರ ಪ್ರೀತಿಸಿ ಮದುವೆ ಆದ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಲಿದೆ. ಸದ್ಯದಲ್ಲೇ ಅವರು ತಂದೆ-ತಾಯಿ ಆಗಲಿದ್ದಾರೆ. ಆದರೆ ಈಗಾಗಲೇ ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಸುಳ್ಳು ಸುದ್ದಿ ಹರಿದಾಡುತ್ತಿವೆ. ದೀಪಿಕಾ ಪಡುಕೋಣೆ ಅವರಿಗೆ ಗಂಡು ಮಗು ಜನಿಸಿದೆ ಎಂದು ಕೆಲವರು ಫೇಕ್ ನ್ಯೂಸ್​ ಹರಡಿದ್ದಾರೆ.

ದೀಪಿಕಾ ಪಡುಕೋಣೆಗೆ ಗಂಡು ಮಗು ಜನಿಸಿದೆ ಅಂತ ಸುಳ್ಳು ಸುದ್ದಿ ಹಬ್ಬಲು ಕಾರಣವಾಯ್ತು ಈ ಫೋಟೋ
ಫೇಕ್​ ಫೋಟೋ, ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ
ಮದನ್​ ಕುಮಾರ್​
|

Updated on: Aug 01, 2024 | 11:07 PM

Share

ನಟಿ ದೀಪಿಕಾ ಪಡುಕೋಣೆ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ಹಾಗಾಗಿ ಅವರು ಸದ್ಯಕ್ಕೆ ಸಿನಿಮಾ ಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದಾರೆ. ತುಂಬು ಗರ್ಭಿಣಿ ಆಗಿರುವ ಅವರು ಆರೋಗ್ಯದ ಕಡೆಗೆ ಗಮನ ಹರಿಸಿದ್ದಾರೆ. ದೀಪಿಕಾ ಪಡುಕೋಣೆ ಜೊತೆ ಅವರ ಪತಿ ರಣವೀರ್​ ಸಿಂಗ್​ ಅವರು ಮೊದಲ ಮಗುವಿಗಾಗಿ ಕಾದಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಒಂದು ಗಾಸಿಪ್​ ಹಬ್ಬಿಸಿದ್ದಾರೆ. ದೀಪಿಕಾಗೆ ಗಂಡು ಮಗು ಜನಿಸಿದ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.

ನಕಲಿ ಫೋಟೋ ಮತ್ತು ವಿಡಿಯೋದ ಹಾವಳಿ ಜಾಸ್ತಿ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಲೈಕ್​ ಮತ್ತು ವೀವ್ಸ್ ಪಡೆಯಲು ಏನು ಬೇಕಿದ್ದರೂ ಮಾಡುವ ಜನರು ಇದ್ದಾರೆ. ಯಾರದ್ದೋ ಫೋಟೋವನ್ನು ಎಡಿಟ್​ ಮಾಡಿ, ಇದು ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್​ ಅವರ ಫೋಟೋ ಎಂದು ನಂಬಿಸುವ ಕೆಲಸ ನಡೆದಿದೆ. ಕೆಲವೆಡೆ ಈ ಫೋಟೋ ವೈರಲ್​ ಆಗಿದೆ.

ಸರಿಯಾಗಿ ಗಮನಿಸಿದರೆ ಇದು ನಕಲಿ ಫೋಟೋ ಎಂಬುದು ಗೊತ್ತಾಗುತ್ತದೆ. ಹಾಗಾಗಿ ದೀಪಿಕಾ ಪಡುಕೋಣೆ ಅವರ ಅಭಿಮಾನಿಗಳಿಗೆ ಈ ಬಗ್ಗೆ ಸ್ಪಷ್ಟನೆ ಸಿಕ್ಕಿದೆ. ಆದರೆ ಕೆಲವರು ಇದನ್ನೇ ನಿಜ ಎಂದು ನಂಬಿಕೊಂಡವರೂ ಇದ್ದಾರೆ. ದೀಪಿಕಾ ಪಡುಕೋಣೆ ಅವರು ಸೆಪ್ಟೆಂಬರ್​ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಇನ್ನು, ದೀಪಿಕಾ ಅವರಿಗೆ ಜನಿಸುವುದು ಗಂಡು ಮಗು ಅಥವಾ ಹೆಣ್ಣು ಮಗು ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ ಹೊಟ್ಟೆ ಮೇಲೆ ಕೈ ಇಟ್ಟ ಒರಿ; ಫ್ಯಾನ್ಸ್​ಗೆ ಕಿರಿಕಿರಿ

ಕೆಲವು ದಿನಗಳ ಹಿಂದೆ ಪಂಡಿತ್​ ಜಗನ್ನಾಥ್​ ಗುರೂಜಿ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಒಂದು ಭವಿಷ್ಯ ನುಡಿದಿದ್ದರು. ದೀಪಿಕಾ ಪಡುಕೋಣೆ-ರಣವೀರ್​ ಸಿಂಗ್​ ದಂಪತಿಗೆ ಗಂಡು ಮಗು ಜನಿಸಲಿದ್ದು, ಆ ಮಗು ತುಂಬಾ ಅದೃಷ್ಟವನ್ನು ತರಲಿದೆ ಎಂದು ಜಗನ್ನಾಥ್​ ಗುರೂಜಿ ಹೇಳಿದ್ದರು. ಅವರು ನುಡಿದಿರುವ ಈ ಭವಿಷ್ಯ ನಿಜವಾಗುತ್ತಾ ಅಥವಾ ಇಲ್ಲವಾ ಎಂಬುದನ್ನು ತಿಳಿಯುವ ಕೌತಕ ಅಭಿಮಾನಿಗಳಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!